ಕಾಗಿನೆಲೆಯಲ್ಲಿ “ಕನಕ ಕಾವ್ಯ ಗೋಪುರ’


Team Udayavani, Sep 27, 2018, 6:50 AM IST

kanaka.jpg

ಹಾವೇರಿ: ಕಾಗಿನೆಲೆಯ “ಕನಕ’ ಪರಿಸರ ಸ್ನೇಹಿ ಉದ್ಯಾನವನದ ಬೃಹತ್‌ ಐದು ಬಂಡೆಗಳ ಮೇಲೆ ಕನಕದಾಸರ ಕಾವ್ಯ, ಕೀರ್ತನೆಗಳ ಸಾರವನ್ನು ಚಿತ್ರದ ಮೂಲಕ ನೋಡುಗರಿಗೆ ಪ್ರದರ್ಶಿಸುವ “ಕನಕ ಕಾವ್ಯ ಗೋಪುರ’ ಸಾಕಾರಗೊಳ್ಳುತ್ತಿದೆ.
ಕಾವ್ಯ, ಕಾದಂಬರಿ, ಕಥೆ, ಕೀರ್ತನೆ ಹೀಗೆ ಪುಸ್ತಕ ಓದುವ ಹವ್ಯಾಸವೇ ನಶಿಸುತ್ತಿರುವ ಇಂದಿನ ದಿನಗಳಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿ ಕಾರ ಇಂಥದೊಂದು ವಿಶಿಷ್ಟ ಆಲೋಚನೆಯನ್ನು ಅನುಷ್ಠಾನಗೊಳಿಸಲು ಸಿದ್ಧತೆ ನಡೆದಿದೆ. ಬಂಡೆಗಳ ಮೇಲೆ ಉಬ್ಬು ಚಿತ್ರಗಳ ಮೂಲಕ ದಾಸಶ್ರೇಷ್ಠರ ಮೋಹನ ತರಂಗಿಣಿ, ನಳಚರಿತ್ರೆ, ರಾಮಧಾನ್ಯ ಚರಿತ್ರೆ, ಹರಿಭಕ್ತಿಸಾರ ಕಾವ್ಯ, ಕೀರ್ತನೆಗಳನ್ನು ಪ್ರಚುರ ಪಡಿಸುವ ಪ್ರಯತ್ನ ನಡೆದಿದೆ.

ಕಾವ್ಯ ಗೋಪುರ: ಒಂದರ ಮೇಲೊಂದರಂತೆ ಜೋಡಿಸಿಟ್ಟಿರುವ ಐದು ಬೃಹತ್‌ ಬಂಡೆಗಳ ಗೋಪುರದ ಸುತ್ತ ಕನಕರ ಸಾಹಿತ್ಯವನ್ನು ಉಬ್ಬು ಚಿತ್ರದ ಮೂಲಕ ತೋರಿಸಿ, ಜನರಿಗೆ ಸುಲಭವಾಗಿ ಕನಕರ ಸಾಹಿತ್ಯದ ತಿರುಳು ತಿಳಿಸುವ ಕಾರ್ಯಕ್ಕೆ ಕಾಗಿನೆಲೆ ಪ್ರಾ ಧಿಕಾರ ಮುಂದಾಗಿದೆ. ಒಮ್ಮೆ ಬೃಹತ್‌ ಬಂಡೆಯನ್ನು ಸುತ್ತು ಹಾಕಿದರೆ ಕನಕರ ಅತ್ಯಮೂಲ್ಯ ಕಾವ್ಯ, ಕೀರ್ತನೆಗಳ ಸಾರ ಮನದಲ್ಲಿ ಉಳಿಸುವ ಪ್ರಯತ್ನ ಇದಾಗಿದೆ.

