ಮದ್ಯದಂಗಡಿ ತೆರೆಯದಂತೆ ಡಿಸಿಗೆ ಒತ್ತಾಯ


Team Udayavani, May 20, 2019, 3:23 PM IST

hav-3

ಹಾನಗಲ್ಲ: ಹೇರೂರು ಗ್ರಾಮದಲ್ಲಿ ಎಂಎಸ್‌ಐಎಲ್ ಸ್ವಾಮ್ಯದ ಮದ್ಯದಂಗಡಿಯೊಂದನ್ನು ತೆರೆಯಲು ವಿರೋಧ ವ್ಯಕ್ತಪಡಿಸಿದ ರಾಜ್ಯ ರೈತ ಸಂಘ (ಕೋಡಿಹಳ್ಳಿ ಚಂದ್ರಶೇಖರ ಬಣ) ಹಾಗೂ ಮಹಿಳಾ ಸ್ವ ಸಹಾಯ ಸಂಘಗಳು ತೀವ್ರ ಪ್ರತಿಭಟನೆ ಮಾಡಿದ್ದು, ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಅವರಿಗೆ ಮನವಿ ನೀಡಿ ಇಲ್ಲಿ ಮದ್ಯದಂಗಡಿಗೆ ಅನುಮತಿ ನೀಡಕೂಡದು ಎಂದು ಒತ್ತಾಯಿಸಿವೆ.

ಎಂಎಸ್‌ಐಎಲ್ ಸ್ವಾಮ್ಯದ ಮದ್ಯದಂಗಡಿಗೆ ಅಬಕಾರಿ ಇಲಾಖೆ ಪರವಾನಗಿ ನೀಡಲು ಮುಂದಾಗಿದ್ದು, ಸ್ಥಳ ಪರಿಶೀಲನೆಗೆ ಅಬಕಾರಿ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಆಗಮಿಸಿದ್ದರು. ಈ ಸಂದರ್ಭದಲ್ಲಿ ಮದ್ಯದ ಅಂಗಡಿ ತೆರೆಯಲು ಪರವಾನಗಿ ನೀಡದಂತೆ ಒತ್ತಾಯಿಸಿದರು.

ಗ್ರಾಮದಲ್ಲಿ ಬಡವರು ಮತ್ತು ಕೂಲಿ ಕಾರ್ಮಿಕರ ಸಂಖ್ಯೆ ಹೆಚ್ಚಿದೆ. ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಜನರೂ ಹೆಚ್ಚಿದ್ದಾರೆ. ಮದ್ಯದಂಗಡಿ ತೆರೆಯುವುದರಿಂದ ದುಡಿದ ಹಣವನ್ನೆಲ್ಲ ಮದ್ಯಕ್ಕೆ ಸುರಿಯುವ ಸಾಧ್ಯತೆಗಳಿದ್ದು, ಕುಟುಂಬ ಕಲಹಕ್ಕೂ ಕಾರಣವಾಗಲಿದೆ. ಗ್ರಾಮದಲ್ಲಿ ಮದ್ಯದ ಅಂಗಡಿ ತೆರೆಯಲು ಉದ್ದೇಶಿಸಿರುವ ಸ್ಥಳದ ಸನೀಹದಲ್ಲಿ ಗುಬ್ಬಿ ನಂಜುಂಡೇಶ್ವರ ಮಠ, ಅಯ್ಯಪ್ಪಸ್ವಾಮಿ ಸನ್ನಿದಾನವಿದೆ. ಅಲ್ಲದೆ ಯಲ್ಲಮ್ಮ ದೇವಿ ದೇವಸ್ಥಾನ ನಿರ್ಮಾಣಕ್ಕೆ ಅಡಿಪಾಯ ಹಾಕಲಾಗಿದೆ. ಮದ್ಯದ ಅಂಗಡಿಯಿಂದ ಗ್ರಾಮದ ನೆಮ್ಮದಿಯ ಜೀವನಕ್ಕೆ ಕೊಳ್ಳಿ ಬೀಳಲಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಅಂಗಡಿ ತೆರೆಯಲು ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿಗೆ ಮಹಿಳೆಯರು ಪಟ್ಟು ಹಿಡಿದರು.

ಮದ್ಯದ ಅಂಗಡಿ ಬೇಡ ಎನ್ನುವುದು ಗ್ರಾಮಸ್ಥರ ಒಕ್ಕೊರಲ ಅಭಿಪ್ರಾಯವಾಗಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಸಹ ಸಲ್ಲಿಸಲಾಗಿದೆ. ಆದರೂ, ಮನವಿಗೆ ಕಿವಿಗೊಡದಿರುವುದು ಹಲವು ಸಂಶಯಗಳಿಗೆ ಕಾರಣವಾಗಿದೆ. ಒಂದು ವೇಳೆ ನಮ್ಮ ಮನವಿ ಲೆಕ್ಕಿಸದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಮಹಿಳೆಯರು ಮತ್ತು ಮಕ್ಕಳೊಂದಿಗೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಸಂಘಗಳ ಮುಖಂಡರು ಎಚ್ಚರಿಕೆ ನೀಡಿದರು.

ಹೇರೂರು ಗ್ರಾಮ ಘಟಕದ ಅಧ್ಯಕ್ಷ ಬಸವರಾಜ್‌ ಹತ್ತಿಯವರ, ಗ್ರಾಮಸ್ಥರಾದ ರಮೇಶ ಹಾದಿಮನಿ, ಗಿರಿಮಲ್ಲಪ್ಪ ಬಾಗಣ್ಣನವರ, ಗಿರಿಜವ್ವ ಹರಿಜನ, ನಾಗವ್ವ ಹರಿಜನ, ಲಕ್ಷ ್ಮವ್ವ ಹರಿಜನ, ನೀಲವ್ವ ಹರಿಜನ, ರೇಣುಕಾ ತಲವಾರ, ನೀಲಮ್ಮ ಹಾದಿಮನಿ, ಕಮಲವ್ವ ಸುರಳೇಶ್ವರ, ಅಕ್ಕಮ್ಮ ಸುರಳೇಶ್ವರ, ಜಬೀನಾ ನದಾಫ್‌, ಹಿರಾಂಬಿ ನದಾಫ್‌, ಫಾತಿಮಾ ನದಾಫ್‌, ರಜಿಯಾ ನದಾಫ್‌, ಅನಸವ್ವ ಕಾಶಂಬಿ, ಗೌರಮ್ಮ ಬ್ಯಾಡಗಿ, ಬೀರಪ್ಪ ಸುರಳೇಶ್ವರ, ಫಕ್ಕೀರಪ್ಪ ಹರಿಜನ, ಮಹದೇವಪ್ಪ ಹರಿಜನ, ಶಿವಾನಂದಪ್ಪ ಹರಿಜನ, ಮಾರುತಿ ಹರಿಜನ, ಮಾಲತೇಶ ಹರಿಜನ, ಹನುಮಂತಪ್ಪ ಹರಿಜನ, ಬಸವರಾಜ್‌ ವೆಂಕಟಾಪೂರ, ಗುಂಡನಗೌಡ ಪಾಟೀಲ, ಜಗದೀಶ್‌ ಗುಳಪಣ್ಣನವರ, ಮಲ್ಲನಗೌಡ ಹಂಚಿನಮನಿ, ಶಿವನಗೌಡ ಪಾಟೀಲ, ಯಲ್ಲಪ್ಪ ಬಾಗಣ್ಣನವರ, ರಾಮಣ್ಣ ಬಾಗಣ್ಣನವರ ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.