ಕಳಪೆ ವಿದ್ಯುತ್‌ ಕಂಬಗಳ ಬದಲಾವಣೆಗೆ ಒತ್ತಾಯ

ಹೆಸ್ಕಾಂ ಗ್ರಾಹಕರ ಕುಂದು ಕೊರತೆ ನಿವಾರಣೆ ಸಭೆಯಲ್ಲಿ ರೈತ ಮುಖಂಡರ ಆರೋಪ

Team Udayavani, Jun 17, 2019, 2:26 PM IST

haveri-tdy-3..

ಹಾನಗಲ್ಲ: ಹೆಸ್ಕಾಂ ಕಚೇರಿಯಲ್ಲಿ ಶನಿವಾರ ನಡೆದ ಗ್ರಾಹಕರ ಸಭೆಯಲ್ಲಿ ಹೆಸ್ಕಾಂ ಅಧಿಕಾರಿ ಎಸ್‌.ಎಸ್‌. ಜಿಂಗಾಡೆ ಮಾತನಾಡಿದರು.

ಹಾನಗಲ್ಲ: ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಗ್ರಾಹಕರ ಕುಂದು ಕೊರತೆಗಳ ನಿವಾರಣೆ ಸಭೆ ನಡೆಯಿತು.

ಸಭೆಯಲ್ಲಿ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಅಡಿವೆಪ್ಪ ಆಲದಕಟ್ಟಿ ಮಾತನಾಡಿ, ಇತ್ತೀಚೆಗೆ ಬಿರುಗಾಳಿ-ಮಳೆಗೆ ತಾಲೂಕಿನೆಲ್ಲೆಡೆ ಹೊಲಗಳಲ್ಲಿ ಕಂಬಗಳು ಮುರಿದು ಬಿದ್ದು ಅನಾಹುತ ಸೃಷ್ಟಿಸುತ್ತಿವೆ. ಅಕ್ರಮ-ಸಕ್ರಮ ಯೋಜನೆಯಡಿ ರೈತರ ಹೊಲಗಳಲ್ಲಿ ಅಳವಡಿಸಲಾಗಿರುವ ವಿದ್ಯುತ್‌ ಕಂಬಗಳ ಗುಣಮಟ್ಟ ಕಳಪೆಯಾಗಿದ್ದು, ಎಲ್ಲೆಂದರಲ್ಲಿ ಮುರಿದು ಬೀಳುತ್ತಿವೆ. ಇದರಿಂದಾಗಿ ವಿದ್ಯುತ್‌ ನಿಲುಗಡೆಯಾಗಿ ರೈತ ಸಮುದಾಯಕ್ಕೆ ತೊಂದರೆಯಾಗುತ್ತಿದೆ. ಕೂಡಲೇ ಗುಣಮಟ್ಟದ ಕಂಬಗಳನ್ನು ಪೂರೈಸುವಂತೆ ಒತ್ತಾಯಿಸಿದರು.

ತಾಲೂಕಿನ ಯಾವುದಾದರೊಂದು ಭಾಗದಲ್ಲಿ ಕಾಮಗಾರಿ ನಡೆಸಬೇಕಿದ್ದರೂ ಎಲ್ಲ ಕಡೆಯ ವಿದ್ಯುತ್‌ ನಿಲುಗಡೆ ಮಾಡಬೇಕಾಗುವುದು. ಹೀಗಾಗಿ ಅನವಶ್ಯಕವಾಗಿ ರೈತರು ವಿದ್ಯುತ್‌ಗಾಗಿ ಕಾಯುವ ಸ್ಥಿತಿ ನಿರ್ಮಾಣವಾಗುತ್ತದೆ. ಕ್ಷೇತ್ರವಾರು ವಿಂಗಡಣೆ ಮಾಡಿ ಕೆಲಸ ಕೈಗೊಳ್ಳಿ, ಇಲ್ಲದಿದ್ದರೆ ರೈತ ಸಮುದಾಯದ ಗಮನಕ್ಕೆ ತಂದು ಕಾಮಗಾರಿ ಕೈಗೊಳ್ಳಿ ಎಂದು ಆಗ್ರಹಿಸಿದ ಅವರು, ಬೈಚವಳ್ಳಿ, ಕೊಪ್ಪರಸಿಕೊಪ್ಪ, ಕರಗುದರಿ ಫೀಡರ್‌ಗಳನ್ನು ಪ್ರತ್ಯೇಕಿಸಿದರೆ ಈ ಸಮಸ್ಯೆ ಬಗೆಹರಿಸಲು ಸಾಧ್ಯ ಎಂದು ಸಲಹೆ ನೀಡಿದರು.

