ನರೇಗಾದಡಿ ವಿಕಲಚೇತನರಿಗೂ ಕಾಯಕ

ಅರ್ಹ ವಿಕಲಚೇತನರಿಗೆ ಉದ್ಯೋಗ ಚೀಟಿ

Team Udayavani, May 23, 2022, 3:41 PM IST

16

ಹಾವೇರಿ: ಮಹತ್ವಾಕಾಂಕ್ಷಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಅರಸಿ ಬರುವ ವಿಕಲಚೇತನರಿಗೆ ಜಿಲ್ಲೆಯ ಗ್ರಾಪಂಗಳು ಉದ್ಯೋಗ ಚೀಟಿ ವಿತರಿಸಿದ್ದು, ಈ ಮೂಲಕ ದುಡಿಯುವ ಕೈಗಳಿಗೆ ಉದ್ಯೋಗ ನೀಡಿ ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಲಾಗಿದೆ.

ಹೌದು, ಜಿಲ್ಲೆಯಲ್ಲಿ ನರೇಗಾ ಉದ್ಯೋಗ ಚೀಟಿ ವಿತರಿಸುವ ಅಭಿಯಾನದಲ್ಲಿ 18 ವರ್ಷ ಮೇಲ್ಪಟ್ಟ ಅರ್ಹ ವಿಕಲಚೇತನರಿಗೆ ಉದ್ಯೋಗ ಚೀಟಿ ನೀಡಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ವಿಕಲಚೇತನರಿಗೂ ಉದ್ಯೋಗ ನೀಡಿ ಪ್ರೋತ್ಸಾಹಿಸುವ ಕೆಲಸಕ್ಕೆ ಗ್ರಾಪಂಗಳು ಮುಂದಾಗಿವೆ.

1,717 ಉದ್ಯೋಗ ಚೀಟಿ ವಿತರಣೆ: 18 ವರ್ಷ ಮೇಲ್ಪಟ್ಟ ವಿಕಲಚೇತನರಿಗೂ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡಲು ಸರ್ಕಾರ ಅವಕಾಶ ಕಲ್ಪಿಸಿ ಆದೇಶಿಸಿದ ಹಿನ್ನೆಲೆಯಲ್ಲಿ, 2021-22ನೇ ಸಾಲಿನಲ್ಲಿ ಜಿಲ್ಲೆಯಲ್ಲಿರುವ ಅರ್ಹ ವಿಕಲಚೇತನರಿಗೆ ಉದ್ಯೋಗ ಚೀಟಿ ವಿತರಿಸುವ ಅಭಿಯಾನ ಕೈಗೊಂಡಿದ್ದ ಗ್ರಾಪಂಗಳು ಇಲ್ಲಿಯವರೆಗೂ ದೈಹಿಕವಾಗಿ ಸಮರ್ಥರಿರುವ ಒಟ್ಟು 1,717 ಮಂದಿಗೆ ಉದ್ಯೋಗ ಚೀಟಿ ವಿತರಿಸಿ, ದುಡಿಯುವ ಕೈಗಳಿಗೆ ಕೆಲಸ ನೀಡಿ ಆರ್ಥಿಕವಾಗಿ ಸದೃಢರನ್ನಾಗಿ ಮಾಡಲಾಗುತ್ತಿದೆ. ಈ ಪೈಕಿ ಜಿಲ್ಲೆಯ ಬ್ಯಾಡಗಿ ತಾಲೂಕಿನಲ್ಲಿ 173, ಹಾನಗಲ್ಲ 245, ಹಾವೇರಿ 351, ಹಿರೇಕೆರೂರು 227, ರಾಣಿಬೆನ್ನೂರ 283, ರಟ್ಟಿಹಳ್ಳಿ 124, ಸವಣೂರು 180 ಹಾಗೂ ಶಿಗ್ಗಾವಿ 184 ಮಂದಿ ಸೇರಿ ಒಟ್ಟು 1,717 ಮಂದಿ ಉದ್ಯೋಗ ಚೀಟಿಯನ್ನು ವಿಕಲಚೇತನರು ಪಡೆದುಕೊಂಡಿದ್ದಾರೆ.

