ಸಂಕಷ್ಟ ಪರಿಹರಿಸುವ ಜೋಕುಮಾರ ಸ್ವಾಮಿ


Team Udayavani, Sep 11, 2019, 10:53 AM IST

hv-tdy-1

ಅಕ್ಕಿಆಲೂರು: ಅಡ್ಡಡ್ಡ ಮಳಿ ಬಂದ, ದೊಡ್ಡ ದೊಡ್ಡ ಕೆರೆ ತುಂಬಿ ಗೊಡ್ಡುಗಳೆಲ್ಲ ಹೈನಾಗಿ ಜೋಕುಮಾರ, ಮಡಿವಾಳರ ಮನೆ ಹೊಕ್ಯಾನೆ ಜೋಕುಮಾರ…ಹೀಗೆ ಸಾಮೂಹಿಕವಾಗಿ ಮಹಿಳೆಯರು ಜೋಕುಮಾರನ ಕುರಿತು ಜನಪದ ಶೈಲಿಯಲ್ಲಿ ಹಾಡುವುದನ್ನು ಕೇಳುವುದೇ ಬಲು ಚಂದ.

ಜೋಕುಮಾರನ ಕುರಿತ ವಿಶಿಷ್ಟ ಜಾನಪದ ಹಾಡುಗಳನ್ನು ಹಾಡುವ ಮಹಿಳೆಯರ ತಂಡ, ಬಿದಿರಿನ ಬುಟ್ಟಿಯಲ್ಲಿ ಜೋಕುಮಾರನನ್ನು ಬೇವಿನ ಎಲೆಗಳ ಮಧ್ಯೆ ಪ್ರತಿಷ್ಠಾಪಿಸಿಕೊಂಡು ಆತನ ಬಾಯಿಯಲ್ಲಿ ಬೆಣ್ಣೆ ಇಟ್ಟು, ಮನೆಗಳಿಗೆ ಹೊತ್ತೂಯ್ಯುವ ಜೋಗಪ್ಪನ ಹಬ್ಬದ ಆಚರಣೆ ಅಕ್ಕಿಆಲೂರು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಂಡು ಬಂತು. ಈ ಭಾಗದಲ್ಲಿ ಮಳೆ-ಬೆಳೆ ಸಮೃದ್ಧಿಯಾಗಿ ಜನರು ಬದುಕು ಸುಧಾರಿಸಲಿ ಎಂಬ ಉದ್ಧೇಶದಿಂದ ಜೋಕುಮಾರನ ಹಬ್ಬ ಆಚರಣೆ ಮಾಡಲಾಗುತ್ತದೆ.

ಜೋಕುಮಾರನನ್ನು ಬುಟ್ಟಿಯಲ್ಲಿ ಕೂಡ್ರಿಸಿಕೊಂಡು ಮನೆ ಮನೆಗೆ ಹೊತ್ತೂಯ್ಯುವ ಮಹಿಳೆಯರು ಮನೆಗಳ ಮುಂದೆ ಜೋಕುಮಾರನಿಗೆ ವಿಶೇಷ ಪೂಜೆ ಸಲ್ಲಿಸಿ, ಆ ಮನೆಯಿಂದ ದವಸ ಧಾನ್ಯಗಳನ್ನು ಪಡೆದುಕೊಳ್ಳುತ್ತಾರೆ. ಮನೆಯ ಮಂದಿಯೆಲ್ಲ ಬೆಣ್ಣೆ ಪ್ರೀಯನಾದ ಜೋಕುಮಾರನ ಬಾಯಿಗೆ ಬೆಣ್ಣೆ ಸವರಿ ತಮ್ಮ ಹರಕೆಗಳು ಈಡೇರಲಿ ಎಂದು ಪ್ರಾರ್ಥಿಸುವುದು ವಾಡಿಕೆ. ಜೋಕುಮಾರನ ಕೈಯಲ್ಲಿ ಇರುವ ಖಡ್ಗ, ಆತನು ಶೂರನು ಮತ್ತು ಪರಾಕ್ರಮಿಯೂ ಎಂಬುದನ್ನು ಬಿಂಬಿಸುತ್ತದೆ. ಜೋಕುಮಾರನ ಪೂಜೆ ಮಾಡಿ ಹರಕೆ ಕಟ್ಟಿದರೆ ಬಂಜೆತನ ನಿವಾರಣೆಯಾಗುತ್ತದೆ ಎಂಬ ಪ್ರತೀತಿಯೂ ಗ್ರಾಮೀಣ ಭಾಗದಲ್ಲಿ ಪ್ರಸ್ತುತವಾಗಿದೆ.

