ನಮ್ಮ ಅವಧಿಯಲ್ಲಿ ಹಾನಗಲ್ಲ ಕ್ಷೇತ್ರಕ್ಕೆ 2400 ಕೋಟಿ ಕೊಟ್ಟಿದ್ದೇನೆ

ಅದು ನನ್ನ ಧರ್ಮ, ಕರ್ತವ್ಯ ಎಂದು ನಮ್ರವಾಗಿ ತಿಳಿದು ಮಾಡಿದ್ದಾರೆ.

Team Udayavani, Oct 23, 2021, 9:58 PM IST

ನಮ್ಮ ಅವಧಿಯಲ್ಲಿ ಹಾನಗಲ್ಲ ಕ್ಷೇತ್ರಕ್ಕೆ 2400 ಕೋಟಿ ಕೊಟ್ಟಿದ್ದೇನೆ

ಹಾನಗಲ್ಲ: ನಮ್ಮ ಅಧಿ ಕಾರಾವ ಧಿಯಲ್ಲಿ ಹಾನಗಲ್ಲ ಕ್ಷೇತ್ರಕ್ಕೆ 2400 ಕೋಟಿ ರೂ. ಕೊಟ್ಟಿದ್ದೇನೆ. ಆಗ ಎಷ್ಟು ಕೆಲಸ ಆಗಿವೆ ಎನ್ನುವುದನ್ನು ಜನ ಹೇಳುತ್ತಿದ್ದಾರೆ. ನಾನೂ ಲೆಕ್ಕ ಕೊಡಲು ಸಿದ್ಧ. ಸಿಎಂ ಬೊಮ್ಮಾಯಿ ಈ ಕ್ಷೇತ್ರಕ್ಕೆ ನಿಮ್ಮ ಕೊಡುಗೆ ಏನು ಎನ್ನುವುದನ್ನು ಹೇಳತೀರಾ? ಒಂದೇ ವೇದಿಕೆಗೆ ನೀವೂ ಬನ್ನಿ, ನಾನೂ ಬರ್ತಿàನಿ. ಜನರಿಗೆ ಸತ್ಯ ಗೊತ್ತಾಗಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.

ಹಾನಗಲ್ಲ ಉಪ ಚುನಾವಣೆ ಹಿನ್ನೆಲೆಯಲ್ಲಿ ನರೇಗಲ್‌, ಆಡೂರು, ಅಕ್ಕಿಆಲೂರು ಮತ್ತು ಹಿರೂರು ಗ್ರಾಮಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ ಮಾನೆ ಪರ ಪ್ರಚಾರ ನಡೆಸಿ ಅವರು ಮಾತನಾಡಿದರು. 2018ರಲ್ಲಿ ಉಂಟಾದ ಪ್ರವಾಹದಿಂದ ಕಂಚಿನೆಗಳೂರು ಗ್ರಾಮದಲ್ಲಿ ಒಡ್ಡು ಒಡೆದು ಹೋಗಿ ಕೆರೆಗೆ ಹೋಗಬೇಕಿದ್ದ ನೀರು ನದಿ ಸೇರುತ್ತಿದೆ. 3ವರ್ಷ ಕಳೆದರೂ ಒಂದು ಒಡ್ಡು ಸರಿಪಡಿಸಲು ನಿಮ್ಮಿಂದ ಆಗಿಲ್ವಲ್ರಿ, ಸುಳ್ಳು ಹೇಳ್ಳೋಕೆ ನಾಚಿಕೆ ಆಗಲ್ವಾ? ಎಂದು ಕಿಡಿಕಾರಿದರು.

ಲಾಭದಲ್ಲಿದ್ದ ಸಂಗೂರು ಶುಗರ್‌ ಫ್ಯಾಕ್ಟರಿ ನಷ್ಟದ ಹಾದಿಗೆ ಹೋಗಿದ್ದು ಏಕೆ ಎನ್ನುವುದನ್ನು ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಹೇಳಬೇಕು. ಕಾರ್ಖಾನೆ ದಿವಾಳಿ ಸಂಬಂಧ 1959ರ ಸಹಕಾರಿ ಕಾಯ್ದೆಯಡಿ ತನಿಖೆ ನಡೆದು, ಲೂಟಿ ಹೊಡೆದ 33ಲಕ್ಷ ರೂ.ಅನ್ನು ಮರು ಪಾವತಿ ಮಾಡಬೇಕು ಎಂದು ಆದೇಶ ನೀಡಿರುವುದನ್ನು ಮರೆತುಬಿಟ್ಟರಾ ಸಜ್ಜನರ್‌? ಎಂದು ಹರಿಹಾಯ್ದ ಸಿದ್ದರಾಮಯ್ಯ, ಫ್ಯಾಕ್ಟರಿ ಅಷ್ಟೇ ಅಲ್ಲದೇ, ಗೌರಾಪುರ ಗುಡ್ಡವನ್ನೂ ಸಹ ನುಂಗಿ ನೀರು ಕುಡಿದ ಶಿವರಾಜ ಸಜ್ಜನರ್‌ ಸಜ್ಜನ ಅಲ್ಲ, ದುರ್ಜನ ಎಂದು ಜನರೇ ಮಾತನಾಡಿಕೊಳ್ಳುತ್ತಿದ್ದಾರೆ. ಇಂಥವರು ಗೆದ್ದರೆ ಅನುದಾನ ಸದ್ಬಳಕೆಯಾಗಲು ಸಾಧ್ಯವೇ? ಕ್ಷೇತ್ರ ಅಭಿವೃದ್ಧಿ ಹೊಂದುವುದು ಸಾಧ್ಯವೇ? ಇಂಥ ನುಂಗಣ್ಣರಿಂದ ಕ್ಷೇತ್ರ ಉಳಿಯುತ್ತಾ ಎಂದು ಪ್ರಶ್ನಿಸಿದರು.

ಸೂರ್ಯ ಪೂರ್ವ ದಿಕ್ಕಿನಲ್ಲಿ ಹುಟ್ಟೋದು ಎಷ್ಟು ಸತ್ಯವೋ ಹಾನಗಲ್ಲ ಉಪ ಚುನಾವಣೆಯಲ್ಲಿ ಶ್ರೀನಿವಾಸ ಮಾನೆ ಗೆಲ್ಲೋದು ಅಷ್ಟೇ ಸತ್ಯ. ಹಿಂದಿನ ಚುನಾವಣೆಯಲ್ಲಿ ಮಾನೆ ಸೋತರೂ ಮನೆ ಸೇರಲಿಲ್ಲ. ನಿರಂತರ ಜನರ ಕಷ್ಟ-ಸುಖಕ್ಕೆ ಸ್ಪಂದಿಸಿ, ಕೈಲಾದಷ್ಟು ಸಹಾಯ ಮಾಡಿದ್ದಾರೆ. ಈ ಉಪ ಚುನಾವಣೆ ನಿರೀಕ್ಷೆ ಮಾಡಿ ಅವರು ಜನರ ಸೇವೆ ಮಾಡದೇ, ಅದು ನನ್ನ ಧರ್ಮ, ಕರ್ತವ್ಯ ಎಂದು ನಮ್ರವಾಗಿ ತಿಳಿದು ಮಾಡಿದ್ದಾರೆ. ಅವರ ಮೇಲೆ ಯಾವ ಕಪ್ಪು ಚುಕ್ಕೆಯೂ ಇಲ್ಲ ಎಂದರು.

14ನೇ ಹಣಕಾಸು ಆಯೋಗದ ಶಿಫಾರಸ್ಸಿನ ಪ್ರಕಾರ ರಾಜ್ಯದ ತೆರಿಗೆ ಪಾಲು 38ಸಾವಿರ ಕೋಟಿ ರೂ. ಬರುತ್ತಿತ್ತು. ಈಗದು 20ಸಾವಿರ ಕೋಟಿ ರೂ.ಗೆ ಬಂದು ನಿಂತಿದೆ. ಕೇಂದ್ರದ ಸಹಾಯಧನ, ಜಿಎಸ್‌ಟಿ ಪರಿಹಾರ ಹಣ ಇವೆಲ್ಲ ಕಡಿಮೆಯಾಗಿ ರಾಜ್ಯಕ್ಕೆ ಕನಿಷ್ಟ 40ಸಾವಿರ ಕೋಟಿ ರೂ. ನಷ್ಟವಾಗುತ್ತಿದೆ. ರಾಜ್ಯದ ಬಿಜೆಪಿ ನಾಯಕರು ಇದರ ಬಗ್ಗೆ ಒಮ್ಮೆಯಾದರೂ ಬಾಯಿಬಿಟ್ಟು ಮಾತನಾಡಿದ್ದಾರಾ? ಇವರ ಹೇಡಿತನದಿಂದ ಕೇಂದ್ರದ ಅನುದಾನ ಸಿಗದಂಥ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ಜನರ ಸುಲಿಗೆ ಮಾಡುತ್ತಿದ್ದಾರೆ. ಎಲ್ಲ ಜೇಬಿಗೆ ಕೈ ಹಾಕಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌, ಮಾಜಿ ಸಚಿವ
ಮನೋಹರ ತಹಶೀಲ್ದಾರ್‌, ಅಭ್ಯರ್ಥಿ ಶ್ರೀನಿವಾಸ ಮಾನೆ ಮಾತನಾಡಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.