75ಅಡಿ ಎತ್ತರ: ನೈಸರ್ಗಿಕ ಬಣ್ಣದೊಂದಿಗೆ ನೈಜ ಕಲ್ಲಿನ ಬಂಡೆಗಳಂತೆ ಕಾಣುವ ರೀತಿಯಲ್ಲಿ ಸಿಮೆಂಟ್‌ನಲ್ಲಿ ನಿರ್ಮಿಸುವ ಈ “ಕನಕ ಗೋಪುರ’ ಬರೋಬರಿ 75 ಅಡಿ ಎತ್ತರ ಇರಲಿದ್ದು, ಉತ್ಸವ ರಾಕ್‌ ಗಾರ್ಡನ್‌ನ 25 ಕಲಾವಿದರು ಈ ಉಬ್ಬು ಚಿತ್ರ ಚಿತ್ರಿಸುವ ಕುಸರಿ ಕೆಲಸದಲ್ಲಿ ನಿರತರಾಗಿದ್ದಾರೆ. ಕೆಳಗೆ ನಿಂತವರಿಗೂ ಕಾಣುವ ರೀತಿಯಲ್ಲಿ ವಿಶಿಷ್ಟವಾಗಿ ಬೃಹದಾಕಾರವಾಗಿ ಚಿತ್ರಿಸುವ ಆಲೋಚನೆ ಕಲಾವಿದರದ್ದಾಗಿದೆ. ಅಂದಾಜು 50 ಲಕ್ಷ ರೂ.ಗಳ ವೆಚ್ಚದಲ್ಲಿ ಈ ಕನಕ ಗೋಪುರ ನಿರ್ಮಿಸಲಾಗುತ್ತಿದೆ. ಬಂಡೆಗಳ ಅಡಿಯಲ್ಲಿ ಧ್ಯಾನ ಮಂದಿರ ಸಹ ನಿರ್ಮಿಸಿ ನೋಡುಗರನ್ನು ಆಕರ್ಷಿಸುವ ಕೆಲಸ ಮಾಡಲಾಗುತ್ತಿದೆ.

ಕನಕದಾಸರ ಕರ್ಮಭೂಮಿ ಕಾಗಿನೆಲೆಯನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವನ್ನಾಗಿಸುವತ್ತ ದಿಟ್ಟ ಹೆಜ್ಜೆ ಇಟ್ಟಿರುವ ಕಾಗಿನೆಲೆ ಅಭಿವೃದ್ಧಿ ಪ್ರಾಧಿ ಕಾರ, ಕಾಗಿನೆಲೆಯ ಸೌಂದರ್ಯ ಹೆಚ್ಚಿಸುವ ಕೆಲಸ ಮಾಡುತ್ತಲೇ ಬಂದಿದೆ. ಬೃಹತ್‌ ಕನಕ ಪರಿಸರಸ್ನೇಹಿ ಉದ್ಯಾನದಲ್ಲಿ ಕನಕ ಶಿಲ್ಪವನ, ಸಂಗೀತ ಕಾರಂಜಿ, ಶಂಖನಾದ ಮೊಳಗಿಸುವ ಮಾದರಿಯ ಬೃಹತ್‌ ಕನಕರ ಕಲಾಕೃತಿ, ವೀಕ್ಷಣಾ ಗೋಪುರ ಪ್ರವಾಸಿಗರಿಗೆ ಆಕರ್ಷಣೀಯವಾಗಿದೆ.

ಕಾಗಿನೆಲೆ ತಾಣದ ಸೌಂದರ್ಯ ಹೆಚ್ಚಿಸಲು ಹಾಗೂ ಕನಕರ ಸಾಹಿತ್ಯದ ತಿರುಳನ್ನು ಜನರಿಗೆ ಚಿತ್ರದ ಮೂಲಕ ಪರಿಚಯಿಸುವ ಉದ್ದೇಶದಿಂದ “ಕನಕ ಗೋಪುರ’ ನಿರ್ಮಿಸಲಾಗುತ್ತಿದೆ. ನಾಲ್ಕೈದು ತಿಂಗಳಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದ್ದು, ಇದರಿಂದ ಕಾಗಿನೆಲೆಯ ಮೆರಗು ಇನ್ನಷ್ಟು ಹೆಚ್ಚಲಿದೆ.
– ಮಲ್ಲೇಶಪ್ಪ ಹೊರಪೇಟೆ, ಆಯುಕ್ತರು, ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ.

– ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.