ಸಮಸಮಾಜ ನಿರ್ಮಾಣಕ್ಕೆ ದಾಸ ಸಾಹಿತ್ಯ ಸಂದೇಶ
Team Udayavani, Nov 16, 2019, 1:03 PM IST
ಹಾವೇರಿ: ಜಿಲ್ಲೆಯಲ್ಲಿ ಉಪಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಭಕ್ತ ಕನಕದಾಸರ ಜಯಂತಿಯನ್ನು ಶುಕ್ರವಾರ ಜಿಲ್ಲಾಡಳಿತದಿಂದ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕನಕದಾಸರು 15ನೇ ಶತಮಾನದ ಶ್ರೇಷ್ಠಕವಿಗಳು, ಚಿಂತಕರು, ಸಮಾಜ ಸುಧಾರಕರು ಹಾಗೂ ನಾಡಿನ ಸಂಸ್ಕೃತಿಯ ನಿರ್ಮಾತೃಗಳು. ಸಮಾಜದ ಮೌಡ್ಯ ತೊಡೆದುಹಾಕಿ ಮನುಕುಲ ಒಂದೇ ಎಂಬ ಸಮಾನತೆಯ ಮಂತ್ರ ಸಾರಿದ ಹರಿಕಾರರು. ಕನಕರ ತತ್ವ ಆದರ್ಶಗಳು ನಮಗೆ ದಾರಿ ದೀಪವಾಗಲಿ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಮೇಶ ದೇಸಾಯಿ ಮಾತನಾಡಿ, ದಾಸ ಪರಂಪರೆಯಲ್ಲಿ ಕನಕದಾಸರ ಕೊಡುಗೆ ಅಪಾರ. ಸಮಾಜದಲ್ಲಿರುವ ಮೌಡ್ಯತೆ, ಅಹಂಕಾರ ತೊಡೆದು ಜನರಿಗೆ ಜ್ಞಾನ, ಸೌಹಾರ್ದತೆ ನೀಡುವಲ್ಲಿ ತಮ್ಮ ಜೀವನ ಮುಡುಪಾಗಿಟ್ಟವರು. ಇಂತಹ ಜಗತ್ ಪ್ರಖ್ಯಾತ ವ್ಯಕ್ತಿಗಳು ನಮ್ಮ ಜಿಲ್ಲೆಯಲ್ಲಿ ಜನಿಸಿದ್ದು ನಮ್ಮ ಪುಣ್ಯ ಎಂದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಸಮಾಜದಲ್ಲಿ ಜಾತಿ ವ್ಯವಸ್ಥೆ ಇನ್ನೂ ಜೀವಂತವಾಗಿವೆ. ಆದರೆ, ಕನಕದಾಸರು ಮೇಲು ಕೀಳು ಎಂಬ ಜಾತಿ ಮತ ಸಿದ್ಧಾಂತದ ವಿರುದ್ಧ ಹೋರಾಡಿ ಎಲ್ಲ ಜನಾಂಗದವರ ಮನದಲ್ಲಿ ಆದರ್ಶದ ಬೀಜ ಬಿತ್ತಿದ್ದಾರೆ. ಸಮಸಮಾಜದ ಪ್ರತಿಪಾದನೆಯ ಕನಕರ ಸಿದ್ಧಾಂತಗಳ ಪಾಲನೆ ನಮ್ಮೆಲ್ಲರ ಕರ್ತವ್ಯ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಕುರುಬ ಸಂಘದ ಅಧ್ಯಕ್ಷ ಮುದಕಣ್ಣನವರ, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಮಾಜದ ಮುಖಂಡರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