ಕೊಯ್ಲೋತ್ತರ ಮೌಲ್ಯವರ್ಧನೆಗೆ ಪ್ರಾಮುಖ್ಯತೆ ನೀಡಿ


Team Udayavani, Feb 7, 2020, 2:33 PM IST

hv-tdy-2

ರಾಣಿಬೆನ್ನೂರ: ಶುಂಠಿಯಲ್ಲಿ ಉತ್ಪಾದನೆ ಜತೆಗೆ ಕೊಯ್ಲೋತ್ತರ ಮೌಲ್ಯವರ್ಧನೆಗೆ ರೈತರು ಹೆಚ್ಚು ಪ್ರಾಮುಖ್ಯತೆ ನೀಡಬೇಕು. ಶುಂಠಿಯಲ್ಲಿ ಬರುವ ಕೊಳೆ ರೋಗದ ನಿರ್ವಹಣೆ, ಉತ್ತಮ ಇಳುವರಿಗೆ ಸೂಕ್ತ ರೀತಿಯಲ್ಲಿ ಪೋಷಕಾಂಶಗಳ ನಿರ್ವಹಣೆ ಮಾಡಬೇಕು ಎಂದು ಪ್ರಾಧ್ಯಾಪಕ ಡಾ| ರವಿಕುಮಾರ ಎಂ.ಆರ್‌. ಹೇಳಿದರು.

ತಾಲೂಕಿನ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಗುರುವಾರ ಶುಂಠಿ ಬೆಳೆಯ ಉತ್ಪಾದನಾ ತಾಂತ್ರಿಕತೆಗಳ ಕುರಿತು ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಅವರು, ಮಣ್ಣಿನ ನಿರ್ಜಲೀಕರಣ ಹಾಗೂ ಸೂಕ್ತ ರೀತಿಯಲ್ಲಿ ಗೆಡ್ಡೆಗಳ ಶೇಖರಣೆ ಪದ್ಧತಿ ಬಗ್ಗೆ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ಕೃಷಿ ಮಾಡಿದಲ್ಲಿ ಲಾಭದಾಯಕವಾಗಲಿದೆ ಎಂದರು.

ನೀರಾವರಿ ಆಶ್ರಯದಲ್ಲಿ ಫೆಬ್ರವರಿ ತಿಂಗಳಲ್ಲಿ ನಾಟಿ ಮಾಡಬಹುದು. ಮಳೆಯಾಶ್ರಯದಲ್ಲಿ ಮೇ ತಿಂಗಳ ಆರಂಭದ 15 ದಿನ ವರೆಗೆ ಬಿತ್ತನೆ ಮಾಡಲು ಸೂಕ್ತ ಸಮಯ. ನಾಟಿಗೆ ಬಳಸುವ ಬೀಜದ ಗೆಡ್ಡೆ ರೋಗ ಮುಕ್ತವಾಗಿರಬೇಕು ಎಂದರು.

ಬಿತ್ತನೆಯ ಗೆಡ್ಡೆ ಮೂಲಕ ಹರಡುವ ರೋಗ ತಪ್ಪಿಸಲು ಬಿತ್ತನೆಗೆ ಮುನ್ನ ಬೀಜೋಪಚಾರವನ್ನುಮಾಡಬೇಕು ಹಾಗೂ ಪ್ರತಿ ಹೆಕ್ಟೇರಿಗೆ 100 ಕಿಲೋ ಸಾರಜನಕ, 50 ಕಿಲೋ ರಂಜಕ ಮತ್ತು 200 ಕಿಲೋಪೊಟ್ಯಾಷ್‌ ಗೊಬ್ಬರವನ್ನು ರಸಾವರಿ ಪದ್ಧತಿ ಮೂಲಕ ನೀಡಬೇಕು ಎಂದರು.

ಟೋಮ್ಯಾಟೊ, ಆಲೂಗಡ್ಡೆ, ಮೆಣಸಿನಕಾಯಿ, ಬದನೆಕಾಯಿ ಮತ್ತು ಶೇಂಗಾ ಬೆಳೆಗಳನ್ನು ಶುಂಠಿಯನಂತರ ಬೆಳೆಯಬಾರದು. ಈ ಬೆಳೆಗಳು ಹಸಿರು ಕೊಳೆ ಉಂಟುಮಾಡುವ ಸೂಕ್ಷ್ಮಣು ಜೀವಿಗೆ ಆಶ್ರಯ ನೀಡುವ ಸಸ್ಯಗಳಾಗಿವೆ ಎಂದು ತಿಳಿಸಿದರು.

ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ| ಅಶೋಕ ಪಿ., ಮಾತನಾಡಿ, ರೈತರ ಆದಾಯ ಹೆಚ್ಚಿಸುವಲ್ಲಿ ಶುಂಠಿಬೆಳೆಯ ಪ್ರಾಮುಖ್ಯತೆಯನ್ನು ಹೊಂದಿದೆ. ರೈತರು ಸಮಗ್ರ ಬೆಳೆ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು. ರೈತರು ಕೇವಲ ಆದಾಯದ ಕಡೆಗೆ ಗಮನ ಹರಿಸದೆ ಮಣ್ಣಿನ ಆರೋಗ್ಯದ ಬಗ್ಗೆಯು ಕಾಳಜಿವಹಿಸಬೇಕು ಎಂದರು.

ತೋಟಗಾರಿಕಾ ವಿಜ್ಞಾನಿ ಡಾ| ಸಂತೋಷ ಎಚ್‌.ಎಂ. ಮಾತನಾಡಿ, ಮಣ್ಣಿನ ರಸಸಾರ 7ಕ್ಕಿಂತ ಅಧಿಕವಾಗಿರುವ ಮಣ್ಣಿನಲ್ಲಿ ಬೆಳೆಯುವ ಶುಂಠಿ ಬೆಳೆಗೆ ಲಘು ಪೋಷಕಾಂಶಗಳ ನಿರ್ವಹಣೆಗೆ ಒಂದುಹೆಕ್ಟೆರಿಗೆ 3 ಕಿಲೋ ಜಿಂಜರ್‌ ರಿಚ್‌ಯನ್ನು 600 ಲೀ. ಶುದ್ಧ ನೀರಿನಲ್ಲಿ ಮಿಶ್ರಣ ಮಾಡಿ 1ನೇ ಸಿಂಪರಣೆ ಶುಂಠಿ ನಾಟಿ ಮಾಡಿದ 30-45 ದಿನಗಳ ನಂತರ ಮಾಡಬೇಕು ಎಂದರು.

45 ದಿನಗಳ ಅವಧಿಯಲ್ಲಿ ಈ ಮಿಶ್ರಣವನ್ನು ಸಿಂಪಡಿಸಬೇಕು. ಇದೇ ಕ್ರಮವನ್ನು 6ನೇ ತಿಂಗಳವರೆಗೂ ಅನುಸರಿಸಬೇಕು (4 ಸಿಂಪರಣೆ).ಶುಂಠಿಯು ಬಿತ್ತನೆ ಸಮಯದಿಂದ ಗಡ್ಡೆಗಳು ಮೊಳಕೆ ಬರುವವರೆಗೆ ಸಾಧಾರಣಾ ಮಳೆ, ಬೆಳೆವಣಿಗೆ ಅವಧಿ ಯಲ್ಲಿ ಚೆನ್ನಾಗಿ ಹಂಚಿಕೆಯಾಗಿ ಬೀಳುವ ಅಧಿಕ ಮಳೆ ಹಾಗೂ ಕೊಯ್ಲು ಮಾಡುವುದಕ್ಕಿಂತ ಮುಂಚೆ ಒಂದು

ತಿಂಗಳವರೆಗೆ ಒಣ ಹವೆ‌ ಹಾಗೂ ಶೇ. 70-90 ರಷ್ಟು ಆದ್ಯತೆಯಲ್ಲಿ ಉತ್ತಮವಾಗಿ ಬೆಳೆಯುತ್ತದೆ ಎಂದರು.ಗಡ್ಡೆ ಕೊಳೆ ರೋಗ ಮತ್ತು ದುಂಡಾಣು ರೋಗ ಹೆಚ್ಚಾಗಿರುವ ಪ್ರದೇಶಗಳಲ್ಲಿ 75-100 ಮೈಕ್ರಾನ್‌ ಗಾತ್ರದ ಪಾಲಿಥೀನ್‌ ಹಾಳೆಗಳನ್ನು ಸಸಿಮಾಡಿ ಮೇಲೆ 40 ದಿನಗಳ ವರೆಗೆ ಹರಡುವುದರ ಮೂಲಕ ಮಣ್ಣು ಬಿಸಿಯಾಗುವಂತೆ (ಸೊಲರೈಜೇಷನ್‌) ಮಾಡಬೇಕು ಎಂದು ವಿವರಿಸಿದರು. ಡಾ| ಕೆ.ಪಿ. ಗುಂಡಣ್ಣನವರ ಶುಂಠಿಯಲ್ಲಿ ಬರುವ ಕಾಂಡ ಕೊರಕ ಮತ್ತು ಇತರ ಕೀಟಗಳ ನಿರ್ವಹಣೆ ಬಗ್ಗೆ ತಿಳಿಸಿದರು.

ಈ ಕಾರ್ಯಾಗಾರದಲ್ಲಿ ರಾಣಿಬೆನ್ನೂರ ಹಾನಗಲ್ಲ, ಬ್ಯಾಡಗಿ ಮತ್ತು ಹಿರೇಕೆರೂರ ತಾಲೂಕಿನ 50 ಜನ ಶುಂಠಿ ಬೆಳೆಯುವ ರೈತರು ಪ್ರಯೋಜನೆ ಪಡೆದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.