ಕನ್ನಡಕ್ಕೆ ಕುತ್ತು ತರುವ ಶಕ್ತಿ ಈವರೆಗೂ ಹುಟ್ಟಿಲ್ಲ: ಬೊಮ್ಮಾಯಿ


Team Udayavani, Jan 7, 2023, 6:45 AM IST

ಕನ್ನಡಕ್ಕೆ ಕುತ್ತು ತರುವ ಶಕ್ತಿ ಈವರೆಗೂ ಹುಟ್ಟಿಲ್ಲ

ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆ (ಹಾವೇರಿ): ಕನ್ನಡಕ್ಕೆ ಆಪತ್ತು ಎಂಬ ಆತಂಕದಿಂದ ಹೊರಬನ್ನಿ. ಕನ್ನಡಕ್ಕೆ ಆತಂಕ ತರುವ ಶಕ್ತಿ ಜಗತ್ತಿನಲ್ಲಿ ಈವರೆಗೆ ಹುಟ್ಟಿಲ್ಲ. ಮುಂದೆಯೂ ಹುಟ್ಟುವುದಿಲ್ಲ ಎಂಬ ಆತ್ಮವಿಶ್ವಾಸ ಹೊಂದಿರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡಕ್ಕೆ ತನ್ನದೇ ಆದ ಅಂತರ್‌ ಶಕ್ತಿ ಇದೆ. ಕನ್ನಡ ಸಂಸ್ಕೃತಿಗೆ ಭಾಷೆಯ ಕೊಡುಗೆ ದೊಡ್ಡದಿದೆ. ಕನ್ನಡ ಶ್ರೀಮಂತವಾಗಿದ್ದು ಜಗತ್ತಿನಲ್ಲಿ ಅತ್ಯಂತ ಪ್ರಾಚೀನ ಭಾಷೆ. ಇದು ಕನ್ನಡಿಗರ ಬದುಕು ಬಹಳ ಪುರಾತನ ಹಾಗೂ ಶ್ರೇಷ್ಠ ಎಂಬುದನ್ನು ಸಾರುತ್ತದೆ. ಕನ್ನಡ ಸಂಸ್ಕೃತಿಗೆ ವಿಶಿಷ್ಟ ಶಕ್ತಿ ಇದ್ದು ಇಂಥ ವಿಶಿಷ್ಟ ಕನ್ನಡದ ಬೆಳವಣಿಗೆಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದರು.

ಅನೇಕರು ಒಟ್ಟಾಗಿ ಹೋರಾಡಿದ ಫಲವಾಗಿ ಕರ್ನಾಟಕ ರೂಪು ಗೊಂಡಿದೆ. ಮೈಸೂರು ಎಂದಿದ್ದ ರಾಜ್ಯಕ್ಕೆ ಕರ್ನಾಟಕ ಎಂಬ ಹೆಸರಿಟ್ಟ ದಿ| ದೇವರಾಜು ಅರಸು ಅವರನ್ನೂ ಈ ಸಂದರ್ಭದಲ್ಲಿ ನೆನೆಯ ಬೇಕು. ಕನ್ನಡನಾಡು ಸಂಪತ½ರಿತವಾಗಿದೆ. ಕನ್ನಡ ನಾಡಿನ ಕೃಷಿ ಸಂಪತ್ತಿಗೆ ನಿಸರ್ಗದ ಕೊಡುಗೆ ಅಪಾರವಾಗಿದ್ದು ಇದಕ್ಕೆ ರೈತರ ಬೆವರು, ಕಾರ್ಮಿಕರ ಶ್ರಮ ಬೆರೆಸಿ ಸ್ವಾವಲಂಬನೆ ಹಾಗೂ ಸ್ವಾಭಿಮಾ ನದ ಬದುಕು ಕಟ್ಟಿ ಕೊಳ್ಳಲಾಗುತ್ತಿದೆ. ಸಮ್ಮೇ ಳನಾಧ್ಯಕ್ಷರಾದ ದೊಡ್ಡರಂಗೇ ಗೌಡರು ಹೆಸರಿನಂತೆ ದೊಡ್ಡ ಹೃದಯ, ಮನಸ್ಸುಳ್ಳವರಾ ಗಿ ದ್ದಾರೆ. ಜತೆಗೆ ಎಲ್ಲ ರಂಗಗಳಲ್ಲಿ ಪರಿ ಪೂರ್ಣರು ಎಂಬುದನ್ನು ತೋರಿಸುತ್ತದೆ ಎಂದು ಬೊಮ್ಮಾಯಿ ಹೇಳಿದರು.

ರಾಜಾಹುಲಿಗೆ ಸಾಹಿತಿಗಳ ಬಹುಪರಾಕ್‌
ರಾಜಕೀಯ ಸಮಾವೇಶಗಳಲ್ಲಿ ಜೋರಾದ ಶಿಳ್ಳೆ, ಚಪ್ಪಾಳೆಗಳು ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಸರ್ವೇ ಸಾಮಾನ್ಯ. ಆದರೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆಯಲ್ಲೂ ಬಿಎಸ್‌ವೈಗೆ ಸಾಹಿತ್ಯ ಪ್ರೇಮಿಗಳು ಭರ್ಜರಿ ಕೂಗು, ಶಿಳ್ಳೆ, ಚಪ್ಪಾಳೆಗಳ ಮೂಲಕ ಬಹುಪರಾಕ್‌ ಹಾಕಿದ್ದು ವಿಶೇಷವಾಗಿತ್ತು. ಮುಖ್ಯಮಂತ್ರಿಗಳು ತಮ್ಮ ಭಾಷಣದ ಸಂದರ್ಭದಲ್ಲಿ, ಸ್ವಾಗತಕಾರರು ಸ್ವಾಗತ ಭಾಷಣ ಮಾಡುವಾಗ ಅಷ್ಟೇ ಏಕೆ ಅತಿಥಿಗಳು ಭಾಷಣ ಮಾಡುವಾಗೊಮ್ಮೆ ಬಿಎಸ್‌ವೈ ಹೆಸರು ಹೇಳುತ್ತಿದ್ದಂತೆಯೇ ಸೇರಿದ್ದ ಜನಸ್ತೋಮ ಶಿಳ್ಳೆ, ಚಪ್ಪಾಳೆ ಮೂಲಕ ಬಿಎಸ್‌ವೈಗೆ ಬಹುಪರಾಕ್‌ ಹಾಕಿದರು.

ನಾನೊಬ್ಬ ಕನ್ನಡದ ಸೇವಕ. ನಿಯತ್ತಿನ ಹಾಗೂ ಪ್ರಾಮಾಣಿಕ ಸೇವಕ. ಕನ್ನಡ ಭಾಷೆಗೆ ಹತ್ತು ಹಲವು ಸವಾಲಿದ್ದು ಬದುಕಿನ ಎಲ್ಲ ಕ್ಷೇತ್ರಗಳಲ್ಲಿ ಕನ್ನಡ ಉಳಿಸಿ ಬೆಳೆಸಲು ಬೇಕಾದ ಸಮಗ್ರ ಕಾನೂನು ಸ್ವರೂಪ ಕೊಡಲಾಗುತ್ತಿದೆ.
-ಬಸವರಾಜ ಬೊಮ್ಮಾಯಿ, ಸಿಎಂ

-ಎಚ್‌.ಕೆ.ನಟರಾಜ್‌

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.