ಹುಲಿಕಟ್ಟಿ:ವರುಣನ ಕೃಪೆಗಾಗಿ ಪ್ರಾರ್ಥಿಸಿ ಕಪ್ಪೆಗಳ ಮದುವೆ


Team Udayavani, Jun 10, 2019, 2:53 PM IST

haveri-tdy-4..

ಬಂಕಾಪುರ: ಹುಲಿಕಟ್ಟಿ ಗ್ರಾಮದಲ್ಲಿ ವರುಣನ ಕೃಪೆಗಾಗಿ ಕಪ್ಪೆಗಳ ಮದುವೆ ಮಾಡಲಾಯಿತು.

ಬಂಕಾಪುರ: ಪರಮಾತ್ಮನಿಂದ ವರವನ್ನು ಪಡೆದುಕೊಂಡಿರುವ ಕಪ್ಪೆ ಮತ್ತು ಕತ್ತೆಗಳು ತಮಗೆ ಕುಡಿಯಲು ನೀರಿನ ಕೊರತೆ ಕಂಡುಬಂದಾಗ ವರುಣನನ್ನು ಆಕರ್ಷಿಸುವ ಶಕ್ತಿ ಹೊಂದಿವೆ ಎಂದು ಫಕ್ಕೀರಸ್ವಾಮಿ ಹಿರೇಮಠ ಶಾಸ್ತ್ರೀಗಳು ಹೇಳಿದರು.

ಹುಲಿಕಟ್ಟಿ ಗ್ರಾಮದಲ್ಲಿ ಸಮೃದ್ಧ ಮಳೆ, ಬೆಳೆಗಾಗಿ ಪ್ರಾರ್ಥಿಸಿ ಕಪ್ಪೆಗಳ ಮದುವೆ ಸಮಾರಂಭದಲ್ಲಿ ಮಾತನಾಡಿದ ಅವರು, ಕಷ್ಟ ಬಂದಾಗ ಕತ್ತೆ ಕಾಲು ಹಿಡಿ ಎಂಬ ನಾಣ್ಣುಡಿಯಂತೆ ನಮ್ಮ ಪೂರ್ವಜರ ಕಾಲದಿಂದ ನಡೆದು ಬಂದ ಸಂಪ್ರದಾಯಗಳು ಇಂದಿಗೂ ಫಲ ನೀಡುತ್ತಿವೆ. ಆದ್ದರಿಂದ ಕಪ್ಪೆಗಳ ಮದುವೆ ಮಾಡಿದರೆ ಮಳೆ ಬರುತ್ತದೆ ಎಂಬ ವಿಶ್ವಾಸ ಸಾರ್ವಜನಿಕರಲ್ಲಿ ಪುರಾಣ ಕಾಲದಿಂದಲೂ ಮುಂದುವರೆದುಕೊಂಡು ಬಂದಿದೆ ಎಂದು ಹೇಳಿದರು.

ತನ್ನಿಮಿತ್ತ ಗ್ರಾಮದ ಹೊರವಲಯದಲ್ಲಿರುವ ಪ್ರಾಚೀನ ಕಾಲದ ಕಲ್ಮೇಶ್ವರ ದೇವರಿಗೆ ರೈತಾಪಿ ಕುಟುಂಬದವರಿಂದ ಪಂಚಾಮೃತ ಅಭಿಷೇಕ, ಸಹಸ್ರ ಬಿಲ್ವಾರ್ಚನೆ, ಸಹಸ್ರ ನಾಮಾವಳಿ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. ಗ್ರಾಮಸ್ಥರು ಕಪ್ಪೆಗಳ ಮದುವೆಯನ್ನು ವಿಧಿ ವಿಧಾನಗಳ ಪ್ರಕಾರ ಕಪ್ಪೆಗಳಿಗೆ ಅರಿಷಿಣ ಕೊಂಬು ಕಟ್ಟಿ (ತಾಳಿ) ಹೂ ಮಾಲೆಗಳನ್ನು ಹಾಕಿ ಮದುವೆಯ ಗಟ್ಟಿ ಮೇಳ, ಮಂತ್ರೋಪದೇಶದೊಂದಿಗೆ ಅಕ್ಷತೆ ಹಾಕಿ ಮದುವೆ ಮಾಡಿದರು.

ಮುತ್ತೈದಿಯರು ಆರತಿ ಮಾಡಿ ಗಂಡಂದಿರ ಹೆಸರನ್ನು ವಡಪಿನೊಂದಿಗೆ ಹೇಳುವ ಮೂಲಕ ಮದುವೆಯ ಸೊಬಗನ್ನು ಹೆಚ್ಚಿಸಿದರು. ನಂತರ ಗ್ರಾಮದ ಯುವಕರು ಕಪ್ಪೆಗಳನ್ನು ತಲೆಯ ಮೇಲೆ ಹೊತ್ತು ಸಕಲ ವಾದ್ಯ ಮೇಳಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದರು. ಮದುವೆಯಾದ ಕಪ್ಪೆಗಳನ್ನು ಬಾವಿಯಲ್ಲಿ ಬಿಟ್ಟು ಸಮೃದ್ಧ ಮಳೆ ತರಸಿ ಒಳ್ಳೆಯ ಫಸಲು ನೀಡುವಂತೆ ಪ್ರಾರ್ಥಿಸಿದರು. ನಂತರ ಅನ್ನ ಸಂತರ್ಪಣೆ ನಡೆಯಿತು.

ಪೊಲೀಸ್‌ ಬೀಟ್ ಪೇದೆಗಳಾದ ತ್ರೀವೇಣಿ ಬೆಳ್ಳಿಗಟ್ಟಿ, ಟಿ.ಪಿ. ಬಂಡೇರ, ಮುಖಂಡರಾದ ಗಂಗಾಧರ ಗಡ್ಡೆ, ನಿಂಗಪ್ಪ ಬನ್ನೂರ, ಶಂಕರಗೌಡ ಪಾಟೀಲ, ಉಳವಯ್ಯ ಚಿಗರಿಮಠ, ಕಲ್ಲಪ್ಪ ಮೆಳ್ಳಳ್ಳಿ, ಬಸವರಾಜ ಕುಳೆನೂರ, ಶಿವಲಿಂಗಪ್ಪ ಕೊಳಲ, ರಮೇಶಗೌಡ ಪಾಟೀಲ, ನಾಗನಗೌಡ ಪಾಟೀಲ, ಬೀರಪ್ಪ ಹೆಗಡೆ, ಚಂದ್ರುಗೌಡ ಪಾಟೀಲ, ಸೋಮಪ್ಪ ಹೆಗಡೆ, ಹೊನ್ನಪ್ಪ ಹೊನ್ನತ್ತಿ ಸೇರಿದಂತೆ ಭಜನಾ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.