ಕನ್ನಡಕ್ಕೆ ಕುತ್ತು ತರುವಶಕ್ತಿ ಈವರೆಗೂ ಹುಟ್ಟಿಲ್ಲ; ರಾಜಾಹುಲಿಗೆ ಸಾಹಿತಿಗಳ ಬಹುಪರಾಕ್‌

ದೊಡ್ಡರಂಗೇಗೌಡರು ಹೆಸರಿನಂತೆ ದೊಡ್ಡ ಹೃದಯ, ಮನಸ್ಸುಳ್ಳವರಾಗಿದ್ದಾರೆ.

Team Udayavani, Jan 7, 2023, 11:48 AM IST

ಕನ್ನಡಕ್ಕೆ ಕುತ್ತು ತರುವಶಕ್ತಿ ಈವರೆಗೂ ಹುಟ್ಟಿಲ್ಲ; ರಾಜಾಹುಲಿಗೆ ಸಾಹಿತಿಗಳ ಬಹುಪರಾಕ್‌

ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆ (ಹಾವೇರಿ): ಕನ್ನಡಕ್ಕೆ ಆಪತ್ತು ಎಂಬ ಆತಂಕದಿಂದ ಹೊರಬನ್ನಿ. ಕನ್ನಡಕ್ಕೆ ಆತಂಕ ತರುವ ಶಕ್ತಿ ಜಗತ್ತಿನಲ್ಲಿ ಈವರೆಗೆ ಹುಟ್ಟಿಲ್ಲ. ಮುಂದೆಯೂ ಹುಟ್ಟುವುದಿಲ್ಲ ಎಂಬ ಆತ್ಮವಿಶ್ವಾಸ ಹೊಂದಿರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡಕ್ಕೆ ತನ್ನದೇ ಆದ ಅಂತರ್‌ ಶಕ್ತಿ ಇದೆ. ಕನ್ನಡ ಸಂಸ್ಕೃತಿಗೆ ಭಾಷೆಯ ಕೊಡುಗೆ ದೊಡ್ಡದಿದೆ. ಕನ್ನಡ ಶ್ರೀಮಂತವಾಗಿದ್ದು ಜಗತ್ತಿನಲ್ಲಿ ಅತ್ಯಂತ ಪ್ರಾಚೀನ ಭಾಷೆ.

ಇದು ಕನ್ನಡಿಗರ ಬದುಕು ಬಹಳ ಪುರಾತನ ಹಾಗೂ ಶ್ರೇಷ್ಠ ಎಂಬುದನ್ನು ಸಾರುತ್ತದೆ. ಕನ್ನಡ ಸಂಸ್ಕೃತಿಗೆ ವಿಶಿಷ್ಟ ಶಕ್ತಿ ಇದ್ದು ಇಂಥ ವಿಶಿಷ್ಟ ಕನ್ನಡದ ಬೆಳವಣಿಗೆಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದರು.

ಅನೇಕರು ಒಟ್ಟಾಗಿ ಹೋರಾಡಿದ ಫಲವಾಗಿ ಕರ್ನಾಟಕ ರೂಪುಗೊಂಡಿದೆ. ಮೈಸೂರು ಎಂದಿದ್ದ ರಾಜ್ಯಕ್ಕೆ ಕರ್ನಾಟಕ ಎಂಬ ಹೆಸರಿಟ್ಟ ದಿ| ದೇವರಾಜು ಅರಸು ಅವರನ್ನೂ ಈ ಸಂದರ್ಭದಲ್ಲಿ ನೆನೆಯಬೇಕು. ಕನ್ನಡನಾಡು ಸಂಪತ್ಭರಿತವಾಗಿದೆ.

