ಹಿರೇಕೆರೂರ: ಇಂದಿರಾ ಕ್ಯಾಂಟೀನ್‌ನಲ್ಲಿ ಗುಣಮಟ್ಟದ ಆಹಾರ


Team Udayavani, Jan 3, 2024, 6:25 PM IST

ಹಿರೇಕೆರೂರ: ಇಂದಿರಾ ಕ್ಯಾಂಟೀನ್‌ನಲ್ಲಿ ಗುಣಮಟ್ಟದ ಆಹಾರ

ಉದಯವಾಣಿ ಸಮಾಚಾರ
ಹಿರೇಕೆರೂರ: ಪಟ್ಟಣದ ಇಂದಿರಾ ಕ್ಯಾಂಟೀನ್‌ನಲ್ಲಿ ಉತ್ತರ ಕರ್ನಾಟಕ ಶೈಲಿಯ ಆಹಾರದ ಹೊಸ ಮೆನುವಿ ನಂತೆ ಆಹಾರ ವಿತರಣೆಗೆ ಶಾಸಕ ಯು.ಬಿ.ಬಣಕಾರ ಚಾಲನೆ ನೀಡಿದರು.

ಪಟ್ಟಣದ ತಹಶೀಲ್ದಾರ್‌ ಕಚೇರಿ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ ನಲ್ಲಿ ಆಹಾರ ಸೇವಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಇಂದಿರಾ ಕ್ಯಾಂಟೀನ್‌ ಗಳನ್ನು ಮೇಲ್ದರ್ಜೆಗೇರಿಸುವ ಭರವಸೆ ನೀಡಿತ್ತು. ಈಗ ಇಂದಿರಾ ಕ್ಯಾಂಟೀನ್‌ ನಲ್ಲಿ ತಿಂಡಿ ಹಾಗೂ ಊಟದ ಮೆನು ಬದಲಾವಣೆ ಮಾಡಿದ್ದು, ಹೋಟೆಲ್‌ ಮೆನುವನ್ನೂ ಮೀರಿಸುವಂತಿದೆ. ಕಡಿಮೆ ಹಣಕ್ಕೆ ಗುಣಮಟ್ಟದ ಸ್ವಾದಿಷ್ಟಕರ ಆಹಾರ ಲಭ್ಯವಾಗಲಿದೆ. ಕೇವಲ ಅನ್ನ, ಸಾಂಬಾರ್‌, ಊಟಕ್ಕೆ ಮಾತ್ರ ಸೀಮಿತವಾಗಿದ್ದ ಇಂದಿರಾ ಕ್ಯಾಂಟೀನ್‌ನ ಆಹಾರ ಪೂರೈಕೆಯಲ್ಲಿ ಈಗ ಬದಲಾವಣೆ ಆಗಲಿದೆ ಎಂದರು.

ಕಾಂಗ್ರೆಸ್‌ ಸರ್ಕಾರ ಬಂದ ಕೂಡಲೇ ಆಹಾರ ಮೆನು ಬದಲಾವಣೆ ಮಾಡಲಾಗಿದ್ದು, ಇಂದಿರಾ ಕ್ಯಾಂಟೀನ್‌ ನಲ್ಲಿ ಹೋಟೆಲ್‌ ತರಹ ಮೆನು ಕೂಡ ಸಿದ್ಧವಾಗಿದೆ. ಇಂದಿರಾ ಕ್ಯಾಂಟೀನ್‌ ನಲ್ಲಿ ಪ್ರಾದೇಶಿಕ ವಿಭಾಗವಾರು ಎಲ್ಲ ಜನರಿಗೂ ಆಹಾರ ಲಭ್ಯವಾಗುವಂತೆ ಮೆನು ಸಿದ್ಧಪಡಿಸಲಾಗಿದೆ ಎಂದರು.

ಪಪಂ ಸದಸ್ಯರಾದ ಸುಧಾ ಚಿಂದಿ, ಕವಿತಾ ಹಾರ್ನಳ್ಳಿ, ಸನಾವುಲ್ಲಾ ಮಕಾನಾರ್‌, ಪಪಂ ಮುಖ್ಯಾಧಿಕಾರಿ ಕೋಡಿ ಭೀಮ
ರಾಯ್‌ ಸೇರಿದಂತೆ ಇತರರಿದ್ದರು.

ಕ್ಯಾಂಟೀನ್‌ ಮೆನು: ಭಾನುವಾರ ಬೆಳಗಿನ ಉಪಾಹಾರ ಇಡ್ಲಿ-ಚಟ್ನಿ, ಕೇಸರಿಬಾತ್‌, ಖಾರಾ ಬಾತ್‌, ಮಧ್ಯಾಹ್ನ ಊಟಕ್ಕೆ ಅನ್ನ
ಅಲಸಂದಿ ಕಾಳು ಸಾಂಬಾರ್‌ ಹಾಗೂ ಕೀರು, ರಾತ್ರಿ ಊಟಕ್ಕೆ ಅನ್ನ ಮೊಳಕೆಕಾಳು ಸಾಂಬಾರ್‌ ಹಾಗೂ ಜೋಳದ ರೊಟ್ಟಿ,
ಸೊಪ್ಪಿನ ಪಲ್ಯ,

ಸೋಮವಾರ ಬೆಳಗಿನ ಉಪಾಹಾರ ಇಡ್ಲಿ-ಚಟ್ನಿ, ಮಂಡಕ್ಕಿ, ಬಜ್ಜಿ, ಮಧ್ಯಾಹ್ನ ಊಟಕ್ಕೆ ಅನ್ನ, ಮೂಲಂಗಿ
ಸಾಂಬಾರ್‌ ಹಾಗೂ ಮೊಸರನ್ನ, ರಾತ್ರಿ ಊಟಕ್ಕೆ ಅನ್ನ ಹಿರೇಕಾಯಿ ಸಾಂಬಾರ್‌, ಮೊಸರನ್ನ, ಚಪಾತಿ- ಸಾಗು.

