ಪರಿಹಾರ ಹಂಚಿಕೆಯಲ್ಲಿ ನೆರೆ ಸಂತ್ರಸ್ತರಿಗೆ ಅನ್ಯಾಯ


Team Udayavani, Dec 29, 2019, 1:24 PM IST

hv-tdy-1

ಹಾವೇರಿ: ನೆರೆ ಸಂತ್ರಸ್ತರಿಗೆ ಮನೆ ಹಾನಿ ಪರಿಹಾರ ಹಂಚಿಕೆಯಲ್ಲಿ ತಾರತಮ್ಯ ಮಾಡಿ, ಅರ್ಹರಿಗೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾ ಘಟಕ ನೇತೃತ್ವದಲ್ಲಿ ದೇವಗಿರಿ ಗ್ರಾಮದ ನೂರಾರು ಸಂತ್ರಸ್ತರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.

ಅತಿವೃಷ್ಟಿಯಿಂದ ಗ್ರಾಪಂ ವ್ಯಾಪ್ತಿಯ ದೇವಗಿರಿ ಹಾಗೂ ದೇವಗಿರಿ ಯಲ್ಲಾಪುರ ಗ್ರಾಮಗಳಲ್ಲಿ ಬಿ ಕೆಟಗರಿಯ 231, ಸಿ ಕೆಟಗರಿಯ 69 ಮನೆಗಳು ಬಿದ್ದಿವೆ ಎಂದು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಈ ವರದಿಯನ್ನು ಗ್ರಾಪಂ ಕಚೇರಿಯಲ್ಲಿ ಪ್ರಕಟಿಸುವಂತೆ ವಿನಂತಿಸಿದರೂ ಪಿಡಿಒ ಪ್ರಕಟಿಸಲಿಲ್ಲ. ಇದೀಗ ನಾವೇ ಅದನ್ನು ಪತ್ತೆ ಮಾಡಿದ್ದು, ಅದರಲ್ಲಿ ಅನರ್ಹರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಸಂತ್ರಸ್ತರು ದೂರಿದರು.

ಡಿ.24 ರಂದು ಗ್ರಾಮ ಪಂಚಾಯಿತಿ ಕಾರ್ಯಾಲಯದ ಮುಂದೆ ಗ್ರಾಮ ಸಂತ್ರಸ್ಥರೆಲ್ಲರೂ ಸೇರಿ ಬೆಳಗ್ಗೆ 9 ಗಂಟೆಯಿಂದ ಧರಣಿ ನಡೆಸಿದರೂ ಯಾರೂ ಬಂದು ಸಮಸ್ಯೆ ಆಲಿಸಲಿಲ್ಲ. ಮಧ್ಯಾಹ್ನ ವೇಳೆ ತಹಸೀಲ್ದಾರರು ಧರಣಿ ಸ್ಥಳಕ್ಕೆ ಖುದ್ದಾಗಿ ಆಗಮಿಸಿ ಸಮಸ್ಯೆಗಳಿಗೆ ಸ್ಪಂದಿಸಿ ಗ್ರಾಮ ಲೆಕ್ಕಾಧಿಕಾರಿಗಳು, ಎಂಜಿನಿಯರ್‌, ಪಿಡಿಒ ಬೇರೆಯರವನ್ನು ಕಳುಹಿಸಿ ಮರು ಪರಿಶೀಲನೆಯನ್ನು ಮಾಡಲು ಕ್ರಮ ಕೈಗೊಳ್ಳುತ್ತೇನೆ ಎಂದು ಆಶ್ವಾಸನೆ ನೀಡಿದ್ದರು. ಆದರೆ, ಈ ವರೆಗೂ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪಿಡಿಒ, ತಲಾಟಿ, ಎಂಜಿನಿಯರ್‌, ತಲಾಟಿ ಸಹಾಯಕ ಸೇರಿ ಶ್ರೀಮಂತರನ್ನೇ ಪರಿಹಾರ ಪಟ್ಟಿಯಲ್ಲಿ ಸೇರಿಸಿದ್ದಾರೆ. ಪಟ್ಟಿಯಲ್ಲಿರುವ ಅನೇಕರಿಗೆ ಆರ್‌ಸಿಸಿ ಮನೆಗಳಿವೆ. ಅವರ ಹಳೆಯ ಮನೆಗಳು ಬಿದ್ದು, ಬಹುಕಾಲವಾಗಿದೆ. ಅಲ್ಲಿ ಯಾರು ವಾಸವಾಗಿಲ್ಲ. ಆದರೂ ಅವರನ್ನೆಲ್ಲ ಮನೆ ಕಳೆದುಕೊಂಡವರು ಎಂದು ನಮೂದಿಸಿ ಪರಿಹಾರ ನೀಡಿದ್ದಾರೆ.

ಈ ಅನ್ಯಾಯವನ್ನು ತಡೆಯವವರೇ ಇಲ್ಲದಂತಾಗಿದೆ. ಬಡವರು ಮನೆ ಬಿದ್ದ ಪರಿಹಾರ ಕೇಳಿದರೆ, ನಿಮಗೆ ಸರ್ಕಾರದಿಂದ 5 ಲಕ್ಷ ರೂ. ಬರುವಂತೆ ಮಾಡುತ್ತೇವೆ. ನಮಗೆ ಒಂದು ಲಕ್ಷ ರೂ. ಕೊಡುತ್ತೀರಾ ಎಂದು ಕೇಳುತ್ತಿದ್ದಾರೆ ಎಂದರು. ಕೂಡಲೇ ಜಿಲ್ಲಾ ಧಿಕಾರಿಗಳು, ತಹಸೀಲ್ದಾರರು ದೇವಗಿರಿ ಮತ್ತು ದೇವಗಿರಿ ಯಲ್ಲಾಪುರ ಗ್ರಾಮದ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.