ಹಾವೇರಿಯಲ್ಲಿ ಸೋಂಕಿತರು ಹೆಚ್ಚಾದ್ರೆ ಬೆಡ್‌ ಕೊರತೆ!

ಕಳೆದೊಂದು ವಾರ ದಿಂದ ಸೋಂಕಿತರ ಸಂಖ್ಯೆ ಹೆಚ್ಚಳ! ­ಪರಿಸ್ಥಿತಿ ಹೀಗೆ ‌ಮುಂದುವರಿದರೆ ಜಿಲ್ಲಾಡಳಿತಕ್ಕೆ ತಲೆನೋವು

Team Udayavani, May 4, 2021, 7:46 PM IST

htyty

ಹಾವೇರಿ: ಜಿಲ್ಲೆಯಲ್ಲಿ ತೀವ್ರಗತಿಯಲ್ಲಿ ಹರಡುತ್ತಿರುವ ಕೊರೊನಾ ಎರಡನೇ ಅಲೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಸೋಮವಾರ ಬರೋಬ್ಬರಿ 330 ಜನರಿಗೆ ಕೊರೊನಾ ಸೋಂಕು ತಗಲಿದ್ದು, ಜಿಲ್ಲೆಯಲ್ಲಿ ಇದೇ ರೀತಿ ಪರಿಸ್ಥಿತಿ ಮುಂದುವರಿದರೆ ಸೋಂಕಿತರು ಬೆಡ್‌ಗಾಗಿ ಅಲೆದಾಡುವ ಪರಿಸ್ಥಿತಿ ಎದುರಾಗಲಿದೆ.

ರಾಜ್ಯದ ಇತರೆ ಜಿಲ್ಲೆಯಲ್ಲಿ ಕೊರೊನಾ ಪರಿಸ್ಥಿತಿ ಉಲ್ಬಣಗೊಂಡಿದ್ದರೂ ಜಿಲ್ಲೆಯಲ್ಲಿ ಮಾತ್ರ ನಿಯಂತ್ರಣದಲ್ಲಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ದಿಢೀರ್‌ ಹೆಚ್ಚುತ್ತಿರುವುದು ತೀವ್ರ ಆತಂಕ ಮೂಡಿಸಿದೆ. ಕಳೆದೊಂದು ವಾರದಿಂದ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಹೆಚ್ಚುತ್ತಿದ್ದು, ಹೀಗೆ ಪ್ರಕರಣಗಳು ಹೆಚ್ಚುತ್ತಿದ್ದರೆ ಸೋಂಕಿತರಿಗೆ ವ್ಯವಸ್ಥೆ ಮಾಡಲು ಜಿಲ್ಲಾಡಳಿತ ಹರಸಾಹಸ ಪಡಬೇಕಾದೀತು.

ಆಸ್ಪತ್ರೆಗಳಲ್ಲಿ ಏನೆಲ್ಲ ವ್ಯವಸ್ಥೆ:

ನಗರದ ಜಿಲ್ಲಾಸ್ಪತ್ರೆಯಲ್ಲಿ 148 ಬೆಡ್‌ಗಳ ವ್ಯವಸ್ಥೆ ಇದ್ದು, ಅದರಲ್ಲಿ ಈಗಾಗಲೇ 69 ಬೆಡ್‌ಗಳಲ್ಲಿ ಸೋಂಕಿತರು ದಾಖಲಾಗಿದ್ದಾರೆ. 16 ಸೋಂಕಿತರು ಐಸಿಯುನಲ್ಲಿ, 18 ಜನ ಆಕ್ಸಿಜನ್‌ ನಲ್ಲಿ, 35 ಜನ ಆಕ್ಸಿಜನ್‌ ರಹಿತ ಬೆಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 79ಬೆಡ್‌ಗಳು ಖಾಲಿ ಉಳಿದಿವೆ. ಜಿಲ್ಲೆಯಲ್ಲಿ ಕೇವಲ 54 ಐಸಿಯು ಬೆಡ್‌ಗಳಿದ್ದು, ಅದರಲ್ಲಿ 20 ಬೆಡ್‌ಗಳಿಗೆ ಮಾತ್ರ ವೆಂಟಿಲೇಟರ್‌ ವ್ಯವಸ್ಥೆ ಇದೆ. ಇನ್ನುಳಿದ 34 ಬೆಡ್‌ಗಳಲ್ಲಿ ವೆಂಟಿಲೇಟರ್‌ ವ್ಯವಸ್ಥೆ ಇಲ್ಲದಾಗಿದೆ. ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ 243ಬೆಡ್‌ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಇದರಲ್ಲಿ 151 ಬೆಡ್‌ ಗಳಲ್ಲಿ ಸೋಂಕಿತರು ದಾಖಲಾಗಿದ್ದಾರೆ. ಇದರಲ್ಲಿ 20 ಜನ ಆಕ್ಸಿಜನ್‌ ವ್ಯವಸ್ಥೆ ಪಡೆದಿದ್ದರೆ, 131 ಆಕ್ಸಿಜನ್‌ ರಹಿತ ಬೆಡ್‌ಗಳಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯ ಯಾವುದೇ ತಾಲೂಕು ಆಸ್ಪತ್ರೆಯಲ್ಲೂ ಐಸಿಯು ವ್ಯವಸ್ಥೆ ಮಾಡಿಕೊಂಡಿಲ್ಲ.

