ಅತಿವೃಷ್ಟಿಯಿಂದ ನಗರಗಳಲ್ಲಿ ಹೆಚ್ಚಿದ ಹಾನಿ
Team Udayavani, Sep 15, 2019, 11:30 AM IST
ಹಾವೇರಿ: ಇತ್ತೀಚೆಗೆ ಜಿಲ್ಲೆಯಲ್ಲಿ ಉಲ್ಬಣಿಸಿದ ನೆರೆ ಹಾಗೂ ಅತಿವೃಷ್ಟಿಯಿಂದ ಗ್ರಾಮೀಣ ಪ್ರದೇಶಗಳಷ್ಟೇ ಅಲ್ಲ ನಗರ ಪ್ರದೇಶಗಳಲ್ಲಿಯೂ ಅಪಾರ ಪ್ರಮಾಣದಲ್ಲಿ ನಷ್ಟವಾಗಿದ್ದು ಒಟ್ಟು 1.78ಕೋಟಿ ರೂ.ಗಳಷ್ಟು ಹಾನಿ ಅಂದಾಜಿಸಲಾಗಿದೆ.
ನದಿಗಳು ಉಕ್ಕಿ ಹರಿದ ಪರಿಣಾಮ ಉಂಟಾದ ನೆರೆಯಿಂದ ನಗರ-ಪಟ್ಟಣಗಳಲ್ಲಿ ಹೆಚ್ಚಾಗಿ ಹಾನಿಯಾಗದೆ ಇದ್ದರೂ ನಿರಂತರವಾಗಿ ಸುರಿದ ಭಾರಿ ಮಳೆಯ ಪರಿಣಾಮವಾಗಿ ರಸ್ತೆ, ಕುಡಿಯುವ ನೀರು ಪೂರೈಸುವ ಪಂಪ್ಹೌಸ್, ವಿದ್ಯುತ್ ಘಟಕ ಹಾಗೂ ನೀರು ಸರಬರಾಜು ಮಾಡುವ ಉಪಕರಣಗಳಿಗೆ ಹಾನಿಯಾಗಿದೆ.
ಅತಿವೃಷ್ಟಿಯಿಂದ ಕುಸಿದ ಮನೆಗಳು, ಸರ್ಕಾರಿ ಕಟ್ಟಡಗಳನ್ನು ಹೊರತುಪಡಿಸಿ ಜಿಲ್ಲಾಡಳಿತ ನಗರ ಪಟ್ಟಣಗಳಲ್ಲಿ ಹಾಳಾದ ರಸ್ತೆ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ಆಗಿರುವ ನಷ್ಟವನ್ನು ಪ್ರತ್ಯೇಕವಾಗಿ ಸಮೀಕ್ಷೆ ಮಾಡಿದೆ. ಆ ಪ್ರಕಾರವಾಗಿ ಜಿಲ್ಲೆಯ ನಗರ ಪ್ರದೇಶಗಳಲ್ಲಿನ ಒಟ್ಟು 31 ಕಿಮೀ ರಸ್ತೆ ಮಳೆಯಿಂದ ಹಾನಿಯಾಗಿದ್ದು, 114ಲಕ್ಷ ರೂ.ಗಳಷ್ಟು ಹಾನಿಯಾಗಿದೆ. ನಗರ-ಪಟ್ಟಣಗಳಿಗೆ ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಿಸಿ 64ಲಕ್ಷ ರೂ.ಗಳಷ್ಟು ನಷ್ಟವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ
Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