ಮತದಾರರ ಪಟಿಗೆ ಹೆಸರು ಸೇರ್ಪಡೆಗೆ ನ. 6 ಕೊನೆ ದಿನ
Team Udayavani, Oct 20, 2019, 3:18 PM IST
ಸವಣೂರು: ಕರ್ನಾಟಕ ವಿಧಾನಪರಿಷತ್ತಿನ ಪಶ್ಚಿಮ ಪದವಿಧರ ಚುನಾವಣಾ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆ ಮಾಡುವವರು ನ. 6ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು ಎಂದು ತಹಶೀಲ್ದಾರ್ ವಿ.ಡಿ.ಸಜ್ಜನ್ ತಿಳಿಸಿದರು.
ಪಟ್ಟಣದ ಉಪವಿಭಾಗಾಧಿಕಾರಿಗಳ ಸಭಾಂಗಣದಲ್ಲಿ ಪದವೀಧರ ಕ್ಷೇತ್ರದ ಮತದಾದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸುವ ಸಲುವಾಗಿ ಶನಿವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪದವಿಧರ ಕ್ಷೇತ್ರದ ಚುನಾವಣೆಯಲ್ಲಿ ಭಾಗವಹಿಸಿ ಮತದಾನ ಮಾಡಲು ಪದವಿ ಶಿಕ್ಷಣವನ್ನು ಪಡೆದ ಮತದಾರರಿಗೆ ಅವಕಾಶವಿದ್ದು, ನಮೂನೆ 18 ರಲ್ಲಿ ಅರ್ಜಿಯನ್ನು ಸಲ್ಲಿಸಬೇಕು. 2019 ನ. 1 ದಿನಾಂಕದಿಂದ ಸುಮಾರು 3 ವರ್ಷಗಳ ಹಿಂದೆ ಪದವಿಧರರಾಗಿರಬೇಕು. ಕಳೆದ ಚುನಾವಣೆಯಲ್ಲಿ ಮತದಾರರಾಗಿದ್ದರೂ ಕೂಡಾ ಪ್ರಸಕ್ತ ಸಾಲಿನಲ್ಲಿ ಹೊಸದಾಗಿ ಅರ್ಜಿಯನ್ನು ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕು.
ಅರ್ಜಿಯೊಂದಿಗೆ ಇತ್ತೀಚಿನ ಭಾವಚಿತ್ರ, ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ನೀಡಲಾದ ಪದವಿ ಪ್ರಮಾಣಪತ್ರ ದೃಢೀಕರಣಗೊಂಡ ನಕಲು ಪ್ರತಿಯನ್ನು ಲಗತ್ತಿಸಬೇಕು. ವಿಶ್ವವಿದ್ಯಾಲಯವು ನೋಂದಾಯಿತ ಪದವೀಧರನೆಂಬುದಾಗಿ ನೀಡಿದ ನೋಂದಣಿ ಕಾರ್ಡಿನ ದೃಢೀಕರಣ ಪ್ರತಿ, ಕಾಯಂ ರಹವಾಸಿಗೆ ಸಂಬಂಧಿಸಿದಂತೆ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ರೇಷನ್ ಕಾರ್ಡ್ಗಳಲ್ಲಿ ಕಡ್ಡಾಯವಾಗಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿಯನ್ನು ಲಗತ್ತಿಸಬೇಕು. ಮತದಾರರ ನಮೂನೆ 18ರಲ್ಲಿ ಸಂಪೂರ್ಣಮಾಹಿತಿಯನ್ನು ತುಂಬಿರಬೇಕು.
ಅನಾವಶ್ಯಕ ವಿವರ (ತಂದೆ, ತಾಯಿ, ಗಂಡ)ಗಳನ್ನು ತೆಗೆದುಹಾಕಬೇಕು. ಭರ್ತಿ ಮಾಡಿದ ಮತದಾರರ ನೋಂದಣಿಯ ಅರ್ಜಿಯನ್ನು ನ. 6ರ ಒಳಗಾಗಿ ಕಂದಾಯ ಇಲಾಖೆಯ ಚುನಾವಣಾ ವಿಭಾಗದ ಕಚೇರಿಗೆ ತಲುಪಿಸಬೇಕು ಎಂದರು. ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಐ.ಬಿ.ಬೆನಕೊಪ್ಪ, ಸಂಪನ್ಮೂಲ ಅಧಿಕಾರಿ ನಾಗರಾಜ ಬಣಕಾರ, ಅಕ್ಷರದಾಸೋಹ ಅಧಿಕಾರಿ ಸುಣದೊಳ್ಳಿ, ಆರ್.ಎಂ.ಭುಜಂಗ, ಟಿಎಚ್ಒ ಡಾ| ಚಂದ್ರಕಲಾ, ಮಾಲಿಂಗಪ್ಪ ಕುಂಬಾರ, ನಾಗಪ್ಪ ತಿಪ್ಪಕ್ಕನವರ ಸೇರಿದಂತೆ
ವಿವಿಧ ಇಲಾಖೆಗಳ ತಾಲೂಕುಮಟ್ಟದ ,ಅಧಿಕಾರಿಗಳು ಇದ್ದರು. ಕಾರ್ಯಕ್ರಮವನ್ನು ಚುನಾವಣಾಧಿಕಾರಿ ಆರ್.ಎಂ.ಅಡಿಗ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ
Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