ನಾನು ಯಾರಿಗೂ ಹೆದರುವುದಿಲ್ಲ: ಶಿಗ್ಗಾವಿಯಲ್ಲಿ ಸಿಎಂ ಬೊಮ್ಮಾಯಿ


Team Udayavani, Mar 26, 2023, 3:00 PM IST

ನಾನು ಯಾರಿಗೂ ಹೆದರುವುದಿಲ್ಲ: ಶಿಗ್ಗಾವಿಯಲ್ಲಿ ಸಿಎಂ ಬೊಮ್ಮಾಯಿ

ಹಾವೇರಿ: ಮೀಸಲಾತಿ ವಿಚಾರದಲ್ಲಿ ಗುರುಗಳ ಮೇಲೆ ಸಿಎಂ ಒತ್ತಡ ಹಾಕಿದ್ದಾರೆಂದು ವಿರೋಧ ಪಕ್ಷದ ಅಧ್ಯಕ್ಷರು ಹೇಳಿದ್ದಾರೆ. ಆದರೆ ಅಂತಹ ಕೆಲಸ ಮಾಡುವ ಅಗತ್ಯ ನನಗಿಲ್ಲ. ರಾಜಕಾರಣದಿಂದಲೇ ಮೀಸಲಾತಿ ತಡವಾಗಿದೆ. ಪ್ರಮಾಣ ಮಾಡಿ ಹೇಳುತ್ತೇನೆ ನಾನು ಯಾರಿಗು ಒತ್ತಡ ಹಾಕಿಲ್ಲ. ನಾನು ಯಾರಿಗೂ ಹೆದರುವುದಿಲ್ಲ ಎಂದು ಮುಖ್ಯಂಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಶಿಗ್ಗಾವಿಯಲ್ಲಿ ಪಂಚಮಸಾಲಿ ಸಮಾಜದ ಸಮುದಾಯ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನ್ಯಾಯ ಸಮ್ಮತವಾಗಿ ಮೀಸಲಾತಿ ತೀರ್ಮಾನ ಮಾಡಿದ್ದೇವೆ. ಈ ಬೇಡಿಕೆಗೆ ಸದಾ ಕಾಲ ನಮ್ಮ ಜೊತೆಗೆ ಚರ್ಚೆ ಮಾಡಿಕೊಂಡು ಬಂದಿದ್ದಾರೆ ವಚನಾನಂದ ಶ್ರೀ. ಈ ವಿಚಾರದಲ್ಲಿ ಬಹಳ ದೊಡ್ಡ ಪಾತ್ರ ವಚನಾನಂದ ಶ್ರೀಗಳದ್ದು ಇದೆ. ಮತ್ತೊಬ್ಬ ಗುರುಗಳು ಹೋರಾಟ ಮಾಡಿದ್ದರು, ಆ ಹೋರಾಟದ ಒತ್ತಡವು ಇತ್ತು ಎಂದರು.

ಎಲ್ಲಾ ಸಮುದಾಯದವರಿಗೆ ನ್ಯಾಯ ಕೊಡಬೇಕು. ಯಾವುದೇ ದಿಟ್ಟ ಕ್ರಮ ಕೈಗೊಳ್ಳಲು ಬೊಮ್ಮಾಯಿ ಹಿಂದೆ ಮುಂದೆ ನೊಡಲ್ಲ. ಹಿಂದೆ 2016 ರಲ್ಲಿ ಈ ಅರ್ಜಿ ಕಾಂಗ್ರೆಸ್ ನವರು ತಿರಸ್ಕಾರ ಮಾಡಿದ್ದರು. ಇದು ಒಂದು ಸಮುದಾಯದ ಪ್ರಶ್ನೆ ಅಲ್ಲ ಚುನಾವಣೆಗಾಗಿ ಸಣ್ಣ ರಾಜಕಾರಣ ಮಾಡುವುದು ನಮ್ಮ ಡಿಕ್ಷನರಿಯಲ್ಲಿಲ್ಲ. ಜೇನುಗೂಡಿಗೆ ಕೈ ಹಾಕಿ, ಜೇನು ಕಡಿದರು ಪರವಾಗಿಲ್ಲವೆಂದು ನ್ಯಾಯ ಕೊಟ್ಟಿದ್ದೇನೆ. ನಾನು ಮೀಸಲಾತಿ ನೀಡುವುದನ್ನು ಮುಂದಕ್ಕೆ ಹಾಕಬಹುದಾಗಿತ್ತು, ನನ್ನ ಜಾಯಮಾನ ಅದಲ್ಲ, ಸಮಸ್ಯೆ ಬಗೆಹರಿಸುವುದು ಎಂದು ಹೇಳಿದರು.

ಪಂಚಮಸಾಲಿ ಸಮುದಾಯದ ಋಣ ನನ್ನ ಮೇಲಿದೆ. ಹಲವು ನಿಗಮಗಳನ್ನು ಮಾಡಿದ್ದೇನೆ. ಸರ್ವರಿಗೂ ಸಮಪಾಲು ತತ್ವದಡಿ ಕೆಲಸ ಮಾಡುತ್ತಿದ್ದೆನೆ. ಆಶೀರ್ವಾದ ಇರಲಿ. ಇದು ಅಭಿವೃದ್ಧಿ ಪಯಣ, ಇಲ್ಲಿಗೆ ನಿಂತಿಲ್ಲ ಮುಂದುವರಿಯುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

D K SHI 1

ಡಿಕೆಶಿ: CBI ತನಿಖೆಗೆ ತಡೆ ವಿಸ್ತರಣೆ

Daily Horoscope; ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ

Daily Horoscope; ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ

SCHOOL TEA-STUDENTS

ಜೂ. 6ರಿಂದ ಶಿಕ್ಷಕರ ವರ್ಗಾವಣೆ: July 31ಕ್ಕೆ ಎಲ್ಲ ಪ್ರಕ್ರಿಯೆ ಮುಕ್ತಾಯ

EDU DEPT

ಶಿಕ್ಷಣ ಇಲಾಖೆ: 22 ಅಧಿಕಾರಿಗಳಿಗೆ ಭಡ್ತಿ, ವರ್ಗ

power lines

Congress Guarantee: 200 ಯೂನಿಟ್‌ ಗಡಿ ದಾಟಿದರೆ ಪೂರ್ಣ ಶುಲ್ಕ

AFGHAN ONE DAY

ಏಕದಿನ: ಲಂಕೆಯನ್ನು ಮಣಿಸಿದ ಅಫ್ಘಾನ್‌

hockey

Junior Asia Cup hockey: ದಾಖಲೆ 4ನೇ ಸಲ ಪ್ರಶಸ್ತಿ ಗೆದ್ದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

D K SHI 1

ಡಿಕೆಶಿ: CBI ತನಿಖೆಗೆ ತಡೆ ವಿಸ್ತರಣೆ

Daily Horoscope; ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ

Daily Horoscope; ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ

SCHOOL TEA-STUDENTS

ಜೂ. 6ರಿಂದ ಶಿಕ್ಷಕರ ವರ್ಗಾವಣೆ: July 31ಕ್ಕೆ ಎಲ್ಲ ಪ್ರಕ್ರಿಯೆ ಮುಕ್ತಾಯ

EDU DEPT

ಶಿಕ್ಷಣ ಇಲಾಖೆ: 22 ಅಧಿಕಾರಿಗಳಿಗೆ ಭಡ್ತಿ, ವರ್ಗ

power lines

Congress Guarantee: 200 ಯೂನಿಟ್‌ ಗಡಿ ದಾಟಿದರೆ ಪೂರ್ಣ ಶುಲ್ಕ