ಪ್ರತಿಭಟನೆ ಕಾನೂನು ಬಾಹಿರ ಆಗಿದ್ದರೆ ಅಂದೇ ಏಕೆ ಬಂಧಿಸಲಿಲ್ಲ?: ರಾಮಣ್ಣ
Team Udayavani, May 5, 2019, 2:51 PM IST
ಹಿರೇಕೆರೂರ: ಪ್ರಾಮಾಣಿಕವಾಗಿ ಹೋರಾಟ ಮಾಡುವ ಜಿಲ್ಲೆಯ ರೈತ ಸಂಘಟನೆಯ ಮುಖಂಡರ ಮೇಲೆ ಸುಳ್ಳು ಮೊಕದ್ದಮೆ ಹಾಕಿದ್ದು, ಕೂಡಲೇ ಮೊಕದ್ದಮೆ ವಾಪಸ್ ಪಡೆಯಬೇಕೆಂದು ಆಗ್ರಹಿಸಿ ರೈತ ಸಂಘಟನೆ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಎಪಿಎಂಸಿ ಆವರಣದಿಂದ ಮುಖ್ಯ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ಆರ್.ಎಚ್.ಭಾಗವಾನ್ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಮಾತನಾಡಿ, ಜುಲೈನಲ್ಲಿ ಜಿಲ್ಲಾ ರೈತ ಸಂಘದಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ ತರಲು ಹಾವೇರಿಯಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಅದು ಕಾನೂನು ಬಾಹಿರವಾಗಿದ್ದರೆ ಅಂದೇ ರೈತರನ್ನು ಬಂಧಿಸಬಹುದಾಗಿತ್ತು. ಆದರೆ, 9 ತಿಂಗಳು ನಂತರ ಸಾರ್ವಜನಿಕರಿಗೆ ತೊಂದರೆ ಮಾಡಿದ್ದೀರಿ ಎಂದು ರೈತ ಸಂಘದ ಮುಖಂಡರ ಮೇಲೆ ಮೊಕದ್ದಮೆ ಹಾಕಿ, ರೈತರು ತಲೆ ಮರೆಸಿಕೊಂಡಿದ್ದಾರೆ ಎಂದು ನ್ಯಾಯಾಲಯಕ್ಕೆ ತಪ್ಪು ಮಾಹಿತಿ ಕೊಟ್ಟು ಬಂಧನ ವಾರೆಂಟ್ ಹೊರಡಿಸಿರುವುದು ವಿಚಿತ್ರ ಹಾಗೂ ವಿಪರ್ಯಾಸ.
ಯಾರಿಗೂ ತೊಂದರೆಯಾಗದಂತೆ ಚಳವಳಿ ಮಾಡಿ ರೈತರ ಧ್ವನಿಯಾಗಿ ಪ್ರಾಮಾಣಿಕವಾಗಿ ಹೋರಾಟ ಮಾಡುವ ರೈತ ಸಂಘಟನೆ ಅಶಕ್ತಗೊಳಿಸಲು ಅಂದಿನ ಜಿಲ್ಲಾಧಿಕಾರಿಗಳು ಪೊಲೀಸ್ ಇಲಾಖೆ ಬಳಸಿಕೊಂಡು ಸುಳ್ಳು ಪ್ರಕರಣ ಹಾಕಿದ್ದಾರೆ. ಅನ್ನದಾತರನ್ನು ಜೈಲಿಗೆ ಕಳುಹಿಸಲು ಹುನ್ನಾರ ಮಾಡಿರುವುದು ಖಂಡನೀಯ ಎಂದರು.
ರೈತ ಸಂಘದ ಗೌರವಾಧ್ಯಕ್ಷ ಬಸನಗೌಡ ಗಂಗಪ್ಪಳವರ, ಎಸ್.ವಿ.ಚಪ್ಪರದಹಳ್ಳಿ, ಅಧ್ಯಕ್ಷ ಪ್ರಭುಗೌಡ ಪ್ಯಾಟಿ, ಗಂಗನಗೌಡ ಮುದಿಗೌಡ್ರ, ಮಹ್ಮದ್ಗೌಸ್ ಪಾಟೀಲ, ಶಂಕ್ರಪ್ಪ ಶಿರಗಂಬಿ, ಶಂಭು ಮುತ್ತಗಿ, ಶಾಂತನಗೌಡ ಪಾಟೀಲ, ರಾಜು ಮುತ್ತಗಿ, ಪರಮೇಶಗೌಡ ಪಾಟೀಲ, ಯಶವಂತ ತಿಮಕಾಪುರ, ದೊಡ್ಡಗೌಡ ಪಾಟೀಲ, ಮರಿಗೌಡ ಪಾಟೀಲ, ವೀರನಗೌಡ ಬಾಳಂಬೀಡ, ಜಕಣಾಚಾರಿ ಕಮ್ಮಾರ ಸೇರಿದಂತೆ ರೈತ ಸಂಘದ ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು