ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ


Team Udayavani, Jun 29, 2019, 3:11 PM IST

hv-tdy-3..

ರಾಣಿಬೆನ್ನೂರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರಣವಾನಂದರಾಮ ಶ್ರೀಗಳ ನೇತೃತ್ವದಲ್ಲಿ ಆರೇಮಲ್ಲಾಪುರದಿಂದ ತಹಶೀಲ್ದಾರ್‌ ಕಚೇರಿ ವರೆಗೆ ಪಾದಯಾತ್ರೆ ನಡೆಯಿತು.

ರಾಣಿಬೆನ್ನೂರ: ವಿವಿಧ ಗ್ರಾಮದ ನಿವೇಶನ ರಹಿತರಿಗೆ ತುರ್ತಾಗಿ ನಿವೇಶನ ವಿತರಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ಅನಿವಾರ್ಯ ಎಂದು ಆರೇಮಲ್ಲಾಪುರದ ಶರಣಬಸವೇಶ್ವರ ಮಠದ ಪೀಠಾಧಿಪತಿ ಪ್ರಣವಾನಂದರಾಮ ಸ್ವಾಮೀಜಿ ಹೇಳಿದರು.

ಶುಕ್ರವಾರ ತಾಲೂಕಿನ ಆರೇಮಲ್ಲಾಪುರದ ಶ್ರೀಮಠದಿಂದ ನೂರಾರು ರೈತರೊಂದಿಗೆ ಪಾದಯಾತ್ರೆ ಮೂಲಕ ನಗರಕ್ಕೆ ಆಗಮಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಸತತ 5 ವರ್ಷ ಬರಗಾಲದಿಂದ ತತ್ತರಿಸುವ ತಾಲೂಕಿನ ರೈತರಿಗೆ 2017-18 ಮತ್ತು 2018-19 ನೇ ಸಾಲಿನ ಬೆಳೆವಿಮೆ ಮತ್ತು ಬೆಳೆ ಪರಿಹಾರ ಬಿಡುಗಡೆಗೊಳಿಸಬೇಕು. ಕಳೆದ ಅನೇಕ ವರ್ಷಗಳಿಂದ ಈ ತಾಲೂಕಿನಲ್ಲಿ ಸಕಾಲಕ್ಕೆ ಮಳೆಯಾಗದೆ ಫಸಲು ಕೈಗೆ ಬಾರದೆ ರೈತರು ಬಹಳಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದರು.

ಬೆಳೆವಿಮೆ, ಬೆಳೆಪರಿಹಾರ ನೀಡುವ ಮೂಲಕ ಸರ್ಕಾರ ರೈತರನ್ನು ಉಳಿಸಲು ಮುಂದಾಗಬೇಕು. ತಾಲೂಕಿನಲ್ಲಿ ವಲಸೆ ಹೋಗುವವರ ಸಂಖ್ಯೆ ದಿನೇ ದಿನೇ ಅಧಿಕವಾಗುತ್ತಿದೆ. ಅಂತಹ ಜನರನ್ನು ಗುರುತಿಸಿ ಅವರಿಗೆ ಉದ್ಯೋಗ ಕಲ್ಪಿಸಿ ಬದುಕಲು ಅವಕಾಶ ಮಾಡಿಕೊಡಬೇಕು. ಇಲ್ಲವಾದರೆ ವಲಸೆ ಹೋಗುವವರ ಕುಟುಂಬದ ಮಕ್ಕಳು ಶಿಕ್ಷಣದಿಂದಲೂ ವಂಚಿತವಾಗುತ್ತವೆ. ಅವರು ಪೋಷಕ ಮತ್ತು ಪಾಲಕರಿಗೆ ಉದ್ಯೋಗ ಖಾತ್ರಿಯಲ್ಲಿ ಹೆಚ್ಚಿನ ಉದ್ಯೋಗ ಕಲ್ಪಿಸಬೇಕೆಂದು ಶ್ರೀಗಳು ಒತ್ತಾಯಿಸಿದರು.

