ಅಕ್ರಮ ಆಸ್ತಿ ಸಂಪಾದಿಸಿದವರನ್ನು ಜೈಲಿಗಟ್ಟುವೆ’
Team Udayavani, Apr 21, 2019, 3:40 PM IST
ಹಾವೇರಿ: ಜಿಲ್ಲೆಯ ಕೆಲವು ರಾಜ ಕಾರಣಿಗಳು ತಮ್ಮ ಆಡಳಿತಾವಧಿಯಲ್ಲಿ ಬಡವರ ಹಣ ಲೂಟಿ ಮಾಡಿ ಅಕ್ರಮ ಆಸ್ತಿ ಸಂಪಾದನೆ ಮಾಡಿಕೊಂಡಿದ್ದು, ಚುನಾವಣೆ ಮುಗಿದ ಬಳಿಕ ಅವುಗಳನ್ನು ಬಯಲಿಗೆಳೆಯುತ್ತೇನೆ ಎಂದು ಪಕ್ಷೇತರ ಅಭ್ಯರ್ಥಿ ಹನುಮಂತಪ್ಪ ಕಬ್ಟಾರ ಹೇಳಿದರು.
ನಗರದ ಖಾಸಗಿ ಹೋಟೆಲ್ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಅಕ್ರಮ ಆಸ್ತಿ ಮಾಡಿಕೊಂಡವರ ಮಾಹಿತಿ ನನ್ನ ಬಳಿ ಇದೆ. ನಾನು ಸಂಸದನಾದರೆ ಜಿಲ್ಲೆಯಲ್ಲಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ವ್ಯಕ್ತಿಗಳನ್ನು ಮೊದಲು ಜೈಲಿಗಟ್ಟುವ ಕೆಲಸ ಮಾಡುತ್ತೇನೆ. ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲಿ, ಬಿಡಲಿ ಅಕ್ರಮ ಆಸ್ತಿ ಮಾಡಿದವರನ್ನು ಬಯಲಿಗೆಳೆಯದೇ ಬಿಡುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಿ.ಎಂ. ಉದಾಸಿ ಮತ್ತು ಶಿವಕುಮಾರ ಉದಾಸಿ ಮೂಲತಃ ಹಾವೇರಿ ಜಿಲ್ಲೆಯವರಲ್ಲ. ಇವರು ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹರವಿ ಗ್ರಾಮದವರು. ಇನ್ನು ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್. ಪಾಟೀಲ ಗದುಗಿನವರು. ಮನೆ ಮಗನಾದ ತಮ್ಮನ್ನು ಬೆಂಬಲಿಸಿ ಎಂದು ಹನುಮಂತಪ್ಪ ಕಬ್ಟಾರ ಮನವಿ ಮಾಡಿದರು.
ಕಳೆದ ಲೋಕಸಭೆ ಚುನಾವಣೆಯಲ್ಲಿಯೂ ಸ್ಪರ್ಧಿಸಿದ್ದು ಈ ಬಾರಿ ಎರಡನೇ ಬಾರಿ ಸ್ಪರ್ಧೆಗಿಳಿದಿದ್ದೇನೆ. ಹಾವೇರಿ-ಗದಗ ಲೋಕಸಭೆ ಕ್ಷೇತ್ರದ ಎಂಟು ವಿಧಾನಸಭೆ ಕ್ಷೇತ್ರದಲ್ಲಿ ಮತದಾರರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನೇ ಪ್ರಣಾಳಿಕೆ ಮಾಡಿಕೊಂಡು ಮತ ಕೇಳುತ್ತಿದ್ದೇನೆ ಎಂದರು.
ಜಿಲ್ಲೆಯ ಎಲ್ಲ ಕೆರೆಗಳಿಗೆ ನೀರು ತುಂಬಿಸುವುದು. ರೈತರಿಗೆ ಅನುಕೂಲವಾಗುವಂತೆ ಎಪಿಎಂಸಿ ಮಾರುಕಟ್ಟೆ ಅಭಿವೃದ್ಧಿ ಮಾಡುವುದು. ಬ್ಯಾಡಗಿ, ಹಾವೇರಿ, ರಾಣಿಬೆನ್ನೂರ ರೈಲು ನಿಲ್ದಾಣ ಮೇಲ್ದರ್ಜೆಗೆ ಏರಿಸುವುದು. ಪ್ರತಿ ವರ್ಷ ಉದ್ಯೋಗ ಮೇಳ ಮಾಡುವುದು. ಪ್ರತಿ ಗ್ರಾಮಗಳಲ್ಲಿ ಬಸ್ ತಂಗುದಾಣ ನಿರ್ಮಾಣ ಮಾಡುವುದು. ಸಂಸತ್ ವೇತನದಲ್ಲಿ ಬಡ ರೈತ ವರ್ಗದ ಮಕ್ಕಳಿಗೆ ಉಚಿತ ಶಿಕ್ಷಣ ವ್ಯವಸ್ಥೆ ಮಾಡುವುದು ಪ್ರಣಾಳಿಕೆಯಲ್ಲಿದೆ ಎಂದು ತಿಳಿಸಿದರು.
ರೈತ ಮುಖಂಡ ಸೋಮನಗೌಡ, ಬಸನಗೌಡ ದೊಡ್ಡನಗೌಡ ಇತರರು ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ
Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
Police Raid: 346 ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು