ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ


Team Udayavani, Jan 22, 2020, 4:26 PM IST

hv-tdy-1

ಹಾನಗಲ್ಲ: ಅಖೀಲ ಕರ್ನಾಟಕ ಕಟ್ಟಡ ಕಾರ್ಮಿಕರ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಪದಾಧಿಕಾರಿಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ತಾಲೂಕು ತಹಸೀಲ್ದಾರ್‌ರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಗೃಹಭಾಗ್ಯ ಯೋಜನೆಯಲ್ಲಿ ನೀಡಲಾಗುತ್ತಿರುವ 2 ಲಕ್ಷ ರೂ.ಗಳೊಂದಿಗೆ 3 ಲಕ್ಷ ರೂ.ಗಳನ್ನು ಸಾಲದ ರೂಪದಲ್ಲಿ ನೀಡಬೇಕು. ಕಾರ್ಮಿಕರಿಗೆ ಉಪಕರಣ ಖರೀದಿಗೆ ನೀಡುವ 5 ಸಾವಿರ ಸಹಾಯಧನವನ್ನು 2 ಲಕ್ಷಕ್ಕೆ ಹೆಚ್ಚಿಸಬೇಕು. ಮಾಸಿಕ ಪಿಂಚಣಿಯನ್ನು 1 ಸಾವಿರದಿಂದ 3 ಸಾವಿರಕ್ಕೇರಿಸಬೇಕು. ಕಾರ್ಮಿಕ ಆರೋಗ್ಯಭಾಗ್ಯ ಯೋಜನೆಯ ವೈದ್ಯಕೀಯ ಸಹಾಯಧನವನ್ನು 25 ಸಾವಿರಕ್ಕೆ ಹೆಚ್ಚಿಸಬೇಕು. ತಕ್ಷಣಕ್ಕೆ ಬಿಡುಗಡೆಯಾಗಬೇಕು. ಕಾರ್ಮಿಕ ಚಿಕಿತ್ಸಾಭಾಗ್ಯವನ್ನು 2 ಲಕ್ಷದಿಂದ 5 ಲಕ್ಷಕ್ಕೇರಿಸಬೇಕು. ಅಪಘಾತ ಪರಿಹಾರ ಯೋಜನೆಯಲ್ಲಿ ಮೃತಪಟ್ಟ ಕಾರ್ಮಿಕನಿಗೆ ಎಫ್‌ಐಆರ್‌ನ್ನು ಅಂತಿಮವಾಗಿ ಪರಿಗಣಿಸದೇ ಮಧ್ಯಂತರವಾಗಿ ಪರಿಗಣಿಸಬೇಕು. ಕಾರ್ಮಿಕರಿಗೆ ಸರ್ಕಾರದ ಎಲ್ಲ ಸೌಲಭ್ಯಗಳೂ ಇಲಾಖೆ ವ್ಯಾಪ್ತಿಯಲ್ಲಿ ಸಕಾಲಕ್ಕೆ ಒದಗಿಸಬೇಕು.

ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಹಾಗೂ ಕ್ರೀಡಾಕೂಟಗಳಿಗೆ ಹತ್ತು ಸಾವಿರ ರೂ. ಸಹಾಯಧನ ನೀಡಬೇಕು. ನರೇಗಾ ಯೋಜನೆಯಲ್ಲಿ ದುಡಿಯುವ ಕಾರ್ಮಿಕರ ಹಕ್ಕುಗಳನ್ನು ಮೊಟಕುಗೊಳಿಸಬಾರದು. ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ನೀಡಬೇಕು. ಕಾರ್ಮಿಕರ ಸಂಘದ ಕಲ್ಯಾಣ ಮಂಡಳಿಗೆ ಸದಸ್ಯರ ಆಯ್ಕೆಯಲ್ಲಿ ನಮ್ಮನ್ನೂ ಪರಿಗಣಿಸಬೇಕು. ಉದ್ಯೋಗ ಪ್ರಮಾಣ ಪತ್ರವನ್ನುಕಾರ್ಮಿಕ ಇಲಾಖೆ ನಿರೀಕ್ಷಕರು, ಮನೆಯ ಮಾಲೀಕರು, ಗುತ್ತಿಗೆದಾರ ನೀಡುವುದನ್ನು ರದ್ದುಗೊಳಿಸಬೇಕು. ಕಾರ್ಮಿಕರ ಸಂಘದ ಕಚೇರಿಗಾಗಿ ಜಿಲ್ಲಾ ಕೇಂದ್ರದಲ್ಲಿ 10 ಗುಂಟೆ ನಿವೇಶನ ನೀಡಬೇಕು. ಅಗಸರು, ಕ್ಷೌರಿಕರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಮಂಡಕ್ಕಿ ಭಟ್ಟಿ, ಹಮಾಲಿಗರು, ಚಿಂದಿ ಆಯುವವರು, ಮನೆ ಕೆಲಸಗಾರರನ್ನು ಕಾರ್ಮಿಕ ಕಲ್ಯಾಣ ಮಂಡಳಿಗೆ ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಅಜ್ಜಪ್ಪ ಹಡಪದ, ತಾಲೂಕು ಅಧ್ಯಕ್ಷ ರವಿ ಬಾರ್ಕಿ, ಪ್ರಧಾನ ಕಾರ್ಯದರ್ಶಿ ಹೇಮಗಿರಿ ಅಡಿಗಣ್ಣನವರ, ಪದಾಧಿ ಕಾರಿಗಳಾದ ಶಿವಕುಮಾರ ಹಡಪದ, ಷಣ್ಮುಖಗೌಡ ಪಾಟೀಲ, ನಿಂಗನಗೌಡ ಪಾಟೀಲ, ಜಯನುದ್ದೀನ್‌ ಮಯಜಾವರ, ಪ್ರೇಮಾ ತಂಬುಳಿ, ಪೂರ್ಣಿಮಾ ತೊಗರಳ್ಳಿ, ಸುಭಾಸ ಬಾರ್ಕಿ, ಪುಟ್ಟಪ್ಪ ಕೋಳೂರ, ಪರಶುರಾಮ ಕುಂಟನಹೊಸಳ್ಳಿ, ಬಸನಗೌಡ ಪಾಟೀಲ, ಚಂದ್ರಕಾಂತ ಗೊದಮನಿ, ವೀರಭದ್ರಪ್ಪ ಅಪ್ಪಾಜಿ, ಗಣೇಶ ಕುಮಚಗಿ ಇತರರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.