ನಗರಸಭೆಯಿಂದ ನಾಗರಿಕರಿಗೆ ಅಸಮರ್ಪಕ ಸೇವೆ


Team Udayavani, Dec 18, 2019, 2:11 PM IST

hv-tdy-1

ಹಾವೇರಿ: ಜಿಲ್ಲಾ ಕೇಂದ್ರ ಹಾವೇರಿ ನಗರಸಭೆ ಸಿಬ್ಬಂದಿ ಕೊರತೆ ಎದುರಿಸುತ್ತಿದ್ದು, ಸಿಬ್ಬಂದಿ ಕಾರಣದಿಂದಾಗಿ ನಗರದ ಜನತೆಗೆ ಸಮರ್ಪಕ ಮೂಲಸೌಲಭ್ಯ ಹಾಗೂ ಸೇವೆ ಮರೀಚಿಕೆಯಾಗಿದೆ. ನಾಗರಿಕರು ಸಕಾಲಕ್ಕೆ ನಗರಸಭೆ ಸೇವೆ ಸಿಗದೆ ಪರದಾಡುವಂತಾಗಿದೆ.

ನಗರಸಭೆಯಲ್ಲಿ ಒಟ್ಟು 236 ಮಂಜೂರಾತಿ ಹುದ್ದೆಗಳಿದ್ದು ಅವುಗಳಲ್ಲಿ ಕೇವಲ 63 ಹುದ್ದೆಗಳು ಮಾತ್ರ ಭರ್ತಿಯಾಗಿದ್ದು, 173 ಹುದ್ದೆ ಖಾಲಿ ಇವೆ. ಹೀಗಾಗಿ ಹೊರಗುತ್ತಿಗೆ ಸಿಬ್ಬಂದಿ ನೇಮಕ ಅನಿವಾರ್ಯವಾಗಿದ್ದರಿಂದ 126 ಹೊರಗುತ್ತಿಗೆ ಸಿಬ್ಬಂದಿ ನೇಮಕ ಮಾಡಿಕೊಂಡು ಕಾರ್ಯನಿರ್ವಹಿಸಲಾಗುತ್ತಿದ್ದು 47 ಹುದ್ದೆಗಳು ಖಾಲಿ ಇವೆ.

ನಗರಸಭೆಗೆ ಒಟ್ಟು 100ಪೌರಕಾರ್ಮಿಕ ಹುದ್ದೆ ಮಂಜೂರಾಗಿದ್ದು, ಇವರಲ್ಲಿ 23 ಜನ ಮಾತ್ರ ಕಾಯಂ ಪೌರಕಾರ್ಮಿಕರಿದ್ದಾರೆ. 75 ಜನರು ಹೊರಗುತ್ತಿಗೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಂಜೂರಾದ ಹುದ್ದೆಗಳಿಗೆ ಹೋಲಿಸಿದರೆ ಇನ್ನೂ ಎರಡು ಹುದ್ದೆಗಳು ಖಾಲಿ ಇವೆ. ಸ್ವತ್ಛತಾ ಸಿಬ್ಬಂದಿ ನಾಲ್ಕು ಇರಬೇಕಿತ್ತು ಎಲ್ಲ ನಾಲ್ಕು ಹುದ್ದೆ ಖಾಲಿ ಇವೆ. ನೀರು ಸರಬರಾಜು ನಿರ್ವಹಣೆಗೆ ಎಂಟು ಜನರು ಇರಬೇಕಿತ್ತು. ಒಬ್ಬರೂ ಇಲ್ಲ. ನೀರು ಸರಬರಾಜು ನಿರ್ವಹಣೆ ಸಹಾಯಕರು ಎಂಟು ಜನ ಇರಬೇಕಿತ್ತು ಅವರಲ್ಲಿಯೂ ಒಬ್ಬರೂ ಇಲ್ಲ. ಹೀಗೆ ಸಮರ್ಪಕ ಸಿಬ್ಬಂದಿ ಇಲ್ಲದೇ ಸೇವೆ ಜನರಿಗೆ ಮರೀಚಿಕೆಯಾಗಿದೆ.

