2030ರ ವೇಳೆಗೆ 4.5 ಲಕ್ಷ ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಗುರಿ


Team Udayavani, Dec 19, 2020, 4:16 PM IST

2030ರ ವೇಳೆಗೆ 4.5 ಲಕ್ಷ ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಗುರಿ

ಬ್ಯಾಡಗಿ: ಸೌರಶಕ್ತಿ, ಪವನಶಕ್ತಿ ಸೇರಿದಂತೆ ಇನ್ನಿತರ ಅಸಂಪ್ರದಾಯಿಕ ಶಕ್ತಿಗಳನ್ನುಬಳಸಿಕೊಂಡು 2030ರ ವೇಳೆಗೆ 4.5 ಲಕ್ಷಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಮಾಡುವಮೂಲಕ ಕೈಗಾರಿಕೆಗಳ ಅಭಿವೃದ್ಧಿ ಮತ್ತು ಕತ್ತಲೆ ರಹಿತ ಭಾರತ ಮಾಡುವ ಉದ್ದೇಶವನ್ನು ಪ್ರಧಾನಿನರೇಂದ್ರ ಮೋದಿ ಹೊಂದಿರುವುದಾಗಿ ಸಂಸದ ಶಿವಕುಮಾರ ಉದಾಸಿ ಹೇಳಿದರು.

ಟಾಟಾ ಪವರ್‌ ಸೋಲಾರ್‌ ಸಿಸ್ಟಮ್ಸ್‌ ಲಿ. ಬೆಂಗಳೂರ ಇವರ ಸಹಭಾಗಿತ್ವದಲ್ಲಿ ಪಟ್ಟಣದ ಕೈಲಾಸ್‌ ಕೋಲ್ಡ್‌ ಸ್ಟೋರೆಜ್‌ನಲ್ಲಿಅಳವಡಿಸಿರುವ 94 ಕಿ.ವ್ಯಾ. ಉತ್ಪಾದನಾಸಾಮರ್ಥ್ಯದ ಸೌರಶಕ್ತಿ ಘಟಕ ಉದ್ಘಾಟಿಸಿಅವರು ಮಾತನಾಡಿದರು. ಅಂತಾರಾಷ್ಟ್ರೀಯಮಟ್ಟದಲ್ಲಿ ಸ್ವಾವಲಂಬನೆಗೆ ನಾವೆಲ್ಲ ನೂತನ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕಾಗಿದೆ. ಅದರ ಮುಂದುವರಿದ ಭಾಗವಾಗಿ ಇವತ್ತು ನಿಸರ್ಗದಲ್ಲಿ ಉಚಿತವಾಗಿ ದೊರೆಯುತ್ತಿರುವ ಸೌರಶಕ್ತಿ ಪವನಶಕ್ತಿಗಳ ಸದ್ಭಳಕೆಗೆ ಮುಂದಾಗಬೇಕಾಗಿದೆ ಎಂದರು.

ರೈತರು ತಮ್ಮ ಪಂಪ್‌ಸೆಟ್‌ಗಳಿಗೂ ಸೋಲಾರ್‌ ಅಥವಾ ಪವನಶಕ್ತಿ ಅಳವಡಿಸಿಕೊಂಡಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಆತ್ಮ ನಿರ್ಭರ ಅತ್ಯಂತಪರಿಣಾಮಕಾರಿಯಾಗಿ ಯಶಸ್ವಿಯಾಗಲಿದೆ.ವಿದ್ಯುತ್‌ಗಾಗಿ ರೈತರು ಹೋರಾಟ ನಡೆಸುವಪ್ರಮೇಯ ಇರುವುದಿಲ್ಲ. ರೈತರು ತಮ್ಮಜೀವಪಣಕ್ಕಿಟ್ಟು ಹಗಲು-ರಾತ್ರಿಯೆನ್ನದೇಹೊಲಗಳಿಗೆ ನೀರು ಹಾಯಿಸಬೇಕೆನ್ನುವ ಪ್ರಶ್ನೆ ಎದುರಾಗುವುದಿಲ್ಲ ಎಂದರು.