ರೈತ ಸಂಘದ ತಾಲೂಕು ಅಧ್ಯಕ್ಷ ಮರಿಗೌಡ ಪಾಟೀಲ ಮಾತನಾಡಿ, ಅಕ್ರಮ-ಸಕ್ರಮದ ಯೋಜನೆಯಡಿ ಇತ್ತೀಚೆಗೆ 5880 ಜನ ರೈತರು ಅರ್ಜಿ ಸಲ್ಲಿಸಿದ್ದಾರೆ. ಅವರೆಲ್ಲರೂ ತಾತ್ಕಾಲಿಕವಾಗಿ ವಿದ್ಯುತ್‌ ಸಂಪರ್ಕ ಪಡೆದುಕೊಂಡಿದ್ದಾರೆ. ಹೆಚ್ಚುವರಿ ಒತ್ತಡದಿಂದಾಗಿ ಟ್ರಾನ್ಸ್‌ಫರ್ಮರಗಳು ಸುಟ್ಟುಹೋಗುತ್ತಿವೆ. ಆದರೆ, ಅವುಗಳನ್ನು ಬದಲಿಸಲು ಯಾರೂ ಕೈಜೋಡಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಿಗದಿತ ಕೊಳವೆಬಾವಿಗಳಿಗೆ ಮಾತ್ರ ವಿದ್ಯುತ್‌ ಸಂಪರ್ಕ ಕಲ್ಪಿಸಿ. ಇನ್ನು ವಿದ್ಯುತ್‌ ಜಾಗ್ರತ ದಳದ ಸಿಬ್ಬಂದಿ ಬೇಕಾಬಿಟ್ಟಿ ದಾಳಿ ನಡೆಸಿ ದಂಡ ಹಾಕುತ್ತಿದ್ದಾರೆ. ಅಕ್ರಮ ಜೋಡಣೆಗಳಿದ್ದಲ್ಲಿ, ಹೆಚ್ಚು ಬಳಕೆ ಮಾಡಿಕೊಂಡಲ್ಲಿ ನೋಟೀಸ್‌ ಜಾರಿ ಮಾಡಲಿ, ಕಾನೂನಿನ ಬಗ್ಗೆ ತಿಳುವಳಿಕೆ ನೀಡಲಿ. ಒಮ್ಮಿಂದೊಮ್ಮೆಲೆ ಮನಬಂದಂತೆ ದಂಡ ಹಾಕಿ ರೈತರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸುತ್ತಿರುವುದು ಸರಿಯಾದ ಕ್ರಮವಲ್ಲ. ಇದನ್ನು ರೈತ ಸಂಘ ಖಂಡಿಸುತ್ತದೆ. ಅನೇಕ ಅಧಿಕಾರಿಗಳು ಹಣಕ್ಕೆ ಬೇಡಿಕೆಯಿಡುತ್ತಿದ್ದಾರೆ ಎಂದು ಆರೋಪಿಸಿದರು.

