ಕುಟುಂಬ ನೆನೆದು ಹೆಲ್ಮೆಟ್‌ ಧರಿಸಿ: ಭಾಗ್ಯವತಿ


Team Udayavani, Jan 15, 2020, 3:45 PM IST

hv-tdy-1

ಬ್ಯಾಡಗಿ: ಪೊಲೀಸರು ವಿಧಿಸುವ ದಂಡಕ್ಕೆ ಹೆದರಿ ಹೆಲ್ಮೆಟ್‌ ಧರಿಸುವುದಕ್ಕಿಂತ, ತಮ್ಮನ್ನೂ ಸೇರಿದಂತೆ ನಿಮ್ಮ ಕುಟುಂಬಕ್ಕಾಗಿ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಿ ಎಂದು ಸಿಪಿಐ ಭಾಗ್ಯವತಿ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಪಟ್ಟಣದ ನೆಹರು ವೃತ್ತದಲ್ಲಿ ಹೆಲ್ಮೆಟ್‌ ಜನಜಾಗೃತಿ ಅಭಿಯಾನ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ದ್ವಿಚಕ್ರ ವಾಹನಗಳ ಶೇ.80 ಕ್ಕೂ ಹೆಚ್ಚು ರಸ್ತೆ ಅಪಘಾತದಲ್ಲಿ ಹೆಲ್ಮೆಟ್‌ ಧರಿಸದೇ ಇರುವವವುದರಿಂದ ತಲೆಗೆ ಪೆಟ್ಟಾಗಿ ಸಾವಿಗೀಡಾದ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ ಯುವಕರ ಸಂಖ್ಯೆಯೇ ಅಧಿಕ ಎನ್ನುವುದು ಇನ್ನು ಆತಂಕಕಾರಿ ಸಂಗತಿ ಎಂದು ಹೇಳಿದರು.

ನ್ಯಾಯಾಲಯದ ಆದೇಶದಂತೆ ಬೈಕ್‌ ಸವಾರರಿಗೆ ಹೆಲ್ಮೆಟ್‌ ಕಡ್ಡಾಯಗೊಳಿಸಿದ್ದು, ತಮ್ಮನ್ನೂ ಸೇರಿದಂತೆ ಕುಟುಂಬದ ರಕ್ಷಣೆಗೆ ಹೆಲ್ಮೆಟ್‌ ಕಡ್ಡಾಯವಾಗಿ ಹಾಕಿಕೊಳ್ಳುವಂತೆ ಮನವಿ ಮಾಡಿದರು.

ದ್ವಿಚಕ್ರ ವಾಹನಗಳ ಸವಾರರು ಒಂದು ವೇಳೆ ಹೆಲ್ಮೆಟ್‌ ಧರಿಸದೇ ಸವಾರಿ ಮಾಡಿ ಅಪಘಾತಗಳಲ್ಲಿ ಮೃತಪಟ್ಟಲ್ಲಿ ವಿಮೆ ಪರಿಹಾರ ನೀಡುವಂತಹ ಕಂಪನಿಗಳೂ ಪರಿಹಾರ ನೀಡದೇ ತಕರಾರುಮಾಡುತ್ತಿವೆ. ಹೀಗಾಗಿ ಹೆಲ್ಮೆಟ್‌ ಕಾನೂನಾತ್ಮಕವಾದ ಪರಿಹಾರಗಳಿಗೂ ತೊಂದರೆ ನೀಡುತ್ತಿದ್ದು, ಕಡ್ಡಾಯವಾಗಿ ಧರಿಸಿ ತಮ್ಮ ಅಮೂಲ್ಯ ಜೀವ ರಕ್ಷಿಸಿಕೊಳ್ಳುವಂತೆ ಕರೆ ನೀಡಿದರು.

ಪಿಎಸ್‌ಐ ಮಹಾಂತೇಶ ಮಾತನಾಡಿ, ಹೆಲ್ಮೆಟ್‌ ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ನಮ್ಮ ಪೊಲೀಸ್‌ ಠಾಣೆ ಪರಿಣಾಮಕಾರಿ ಹೆಜ್ಜೆಗಳನ್ನಿಡುತ್ತಿದ್ದು, ದ್ವಿಚಕ್ರ ವಾಹನಗಳ ಸವಾರರ ಮೇಲೆ ಅಗತ್ಯ ಕ್ರಮಗಳನ್ನು ಜರುಗಿಸಲು ಹಿಂದೆ ಮುಂದು ನೋಡುವುದಿಲ್ಲ. ಎಲ್ಲರಿಗೂ ಕೊನೆಯ ಅವಕಾಶವನ್ನು ನೀಡಲಾಗಿದ್ದು, ಇನ್ಮುಂದೆ ಹೆಲ್ಮೆಟ್‌ ರಹಿತರಿಗೆ ದಂಡದ ಬಿಸಿ ತಟ್ಟಲಿದೆ ಎಂದು ಎಚ್ಚರಿಸಿದರು. ಸಿಬ್ಬಂದಿಗಳಾದ ಗಡಿಯಪ್ಪಗೌಡ, ಹನುಮಂತ ಸುಂಕದ ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.