ಸಿಎಂ “ದಂಗೆ’ ಏಟು ಸರಿಯಾಗಿದೆ: ಮನಗೂಳಿ
Team Udayavani, Sep 22, 2018, 6:15 AM IST
ಹಾವೇರಿ: ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿ ನಾಯಕರ ವಿರುದ್ಧ ದಂಗೆ ಏಳಬೇಕು ಎಂದು ಹೇಳುವ
ಮೂಲಕ ಯಡಿಯೂರಪ್ಪ ಅವರಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ತೋಟಗಾರಿಕೆ ಸಚಿವ ಎಂ.ಸಿ.ಮನಗೂಳಿ ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪದೇ ಪದೆ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ, ಶಾಸಕರಿಗೆ ಆಮಿಷವೊಡ್ಡುವ ಕೆಲಸ ಮಾಡುತ್ತಿರುವವರಿಗೆ ಮುಖ್ಯಮಂತ್ರಿ ದಂಗೆ ಏಳಲು ಹೇಳಿದ್ದು ಸರಿಯಾಗಿಯೇ ಇದೆ ಎಂದರು.
ಮುಖ್ಯಮಂತ್ರಿಯಾಗಿ ಈ ರೀತಿ ಹೇಳುವುದು ಎಷ್ಟು ಸರಿ ಎಂದು ಪತ್ರಕರ್ತರು ಕೇಳಿದಾಗ, ತಕ್ಷಣ ಉಲ್ಟಾ ಹೊಡೆದ
ಸಚಿವರು, ಸಿಎಂ ಕುಮಾರಸ್ವಾಮಿ ನನ್ನ ಪ್ರಕಾರ ಹಾಗೆ ಹೇಳಿಯೇ ಇಲ್ಲ ಎಂದರು. ಬಳಿಕ ಪತ್ರಕರ್ತರು “ದಂಗೆ’
ಹೇಳಿಕೆಯನ್ನು ಸ್ವತಃ ಮುಖ್ಯಮಂತ್ರಿಯವರು ಸಮರ್ಥಿಸಿಕೊಂಡಿದ್ದಾರೆ ಎಂದಾಗ “ಅವರು ಹಾಗೆ ಹೇಳಿದ್ದರೆ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ’ಎಂದು ಜಾರಿಕೊಂಡರು. ಯಡಿಯೂರಪ್ಪನವರ ಸದ್ಯದ ಪರಿಸ್ಥಿತಿ ನೀರಿನಿಂದ ಹೊರ ತೆಗೆದ ಮೀನಿನಂತಾಗಿದೆ.
ಶತಾಯಗತಾಯ ಅಧಿಕಾರ ಹಿಡಿಯಬೇಕೆಂಬ ಧಾವಂತದಲ್ಲಿದ್ದು ಅದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಸಮ್ಮಿಶ್ರ ಸರ್ಕಾರ ಯಾವುದೇ ಕಾರಣಕ್ಕೂ ಉರುಳುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