ರೈತ ಮುಖಂಡ ರುದ್ರಪ್ಪ ಬಳಿಗಾರ ಮಾತನಾಡಿ, ದೀನದಯಾಳ ಉಪಾಧ್ಯಾಯ ಹಾಗೂ ಸೌಭಾಗ್ಯ ಯೋಜನೆಯಡಿ ಅಳವಡಿಸಿರುವ ಮೀಟರ್‌ಗಳಲ್ಲಿ 6 ತಿಂಗಳಿಗೊಮ್ಮೆ ಬಿಲ್ ನೀಡುತ್ತಿರುವುದರಿಂದ ಹೆಚ್ಚು ಹಣದ ಬಿಲ್ ಬರುತ್ತಿದೆ. ಮೂರ್‍ನಾಲ್ಕು ಹಂತ ಮೀರಿದ್ದರಿಂದ ಹೆಚ್ಚು ಹಣ ಆಕರಣೆಯಾಗುತ್ತಿದೆ. ಹೀಗಾಗಿ ತಿಂಗಳಿಗೊಮ್ಮೆ ಬಿಲ್ ನೀಡುವಂತೆ ಆಗ್ರಹಿಸಿದರು.

ಪಟ್ಟಣದ ಮನೆಗಳಿಗೆ ಅಳವಡಿಸಲಾಗಿರುವ ಹೊಸ ಮೀಟರ್‌ಗಳಿಂದಾಗಿ ಹಳೆ ಮೀಟರ್‌ಗಳಿಗಿಂತ ಹೆಚ್ಚು ಬಿಲ್ ಬರುತ್ತಿದೆ. ನಮಗೆ ಹೊಸ ಮೀಟರ್‌ ಬೇಡ, ಹಳೆಯ ಮೀಟರ್‌ಗಳನ್ನೇ ಕೂಡ್ರಿಸಿ ಎಂದು ಸಾರ್ವಜನಿಕರಾದ ಮುಸ್ತಾಕ್‌ಅಹ್ಮದ್‌ ಸುತಾರ್‌, ಮೊಹಿದ್ದೀನ್‌ ಹಳ್ಳೂರ, ಬಾಬಾಸಾಬ ಹೊಸಪೇಟೆ, ರಜಾಕ್‌ ಮುಲ್ಲಾ, ಜಿ.ಎ.ಪಠಾಣ ಒತ್ತಾಯಿಸಿದರು.

ಸಾರ್ವಜನಿಕ ಪ್ರಶ್ನೆಗಳಿಗೆ ಉತ್ತರಿಸಿದ ಹೆಸ್ಕಾಂ ಅಧಿಕಾರಿ ಎಸ್‌.ಎಸ್‌.ಜಿಂಗಾಡೆ, 110 ಕೆವಿ ಸ್ಟೇಶನ್‌ನಲ್ಲಿ ಬ್ರೇಕರ್‌ ಅಳವಡಿಸಲಾಗುತ್ತಿದ್ದು, 3 ತಿಂಗಳಲ್ಲಿ ಕ್ಷೇತ್ರ ವಿಂಗಡಣೆ ಮಾಡಲಾಗುತ್ತದೆ. ಎಲ್ಲ ಸಮಸ್ಯೆಗಳನ್ನೂ ಇಲಾಖೆ ಸಿಬ್ಬಂದಿಗಳೊಂದಿಗೆ ಚರ್ಚಿಸಿ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಎಂ.ಎಂ. ಬಡಗಿ, ಸೋಮಣ್ಣ ಜಡೆಗೊಂಡರ್‌, ರುದ್ರಪ್ಪ ಸಿಂಧೂರ, ಅಧಿಕಾರಿಗಳಾದ ಚನ್ನಪ್ಪ ದೊಡ್ಮನಿ, ಸಾಗರ ಗಣೇಶಗುಡಿ, ಎಂ.ಆರ್‌. ಸುಂಕದ, ಸಿ.ಎಸ್‌. ಅಪ್ಪಿನಬೈಲ, ಎಂ.ಎಂ. ಮುಲ್ಲಾ, ಸಿ.ಎಸ್‌. ಕುಲುಮಿ, ಎಸ್‌.ಬಿ. ವೆಂಕಣ್ಣನವರ, ಎಂ.ಬಿ. ಕೆಳಗಿನಕೇರಿ ಹಾಗೂ ಮೊದಲಾದವರು ಇದ್ದರು.

ಟಾಪ್ ನ್ಯೂಸ್

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.