ಸೋಂಕಿತರಿಗೆ ಬೆಡ್‌ಗಳ ಕೊರತೆ:

ಹಾನಗಲ್ಲ ತಾಲೂಕು ಆಸ್ಪತ್ರೆಯಲ್ಲಿ 44 ಬೆಡ್‌ಗಳಲ್ಲಿ 38 ಬೆಡ್‌ಗಳಲ್ಲಿ ಸೋಂಕಿತರು ದಾಖಲಾಗಿದ್ದಾರೆ. ಕೇವಲ 6 ಬೆಡ್‌ ಗಳು ಮಾತ್ರ ಬಾಕಿ ಉಳಿದಿವೆ. ಶಿಗ್ಗಾವಿಯಲ್ಲಿ 44 ಬೆಡ್‌ಗಳ ವ್ಯವಸ್ಥೆ ಇದ್ದು, ಈಗ ಎಲ್ಲ ಬೆಡ್‌ಗಳೂ ಭರ್ತಿಯಾಗಿರುವುದರಿಂದ ಹೊಸದಾಗಿ ಸೋಂಕಿತರಿಗೆ ಬೆಡ್‌ಗಳ ಕೊರತೆ ಎದುರಾಗಲಿದೆ ಎಂಬ ಆತಂಕ ಶುರುವಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಐಸಿಯು ಕೊರತೆ: ಜಿಲ್ಲೆಯ ರಾಣಿಬೆನ್ನೂರಿನ ಓಂ ಆಸ್ಪತ್ರೆ, ಸಾಯಿ ಆಸ್ಪತ್ರೆ, ಹಾವೇರಿಯ ದೇವಧರ ಆಸ್ಪತ್ರೆ, ಮಲ್ಲಾಡದ ಆಸ್ಪತ್ರೆಗಳಲ್ಲಿ ಒಟ್ಟು 141 ಬೆಡ್‌ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, 57 ಸೋಂಕಿತರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲೂ ಐಸಿಯು ವ್ಯವಸ್ಥೆ ಇಲ್ಲದಾಗಿದೆ.

ಕೇರ್‌ ಸೆಂಟರ್‌ ವ್ಯವಸ್ಥೆ:

ಜಿಲ್ಲೆಯ ಬಾಡ, ಬಸಾಪುರ, ಬ್ಯಾಡಗಿ, ದೂದೀಹಳ್ಳಿ, ಕಲಕೇರಿ, ರಾಣಿಬೆನ್ನೂರ, ಸವಣೂರಿನಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಸ್ಥಾಪಿಸಿ 535 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದ್ದು, 117 ಸೋಂಕಿತರು ದಾಖಲಾಗಿದ್ದು, 418 ಬೆಡ್‌ಗಳು ಖಾಲಿ ಇದ್ದರೂ ಅಲ್ಲಿ ಆಕ್ಸಿಜನ್‌, ಐಸಿಯು, ವೆಂಟಿಲೇಟರ್‌ ವ್ಯವಸ್ಥೆ ಇಲ್ಲದಾಗಿದೆ. ಹೀಗಾಗಿ ಕೊರೊನಾ ಸೋಂಕಿತರು ಆತಂಕ ಪಡುವಂತಾಗಿದೆ. ಸೋಂಕಿತರ ಸಂಖ್ಯೆ ಏರಿಕೆ: ಜಿಲ್ಲಾಸ್ಪತ್ರೆಯಲ್ಲಿರುವ ಲಿಕ್ವಿಡ್‌ ಮೆಡಿಕಲ್‌ ಟ್ಯಾಂಕ್‌ಗೆ 5500 ಲೀಟರ್‌ ಆಕ್ಸಿಜನ್‌ ಸೋಮವಾರ ಪೂರೈಕೆಯಾಗಿದ್ದು, ಇದು ಸದ್ಯ ಇರುವ ಸೋಂಕಿತರ ಸಂಖ್ಯೆಗೆ ಲೆಕ್ಕ ಹಾಕಿದರೆ ಎರಡು ದಿನಗಳಿಗೆ ಸಾಲುತ್ತದೆ. ನಿತ್ಯ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಬೆಡ್‌, ಆಕ್ಸಿಜನ್‌, ವೆಂಟಿಲೇಟರ್‌ ಕೊರತೆಯಾಗುವುದಂತೂ ನಿಶ್ಚಿತ. ಕೂಡಲೇ ಜಿಲ್ಲಾಡಳಿತ ಎಚ್ಚೆತ್ತು ಅಗತ್ಯ ವ್ಯವಸ್ಥೆ ಮಾಡಿಕೊಂಡು ಚಾಮರಾಜನಗರದಲ್ಲಿನ ಘಟನೆ ಜಿಲ್ಲೆಯಲ್ಲಿ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂಬುದು ಜಿಲ್ಲೆಯ ಜನರ ಆಗ್ರಹವಾಗಿದೆ.

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.