ಸಂಪರ್ಕ ಸಾಧನೆ ಹೆಚ್ಚಾದಂತೆ ಮಾನವೀಯ ಸಂಬಂಧ ಕ್ಷೀಣ


Team Udayavani, Sep 29, 2018, 5:10 PM IST

29-sepctember-18.gif

ಹಾವೇರಿ: ಹೊಸ ಬರಹಗಾರರಿಗೆ ಉತ್ತೇಜನ ಕೊಡುವ ಉದ್ದೇಶದಿಂದ ‘ಸಂಕ್ರಮಣ ಸಾಹಿತ್ಯ ಬಳಗ’ ಆರಂಭಗೊಂಡಿದ್ದು ಇಲ್ಲಿಯ ಸರಕಾರಿ ನೌಕರರ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಹಿರಿಯ ಲೇಖಕ ಪ್ರೊ| ಚಂದ್ರಶೇಖರ ಪಾಟೀಲ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಚಂಪಾ, ಇಂದು ಸಂಪರ್ಕ ಸಾಧನೆಗಳು ಹೆಚ್ಚಾಗಿವೆ. ಆದರೆ, ಮಾನವೀಯ ಸಂಬಂಧಗಳು ಮಾತ್ರ ಕಡಿಮೆಯಾಗುತ್ತಿವೆ. ತಾತ್ಕಾಲಿಕ ಸುಖ ಮತ್ತು ಪ್ರಸಿದ್ಧಿ ಕೊಡುವ ವಾಟ್ಸಪ್‌, ಫೇಸ್‌ಬುಕ್‌ ಗಳಿಗಿಂತ ಮುದ್ರಣ ಸಾಹಿತ್ಯ ಕೈಗೆ ಸಿಗಬೇಕು. ಇದಕ್ಕಾಗಿ ‘ಸಂಕ್ರಮಣ ಸಾಹಿತ್ಯ ಬಳಗ’ ನಾಡಿನಲ್ಲಿ ಹೊಸ ಹಾಗೂ ದೊಡ್ಡ ವೇದಿಕೆಯಾಗಲಿದೆ ಎಂದರು.

ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಳಗ ಆರಂಭವಾಗಲಿದ್ದು ಈಗಾಗಲೇ ಗದಗ, ಹಾವೇರಿ ಹಾಗೂ ದಾವಣಗೆರೆಯಲ್ಲಿ ಪ್ರಾರಂಭವಾಗಿವೆ. ಕೇವಲ 10 ಬರಹಗಾರರು ಇದ್ದರೆ ಸಾಕು, ತಿಂಗಳಿಗೊಂದು ಕಾರ್ಯಕ್ರಮ ಜರುಗಿಸಬೇಕು. ಪುಸ್ತಕ ಚರ್ಚೆ, ವಿಮರ್ಶೆ ಹಾಗೂ ಸಮಕಾಲೀನ ಸಾಂಸ್ಕೃತಿಕ ಸಂದರ್ಭದ ಬಗ್ಗೆ ಚರ್ಚೆ ನಡೆಯಬೇಕೆಂದು ಚಂಪಾ ಹೇಳಿದರು.

ಬಹು ಮುಖ್ಯವಾಗಿ ಯುವ ಬರಹಗಾರರ ಪುಸ್ತಕಗಳ ಪ್ರಕಟಣೆ ಮತ್ತು ವಿತರಣೆ ವ್ಯವಸ್ಥೆಯನ್ನು ‘ಸಂಕ್ರಮಣ ಸಾಹಿತ್ಯ ಬಳಗ’ ವಹಿಸಿ ಕನಿಷ್ಠ 300 ಪ್ರತಿಗಳನ್ನು ನಾಡಿನ ಎಲ್ಲ ಘಟಕಗಳಿಗೆ ಮಾರಾಟದ ರೂಪದಲ್ಲಿ ತಲುಪಿಸಲಾಗುವುದು ಎಂದರು. 84ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಿಯೋಜನೆಗೊಂಡ ಡಾ| ಚಂದ್ರಶೇಖರ ಕಂಬಾರ ಕುರಿತು ಮಾತನಾಡಿದ ಚಂಪಾ, ಕಂಬಾರರು ಒಬ್ಬ ಹಳ್ಳಿ ಮೂಲದಿಂದ ಬಂದ ಸಹಜ ಸಾಹಿತಿ. ತಮ್ಮ ಕಾವ್ಯ ನಾಟಕ ಕಾದಂಬರಿಗಳಲ್ಲಿ ಉತ್ತರ ಕರ್ನಾಟಕದ ಭಾಷಾ ಸೊಗಡನ್ನು ಜನಪದ ಸತ್ವದ ಮೂಲಕ ಸೂರೆಗೊಂಡವರು ಎಂದರು.

ಈ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಕರ್ನಾಟಕ ಲಲಿತ ಕಲಾ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತ ಕಲಾವಿದ ಕರಿಯಪ್ಪ ಹಂಚಿನಮನಿಯವರನ್ನು ಸನ್ಮಾನಿಸಲಾಯಿತು. ಪ್ರೊ| ಧರಣೇಂದ್ರ ಕರಕುರಿ, ಡಾ| ಜೆ.ಜಿ. ದೇವಧರ, ಪ್ರಕಾಶ ಮನ್ನಂಗಿ, ರೇಣುಕಾ ಗುಡಿಮನಿ, ವೈ.ಬಿ. ಆಲದಕಟ್ಟಿ ಹಾಗೂ ಸಿದ್ದಾಪುರದ ಗಂಗಾಧರ ಕೊಳಗಿ ಮಾತನಾಡಿದರು. 

ಸಮಾರಂಭದಲ್ಲಿ ಡಾ| ವಿ.ಪಿ. ದ್ಯಾಮಣ್ಣನವರ, ಸಿ.ಆರ್‌. ಮಾಳಗಿ, ಪರಿಮಳಾ ಜೈನ, ಸಿದ್ದುಮತಿ ನೆಲವಿಗಿ, ಮಲ್ಲಿಕಾರ್ಜುನ ಹಿಂಚಿಗೇರಿ, ಸಿ.ಎ. ಕೂಡಲಮಠ, ಎಸ್‌. ಆರ್‌. ಹಿರೇಮಠ, ಸಿ.ಎಸ್‌. ಮರಳಿಹಳ್ಳಿ, ವಿ.ಎಂ. ಪತ್ರಿ, ಮಾಲತೇಶ ಅಂಗೂರ, ಜಿ.ಎಂ. ಓಂಕಾರಣ್ಣನವರ ಮುಂತಾದವರು ಪಾಲ್ಗೊಂಡಿದ್ದರು.

‘ಸಂಕ್ರಮಣ ಸಾಹಿತ್ಯ ಬಳಗ’ ಸಂಚಾಲಕರನ್ನಾಗಿ ಕೃಷ್ಣಾ ಜವಳಿ, ವಾಗೀಶ ಹೂಗಾರ ಹಾಗೂ ಪುಷ್ಪಾ ಶಲವಡಿಮಠ ಅವರನ್ನು ಆಯ್ಕೆ ಮಾಡಲಾಯಿತು. ಲೇಖಕಿ ರಾಜೇಶ್ವರಿ ಸಾರಂಗಮಠ ಸ್ವಾಗತಿಸಿದರು. ಪೃಥ್ವಿರಾಜ ಬೆಟಗೇರಿ ನಿರ್ವಹಿಸಿದರು. ವಾಗೀಶ ಹೂಗಾರ ವಂದಿಸಿದರು.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.