ಡಿ-ಮಸ್ಟರಿಂಗ್‌ ಕೇಂದ್ರಕ್ಕೆ ಪಹರೆ


Team Udayavani, Apr 25, 2019, 4:09 PM IST

hav-2

ಹಾವೇರಿ: ಲೋಕಸಭೆ ಚುನಾವಣೆ ಮತದಾನ ಪ್ರಕ್ರಿಯೆ ಮುಗಿದ ಬಳಿಕ ಮತಯಂತ್ರ ಹಾಗೂ ವಿವಿಪ್ಯಾಟ್‌ಗಳನ್ನು ಬಿಗಿ ಭದ್ರತೆಯೊಂದಿಗೆ ನಗರ ಸಮೀಪದ ದೇವಗಿರಿಯ ಸರ್ಕಾರಿ ಎಂಜನಿಯರಿಂಗ್‌ ಕಾಲೇಜಿನಲ್ಲಿ ಸ್ಥಾಪಿಸಲಾದ ಡಿ-ಮಸ್ಟರಿಂಗ್‌ ಕೇಂದ್ರದಲ್ಲಿಡಲಾಗಿದೆ.

ಮತ ಎಣಿಕೆ ದಿನಾಂಕದ ವರೆಗೆ ಸ್ಟ್ರಾಂಗ್‌ ರೂಮ್‌ ಕಟ್ಟಡವನ್ನು 24×7 ಭದ್ರತೆಯಲ್ಲಿ ಇಡಲು ಸೂಕ್ತ ಏರ್ಪಾಡು ಮಾಡಲಾಗಿದ್ದು, ಒಟ್ಟು ಎಂಟು ಸ್ಟ್ರಾಂಗ್‌ ರೂಮ್‌ನಲ್ಲಿ ಮತಯಂತ್ರಗಳನ್ನು ಇಡಲಾಗಿದೆ. ಎಂಟು ವಿಧಾನಸಭಾ ಕ್ಷೇತ್ರಗಳ ಇವಿಎಂಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ದಾಸ್ತಾನು ಮಾಡಲಾಗಿದೆ. ಕೊಠಡಿ ಸುತ್ತಲೂ ಸೂಕ್ತ ಬಂದೋಬಸ್ತ್ ಮಾಡಲಾಗಿದೆ. ಪ್ರತಿ ಕೊಠಡಿಗೂ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಕಿಟಕಿ, ಬಾಗಿಲುಗಳನ್ನು ಭದ್ರಪಡಿಸಲಾಗಿದೆ. ಯಾವುದೇ ಬೆಂಕಿ, ಇತರ ಅವಘಡಗಳಿಗೆ ಅವಕಾಶಗಳು ಇಲ್ಲದಂತೆ ಗರಿಷ್ಠ ಭದ್ರತಾ ವ್ಯವಸ್ಥೆಯೊಂದಿಗೆ ಸೀಲ್ ಮಾಡಲಾಗಿದೆ. ಪೊಲೀಸ್‌ ಹಾಗೂ ಕೇಂದ್ರ ಸಶಸ್ತ್ರ ಮೀಸಲು ಪಡೆಯನ್ನು ನಿಯೋಜಿಸಿ ಕಟ್ಟೆಚ್ಚರದಿಂದ ಕಾವಲಿಗಾಗಿ ಸೂಕ್ತ ಬಂದೋಬಸ್ತ್ ಮಾಡಲಾಗಿದೆ.

24 ತಾಸು ಸ್ಟ್ರಾಂಗ್‌ರೂಮ್‌ಗಳ ಭದ್ರತೆಗಾಗಿ ಕಾರ್ಯನಿರ್ವಹಿಸಲು ಕೇಂದ್ರ ಸಶಸ್ತ್ರ ಮೀಸಲು ಪಡೆ ಹಾಗೂ ಪೊಲೀಸ್‌ರನ್ನು ನಿಯೋಜಿಸಲಾಗಿದೆ. ಒಂದು ಪ್ಲಟೂನ್‌, ಸಿಆರ್‌ಪಿಎಫ್‌ ತಂಡ, ಒಂದು ಕೆಎಸ್‌ಆರ್‌ಪಿ ಪ್ಲಟೂನ್‌, ಮೂರು ಡಿಎಆರ್‌ ಪ್ಲಟೂನ್‌, ಇಬ್ಬರು ಪೊಲೀಸ್‌ ವಿಭಾಗೀಯ ಉಪಾಧೀಕ್ಷಕರು, ನಾಲ್ಕುಜನ ವೃತ್ತ ಆರಕ್ಷಕ ನಿರೀಕ್ಷಕರು, ಎಂಟು ಜನ ಪೊಲೀಸ್‌ ಸಬ್‌ ಇನ್ಸಪೆಕ್ಟರ್‌, 16 ಜನ ಸಹಾಯಕ ಪೊಲೀಸ್‌ ಸಬ್‌ ಇನ್ಸಪೆಕ್ಟರ್‌, 52 ಪೇದೆಗಳು ಹಾಗೂ ಮುಖ್ಯ ಪೇದೆಗಳನ್ನು ನಿಯೋಜಿಸಲಾಗಿದೆ. ಎಲ್ಲ ದಿಕ್ಕುಗಳಲ್ಲಿ ಬಿಗಿಭದ್ರತೆ ಒದಗಿಸಲಾಗಿದ್ದು, ಅಗ್ನಿಶಾಮಕ ವಾಹನ, ಸಿಬ್ಬಂದಿ ಕಾರ್ಯನಿರತರಾಗಿದ್ದಾರೆ. ಸ್ಟ್ರಾಂಗ್‌ ರೂಮ್‌ ಒಳಗೆ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿದೆ. ಡಿಸಿ ಕೃಷ್ಣ ಭಾಜಪೇಯಿ, ಎಸ್ಪಿ ಕೆ. ಪರಶುರಾಮ ವ್ಯವಸ್ಥೆಯ ಮೇಲೆ ನಿಗಾವಹಿಸಿದ್ದಾರೆ.

ದೇವಗಿರಿಯ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಸ್ಥಾಪಿಸಿರುವ ಸ್ಟ್ರಾಂಗ್‌ ರೂಮ್‌ಗೆ ತೀವ್ರ ಭದ್ರತೆ ಒದಗಿಸಲಾಗಿದೆ. ದಿನದ 24ಗಂಟೆಯೂ ಸರದಿ ಪ್ರಕಾರ ಸಿಆರ್‌ಪಿಎಫ್‌, ಕೆಸ್‌ಆರ್‌ಪಿ ಹಾಗೂ ನಮ್ಮ ಪೊಲೀಸ್‌ ಸಿಬ್ಬಂದಿ ಭದ್ರತೆ ಒದಗಿಸಲಾಗಿದೆ.

•ಕೆ. ಪರಶುರಾಮ, ಹಾವೇರಿ ಎಸ್ಪಿ,

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.