ಕನ್ನಡ ನಾಡಿನ ಕೃಷಿ ಸಂಪತ್ತಿಗೆ ನಿಸರ್ಗದ ಕೊಡುಗೆ ಅಪಾರವಾಗಿದ್ದು ಇದಕ್ಕೆ ರೈತರ ಬೆವರು, ಕಾರ್ಮಿಕರ ಶ್ರಮ ಬೆರೆಸಿ ಸ್ವಾವಲಂಬನೆ ಹಾಗೂ ಸ್ವಾಭಿಮಾನದ ಬದುಕು ಕಟ್ಟಿ ಕೊಳ್ಳಲಾಗುತ್ತಿದೆ. ಸಮ್ಮೇಳನಾಧ್ಯಕ್ಷರಾದ ದೊಡ್ಡರಂಗೇಗೌಡರು ಹೆಸರಿನಂತೆ ದೊಡ್ಡ ಹೃದಯ, ಮನಸ್ಸುಳ್ಳವರಾಗಿದ್ದಾರೆ. ಜತೆಗೆ ಎಲ್ಲ ರಂಗಗಳಲ್ಲಿ ಪರಿ ಪೂರ್ಣರು ಎಂಬುದನ್ನು ತೋರಿಸುತ್ತದೆ ಎಂದು ಬೊಮ್ಮಾಯಿ ಹೇಳಿದರು.

ರಾಜಾಹುಲಿಗೆ ಸಾಹಿತಿಗಳ ಬಹುಪರಾಕ್‌
ರಾಜಕೀಯ ಸಮಾವೇಶಗಳಲ್ಲಿ ಜೋರಾದ ಶಿಳ್ಳೆ, ಚಪ್ಪಾಳ್ಳೆಗಳು ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಸರ್ವೇ ಸಾಮಾನ್ಯ. ಆದರೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆಯಲ್ಲೂ ಬಿಎಸ್‌ವೈಗೆ ಸಾಹಿತ್ಯ ಪ್ರೇಮಿಗಳು ಭರ್ಜರಿ ಕೂಗು, ಶಿಳ್ಳೆ, ಚಪ್ಪಾಳೆಗಳ ಮೂಲಕ ಬಹುಪರಾಕ್‌ ಹಾಕಿದ್ದು ವಿಶೇಷವಾಗಿತ್ತು. ಮುಖ್ಯಮಂತ್ರಿಗಳು ತಮ್ಮ ಭಾಷಣದ ಸಂದರ್ಭದಲ್ಲಿ, ಸ್ವಾಗತಕಾರರು ಸ್ವಾಗತ ಭಾಷಣ ಮಾಡುವಾಗ ಅಷ್ಟೇ ಏಕೆ ಅತಿಥಿಗಳು ಭಾಷಣ
ಮಾಡುವಾಗೊಮ್ಮೆ ಬಿಎಸ್‌ವೈ ಹೆಸರು ಹೇಳುತ್ತಿದ್ದಂತೆಯೇ ಸೇರಿದ್ದ ಜನಸ್ತೋಮ ಶಿಳ್ಳೆ, ಚಪ್ಪಾಳೆ ಮೂಲಕ ಬಿಎಸ್‌ವೈಗೆ ಬಹುಪರಾಕ್‌ ಹಾಕಿದರು.

ನಾನೊಬ್ಬ ಕನ್ನಡದ ಸೇವಕ. ನಿಯತ್ತಿನ ಹಾಗೂ ಪ್ರಾಮಾಣಿಕ ಸೇವಕ. ಕನ್ನಡ ಭಾಷೆಗೆ ಹತ್ತು ಹಲವು ಸವಾಲಿದ್ದು ಬದುಕಿನ ಎಲ್ಲ ಕ್ಷೇತ್ರಗಳಲ್ಲಿ ಕನ್ನಡ ಉಳಿಸಿ ಬೆಳೆಸಲು ಬೇಕಾದ ಸಮಗ್ರ ಕಾನೂನು ಸ್ವರೂಪ ಕೊಡಲಾಗುತ್ತಿದೆ.

● ಬಸವರಾಜ ಬೊಮ್ಮಾಯಿ, ಸಿಎಂ

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.