ಗ್ರಾಮದಲ್ಲಿರುವ 154ನೇ ಸರ್ವೇ ನಂಬರ್‌ನಲ್ಲಿ ಈಗಾಗಲೇ 17 ಎಕರೆ ಸೈಟ್ ನಿರ್ಮಾಣ ಮಾಡಲಾಗಿದೆ. 10 ಎಕರೆ ಜಾಗೆಯಲ್ಲಿ ನಿವೇಶನ ರಹಿತರಿಗೆ ಮಂಜೂರಾಗಿ 2 ವರ್ಷಗಳಾದರೂ ಸಹ ಈ ವರೆಗೂ ಏನೂ ಕಾರ್ಯಗತವಾಗಿಲ್ಲ. 25 ಎಕರೆ ಬೇರೆ ಇರುವ ಜಾಗೆಯಲ್ಲಿ 19 ಎಕರೆ ಹುಲ್ಲುಗಾವಲು ಇದ್ದು, ಇದರಲ್ಲೂ ಸಹ ನಿವೇಶನ ಮಾಡಬಹುದಾಗಿದೆ. ಈ ಬಗ್ಗೆ ತಾಲೂಕು ಮತ್ತು ಜಿಲ್ಲಾಡಳಿತ ತುರ್ತಾಗಿ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದರು.

ಬೆಳೆಪರಿಹಾರ ಮತ್ತು ಬೆಳೆವಿಮೆ ಸೇರಿದಂತೆ ತಾಲೂಕಿನ ನಿವೇಶನ ರಹಿತರಿಗೆ ನಿವೇಶನ ಕಲ್ಪಿಸುವಲ್ಲಿ ಅಧಿಕಾರಿಗಳು ಮೀನಮೇಷ ಹಾಗೂ ರಾಜಕೀಯ ಮಾಡಬಾರದು. ಸಂಕಷ್ಟದಲ್ಲಿರುವ ಸಾಮಾನ್ಯರನ್ನು ಕಾಪಾಡುವ ಜವಾಬ್ದಾರಿ ಅಧಿಕಾರಿಗಳ ಮೇಲಿದ್ದು, ಜವಾಬ್ದಾರಿ ಹಾಗೂ ಪ್ರಾಮಾಣಿಕತೆಯಿಂದ ತಮ್ಮ ಕರ್ತವ್ಯ ನಿಭಾಯಿಸಬೇಕು ಎಂದರು.

ಬಂಜಾರ ಸಮಾಜದ ಸೇವಾಲಾಲ್ ಸರ್ದಾರ್‌ ಮಹಾರಾಜರು, ಶಿವಣ್ಣ ಸಣ್ಣಬೊಮ್ಮಾಜಿ, ನಿಂಗಪ್ಪ ಹಲವಾಗಲ, ಗಾಳೆಪ್ಪ ಮರಿಯಮ್ಮನವರ, ಮಂಜುನಾಥ ವಡ್ಡರ, ಭಾಗ್ಯಲಕ್ಷಿ ್ಮೕ ಶಿವಳ್ಳಿ, ರೇಣುಕಮ್ಮ ಹಲವಾಗಲ, ಕರಬಸವ್ವ ಹಳ್ಳಳ್ಳಿ, ಲಲಿತವ್ವ ಚಳಗೇರಿ, ಗೌರಮ್ಮ ನಿಟ್ಟೂರು, ಮಂಜುಳಾ ಮಣಕೂರ, ತಿರುಕಮ್ಮ, ಪ್ರೇಮಕ್ಕ, ಮಂಜವ್ವ, ಲಕ್ಷ ್ಮವ್ವ, ಕಿರಣ ಗೂಳೇದ, ಅಶೋಕ ಸೂರ್ವೆ, ರಾಮಚಂದ್ರಪ್ಪ ಬೇವಿನಮರದ ಹಾಗೂ ಇತರರಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.