ಕಾಯಂ ಸಿಬ್ಬಂದಿ: ಪೌರಾಯುಕ್ತರು ಗ್ರೇಡ್‌ -2 ಹುದ್ದೆ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌, ಪರಿಸರ ಅಭಿಯಂತರರು, ಲೆಕ್ಕ ಅಧೀಕ್ಷಕರು, ಸಮುದಾಯ ಅಧಿಕಾರಿ, ಹಿರಿಯ ಆರೋಗ್ಯ ಅ ಧಿಕಾರಿ, ಇಬ್ಬರು ಪ್ರಥಮದರ್ಜೆ ಸಹಾಯಕರು, ಒಬ್ಬ ಕಿರಿಯ ಆರೋಗ್ಯ ಸಹಾಯಕ, ಒಬ್ಬ ಇಲೆಕ್ಟ್ರಿಶಿಯನ್‌, ಏಳು ಜನ ದ್ವಿತೀಯದರ್ಜೆ ಸಹಾಯಕರು, ನಾಲ್ವರು ತೆರಿಗೆ ಸಂಗ್ರಾಹಕರು,ಒಬ್ಬ ಗ್ರೇಡ್‌-2ರ ಇಲೆಕ್ಟ್ರಿಶಿಯನ್‌, ಇಬ್ಬರು ಸ್ವತ್ಛತಾ ಉಸ್ತುವಾರಿ ಅಧಿಕಾರಿ, ಎಂಟು ಜನ ಸಹಾಯಕರು, 23 ಪೌರಕಾರ್ಮಿಕರು, ಗಾರ್ಡನ್‌ ನಿರ್ವಾಹಕರು, ಸಹಾಯಕರು, ವಾಲ್ವಮನ್‌ ಸೇರಿ ಎಂಟು ಸಹಾಯಕರು ಕಾಯಂ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪೌರಾಯುಕ್ತರು, ಲೆಕ್ಕ ಅಧಿಧೀಕ್ಷಕರು, ದ್ವಿತೀಯ ದರ್ಜೆ ಸಹಾಯಕರು ಹಾಗೂ ಕಚೇರಿ ಸಹಾಯಕರು ಹುದ್ದೆಗಳು ಮಾತ್ರ ಭರ್ತಿಯಾಗಿದ್ದು ಉಳಿದೆಲ್ಲ ಹುದ್ದೆಗಳಲ್ಲಿ ಖಾಲಿ ಹುದ್ದೆಗಳು ರಾರಾಜಿಸುತ್ತಿವೆ.

ಹೊರಗುತ್ತಿಗೆ ಸಿಬ್ಬಂದಿ: ಹೊರಗುತ್ತಿಗೆಯಲ್ಲಿ ಒಟ್ಟು 126 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಇವರಲ್ಲಿ 75 ಜನ ಪೌರಕಾರ್ಮಿಕರಿದ್ದಾರೆ. ಉಳಿದಂತೆ ಒಬ್ಬ ಲೆಕ್ಕಪತ್ರ, ಗಣಕಯಂತ್ರ ಆಪರೇಟರ್‌ ಮೂವರು, ಮುಖ್ಯನಿರ್ವಾಹಕ, ನಾಲ್ವರು ವಾಹನ ಚಾಲಕರು, ಮೂವರು ಸ್ವತ್ಛತಾ ಉಸ್ತುವಾರಿ, ಇಬ್ಬರು ವಾಲ್ವಮನ್‌, ಗಾರ್ಡನ್‌ ನಿರ್ವಾಹಕರು, ಸಹಾಯಕರು, ವಾಲ್ವಮನ್‌ ಕೆಲಸಕ್ಕಾಗಿ 36ಜನರು ಕಾರ್ಯನಿರ್ವಹಿಸುತ್ತಿದ್ದಾರೆ. ಒಟ್ಟಾರೆ ಜಿಲ್ಲಾ ಕೇಂದ್ರ ಹಾವೇರಿ ನಗರದ ನಗರಸಭೆ ಸಿಬ್ಬಂದಿ ಸಮಸ್ಯೆ ಎದುರಿಸುತ್ತಿದ್ದು, ಸರ್ಕಾರ ಶೀಘ್ರ ಖಾಲಿ ಹುದ್ದೆ ತುಂಬುವ ಮೂಲಕ ಜನರಿಗೆ ಸಮರ್ಪಕ ಸೇವೆ ಸಿಗುವ ವ್ಯವಸ್ಥೆ ಮಾಡಬೇಕಾಗಿದೆ.

 

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.