623 ಮಂದಿಗೆ ಕೆಲಸ: ಜಿಲ್ಲೆಯಲ್ಲಿ ಉದ್ಯೋಗ ಚೀಟಿ ಪಡೆದ 1,717 ವಿಕಲಚೇತನರ ಪೈಕಿ ಬ್ಯಾಡಗಿ ತಾಲೂಕಿನಲ್ಲಿ 65, ಹಾನಗಲ್ಲ 78, ಹಾವೇರಿ 86, ಹಿರೇಕೆರೂರು 159, ರಾಣೆಬೆನ್ನೂರ 91, ರಟ್ಟಿಹಳ್ಳಿ 48, ಸವಣೂರು 57 ಹಾಗೂ ಶಿಗ್ಗಾವಿ 39 ಮಂದಿ ಸೇರಿ ಒಟ್ಟು 623 ವಿಕಲಚೇತನರು ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ ಉದ್ಯೋಗ ಅವಕಾಶ ಪಡೆದುಕೊಂಡಿದ್ದು, ವಿಕಲಚೇತನರಿಂದ ಒಟ್ಟು 15,963 ಮಾನವ ದಿನಗಳ ಸೃಜನೆ ಮಾಡಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ವಿಕಲಚೇತನರ ಪಾಲ್ಗೊಳ್ಳುವಿಕೆ ಜಿಲ್ಲೆಯ ಶಿಗ್ಗಾವಿ ತಾಲೂಕಿನಲ್ಲಿ ಕಡಿಮೆ ಇದ್ದರೆ, ಹಿರೇಕೆರೂರು ತಾಲೂಕಿನಲ್ಲಿ ಅತಿ ಹೆಚ್ಚು ಮಂದಿ ಇದ್ದಾರೆ. ನಂತರದ ಸ್ಥಾನದಲ್ಲಿ ರಾಣಿಬೆನ್ನೂರು, ಹಾವೇರಿ ಹಾಗೂ ಹಾನಗಲ್ಲ ತಾಲೂಕುಗಳಿವೆ.

ಜಿಲ್ಲೆಯಲ್ಲಿ 2021-22ನೇ ಸಾಲಿನಲ್ಲಿ 1,717 ವಿಕಲಚೇತನರಿಗೆ ಅಭಿಯಾನದ ಮೂಲಕ ನರೇಗಾ ಯೋಜನೆಯಡಿ ಉದ್ಯೋಗ ಚೀಟಿ ವಿತರಿಸಲಾಗಿದೆ. ಇಲ್ಲಿಯವರೆಗೂ ಒಟ್ಟು 623 ಮಂದಿ ವಿಕಲಚೇತನರು ನರೇಗಾ ಯೋಜನೆಯಡಿ ಕೆಲಸ ಪಡೆದಿದ್ದು, ಇವರಿಂದ 15,963 ಮಾನವ ದಿನಗಳ ಸೃಜನೆ ಮಾಡಲಾಗಿದೆ. –ಮಹಮ್ಮದ್‌ ರೋಷನ್‌, ಜಿಪಂ ಸಿಇಒ, ಹಾವೇರಿ

ಉದ್ಯೋಗ ಖಾತ್ರಿ ಕೆಲಸ ನೀಡಿದ್ದರಿಂದ ಕುಟುಂಬ ನಿರ್ವಹಣೆಗೆ ಅನುಕೂಲವಾಗಿದೆ. ಸರ್ಕಾರ ನರೇಗಾದಡಿ ವಿಕಲಚೇತನರಿಗೆ ಅವಕಾಶ ಕಲ್ಪಿಸಿದ್ದು ಖುಷಿ ನೀಡಿದೆ. ವಿಕಲಚೇನರಾಗಿದ್ದರಿಂದ ದಿನದಲ್ಲಿ ಶೇ.50ರಷ್ಟು ಕೆಲಸ ನೀಡಲಾಗುತ್ತಿದೆ. ಉದ್ಯೋಗ ಮಾಡಿ ಬಂದಿದ್ದ ಕೂಲಿ ಹಣ ನಮ್ಮ ಕುಟುಂಬ ನಿರ್ವಹಣೆಗೆ ವರದಾನವಾಗಿದೆ. –ಬಸವರಾಜ ಶಿವಣ್ಣನವರ, ನರೇಗಾ ಕೂಲಿ ಕಾರ್ಮಿಕರು

-ವೀರೇಶ ಮಡ್ಲೂರ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.