ಹೀಗೆ ಜೋಕುಮಾರನ ಪೂಜೆ ನಂತರ ಜೋಕುಮಾರನನ್ನು ಹೊತ್ತು ತಂದ ಮಹಿಳೆಯರು ನೀಡುವ ಚರಗಾ ಎಂಬ ಪ್ರಸಾದವನ್ನು ರೈತರು ತಮ್ಮ ಹೊಲದಲ್ಲಿ ಚೆಲ್ಲಿದರೆ ಬೆಳೆ ಹುಲುಸಾಗಿ ಬೆಳೆಯುತ್ತದೆ ಎಂಬ ನಂಬಿಕೆ ಇದೆ. ಹಿಂದೂ ಸಂಪ್ರದಾಯ ಆಚರಣೆಗಳಲ್ಲಿ ವಿಶಿಷ್ಟತೆಗಳ ಮಹಾಪೂರವೇ ಇದ್ದು, ಜೋಕುಮಾರನ ಹಬ್ಬ ನಮ್ಮ ಸಂಸ್ಕೃತಿಯ ಒಂದು ಭಾಗವಾಗಿದೆ. ಪ್ರತಿವರ್ಷ ಗಣೇಶ ಹಬ್ಬದ ನಡುವೆ ಜೋಕುಮಾರನ ಪೂಜೆ ನಡೆಯುವುದು ವಾಡಿಕೆ.

ಭೂಲೋಕದಲ್ಲಿ ಹನ್ನೊಂದು ದಿನಗಳ ಕಾಲ ಮನೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಪೂಜೆ ಮಾಡಿಸಿಕೊಂಡು, ಭಕ್ತಕೋಟಿ ಅರ್ಪಿಸುವ ಕಡುಬು-ಮೋದಕ, ಉಂಡಿಗಳನ್ನು ಸೇವಿಸಿ ಗಣೇಶನು ವಿಸರ್ಜನೆ ನಂತರ ಕೈಲಾಸಕ್ಕೆ ತೆರಳಿ, ಭೂಲೋಕದಲ್ಲಿ ಜನರು ಚನ್ನಾಗಿದ್ದಾರೆ ಎಂದು ಶಿವನಲ್ಲಿ ವರದಿ ಒಪ್ಪಿಸುತ್ತಾನೆ. ಆದರೆ, ಬುಟ್ಟಿಯಲ್ಲಿದ್ದುಕೊಂಡು ಬಿಸಿಲಿನಲ್ಲಿ ಮನೆಮನೆಗೆ ಹೋಗಿ ಪೂಜೆಗೊಂಡ ಜೋಕುಮಾರ ವಿಸರ್ಜನೆಯ ನಂತರ ಶಿವನಿಗೆ ಜನರ ಸಂಕಷ್ಟಗಳನ್ನು ಮನವರಿಕೆ ಮಾಡಿ ಉತ್ತಮ ಮಳೆ-ಬೆಳೆ ನೀಡುವಂತೆ ಶಿವನಲ್ಲಿ ಪ್ರಾರ್ಥಿಸುತ್ತಾನೆ ಎಂಬ ದೃಢವಾದ ನಂಬಿಕೆಯಿಂದಲೇ ಈ ಜೋಕುಮಾರ ಹಬ್ಬದ ವಿಶಿಷ್ಟ ಆಚರಣೆ ಇಂದಿಗೂ ಪ್ರಸ್ತುತವಾಗಿದೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.