ಜಾಗತಿಕ ತಾಪಮಾನ ಇದೀಗ ಬಹುಚರ್ಚಿತ ವಿಷಯವಾಗಿದ್ದು, ಬರುವವರ್ಷಗಳಲ್ಲಿ ಕನಿಷ್ಟ 3 ಸೆಂಟಿಗ್ರೇಡ್‌ನ‌ಷ್ಟುತಾಪಮಾನ ಹೆಚ್ಚಾಗಲಿದೆ ಎಂದು ವರದಿಯೊಂದು ತಿಳಿಸಿದೆ. ಇದರಿಂದ ಮನುಷ್ಯ ಸೇರಿದಂತೆ ಪ್ರಾಣಿ ಸಂಕುಲಗಳ ಮೇಲೆ ವ್ಯತಿರಿಕ್ತಪರಿಣಾಮ ಬೀರಲಿದೆ. ಆದರೆ ಈಗಾಗಲೇ ಅಕಾಲಿಕವಾಗಿ ಮಳೆ, ಶೀತ ಹಾಗೂ ಬಿಸಿಲುಬೀಳುತ್ತಿದ್ದು, ಋತುಗಳಲ್ಲಿ ಬದಲಾವಣೆ ಕಾಣುತ್ತಿದೆ ಎಂದರು.

ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಬೆಳೆಯುತ್ತಿರುವ ಜನಸಂಖ್ಯೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸರ್ಕಾರಗಳು ಹೆಣಗಾಡುವಂತಾಗಿದೆ. ಹೀಗಾಗಿ ಪ್ರಕೃತಿಯಲ್ಲಿ ಉಚಿತವಾಗಿ ಸಿಗುವಂತಹ ಎಲ್ಲ ಶಕ್ತಿ ಗಳನ್ನು ಅನಿವಾರ್ಯವಾಗಿ ಬಳಸುವುದು ಸರ್ಕಾರಗಳಿಗೆ ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಸದರಿಕೋಲ್ಡ್‌ ಸ್ಟೋರೇಜ್‌ ಮಾಲೀಕರು ಸೌರಶಕ್ತಿಬಳಕೆಗೆ ಮುಂದಾಗಿರುವುದು ಅತ್ಯಂತ ಸ್ವಾಗತಾರ್ಹವೆಂದರು.

ಸೌರಶಕ್ತಿ ಬಳಕೆ ಮಾಡುವ ಮೂಲಕ ಭಾರತ ಇನ್ನಿತರ ದೇಶಗಳಿಗೆ ಮಾದರಿಯಾಗುವ ಕಾಲಸನ್ನಿಹಿತ. ಇದಕ್ಕಾಗಿ ಪ್ರಧಾನಿ ಮೋದಿಯವರುಪಣತೊಟ್ಟು ನಿಂತಿದ್ದು, ದೇಶದ ಸಾರ್ವಜನಿಕರುಅವರಿಗೆ ಸಾಥ್‌ ನೀಡಬೇಕಾಗಿದೆ. ಉತ್ಪಾದನೆಗಿಂತ ವೆಚ್ಚವೇ ಹೆಚ್ಚಾದಲ್ಲಿ ಸರಿದೂಗಿಸಲು ಪರ್ಯಾಯಮಾರ್ಗವನ್ನು ಕಂಡುಕೊಳ್ಳಲು ಸಾಧ್ಯವಿಲ್ಲ.ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಇಂತಹದ್ದೊಂದು ಪ್ರಯತ್ನ ಖುಷಿ ತಂದಿದೆ ಎಂದರು.

ಪುರಸಭೆ ಅಧ್ಯಕ್ಷೆ ಕವಿತಾ ಸೊಪ್ಪಿನಮಠ, ಜಿಪಂಮಾಜಿ ಅಧ್ಯಕ್ಷ ಶಂಕ್ರಣ್ಣ ಮಾತನವರ, ಟಾಟಾಕಂಪನಿಯ ಪ್ರಶಾಂತ ಬೈಂದೂರ, ವೀರಭದ್ರೇಶ್ವರದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಿ.ಆರ್‌.ಆಲದಗೇರಿ, ವರ್ತಕ ಕೈಲಾಸ ಆರಾಧ್ಯಮಠ ಇದ್ದರು. ನ್ಯಾಯವಾದಿ ಚಿದಾನಂದ ಮಠದ ಸ್ವಾಗತಿಸಿದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.