ಮಂಗಳವಾರ ಬೆಳಗಿನ ಉಪಾಹಾರ ಇಡ್ಲಿ-ಸಾಂಬಾರ್‌, ಖಾರಾ ಬಾತ್‌-ಚಟ್ನಿ, ಮಧ್ಯಾಹ್ನ ಊಟಕ್ಕೆ ಅನ್ನ, ಬದನೆಕಾಯಿ
ಸಾಂಬರ್‌ ಹಾಗೂ ರಾಗಿ ಅಂಬಲಿ, ರಾತ್ರಿ ಊಟಕ್ಕೆ ಜೋಳದ ರೊಟ್ಟಿ, ಸೊಪ್ಪು ಪಲ್ಯ, ರಾಗಿ ಅಂಬಲಿ, ಅನ್ನ ಕುಂಬಳಕಾಯಿ
ಸಾಂಬಾರ್‌ ಹಾಗೂ ರಾಗಿ ಅಂಬಲಿ, ಚಪಾತಿ, ಸಾಗು.

ಬುಧವಾರ ಬೆಳಗಿನ ಉಪಾಹಾರ ಇಡ್ಲಿ-ಕರಿಬೇವು ಚಟ್ನಿ, ಅವಲಕ್ಕಿ ಚಟ್ನಿ, ಮಧ್ಯಾಹ್ನ ಊಟ ಅನ್ನ, ಬೀನ್ಸ್‌ ಸಾಂಬಾರ್‌ ಹಾಗೂ ಮೊಸರನ್ನ, ರಾತ್ರಿ ಊಟಕ್ಕೆ ಚಪಾತಿ, ಸಾಗು ಹಾಗೂ ಮೊಸರನ್ನ, ಅನ್ನ, ಮೂಲಂಗಿ ಸಾಂಬಾರ್‌ ಹಾಗೂ ಚಪಾತಿ ಸಾಗು.

ಗುರುವಾರ ಬೆಳಗಿನ ಉಪಾಹಾರ ಇಡ್ಲಿ ಸಾಂಬಾರ್‌, ವೆಜ್‌ ಪಲಾವ್‌ ಚಟ್ನಿ, ಮಧ್ಯಾಹ್ನ ಅನ್ನ ಮೊಳಕೆಕಾಳ ಸಾಂಬಾರ್‌ ಹಾಗೂ ಕೀರು, ರಾತ್ರಿ ಊಟಕ್ಕೆ ಜೋಳದ ರೊಟ್ಟಿ, ಸೊಪ್ಪು ಪಲ್ಯ, ಕೀರು, ಅನ್ನ ಬದನೆಕಾಯಿ ಪಲ್ಯ, ಜೋಳದ ರೊಟ್ಟಿ, ಸೊಪ್ಪು ಪಲ್ಯ.

ಶುಕ್ರವಾರ ಬೆಳಗಿನ ಉಪಾಹಾರ ಇಡ್ಲಿ ಸಾಂಬಾರ್‌, ಚಿತ್ರಾನ್ನ ಚಟ್ನಿ, ಮಧ್ಯಾಹ್ನ ಊಟಕ್ಕೆ ಅನ್ನ ಹಿರೇಕಾರಿ ಸಾಂಬಾರ್‌
ಹಾಗೂ ರಾಗಿ ಅಂಬಲಿ, ಚಪಾತಿ ಸಾಗು  ಹಾಗೂ ರಾಗಿ ಅಂಬಲಿ, ಅನ್ನ ಅಲಸಂದಿ ಕಾಳು ಸಾಂಬಾರ್‌ ಹಾಗೂ ಚಪಾತಿ ಸಾಗು.

ಶನಿವಾರ ಬೆಳಗಿನ ಉಪಾಹಾರ  ಇಡ್ಲಿ ಸಾಂಬಾರ್‌, ಆಲೂ ಬಾತ್‌ ಚಟ್ನಿ, ಮಧ್ಯಾಹ್ನ ಊಟಕ್ಕೆ ಅನ್ನ ಕುಂಬಳಕಾಯಿ ಸಾಂಬಾರ್‌ ಹಾಗೂ ಕೀರು, ರಾತ್ರಿ ಊಟಕ್ಕೆ ಜೋಳದ ರೊಟ್ಟಿ, ಸೊಪ್ಪು ಪಲ್ಯ, ಕೀರು, ಅನ್ನ ನುಗ್ಗೆಕಾಯಿ ಸಾಂಬಾರ್‌ ಹಾಗೂ ಜೋಳದ ರೊಟ್ಟಿ ಸೊಪ್ಪು ಪಲ್ಯ ಇಂದಿರಾ ಕ್ಯಾಂಟೀನ್‌ನಲ್ಲಿ ಸವಿಯಬಹುದಾಗಿದೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.