ಹೊರ ರಾಜ್ಯದಿಂದ ಬಂದವರ ಮೇಲೆ ನಿಗಾ

ಶಿಗ್ಗಾವಿ-ಸವಣೂರು ಮಾದರಿಯಲ್ಲೇ ಜನರ ಆರೋಗ್ಯ ತಪಾಸಣೆ ನಡೆಯಲಿ: ಡಿಸಿ ಭಾಜಪೇಯಿ

Team Udayavani, May 28, 2020, 7:38 AM IST

ಹೊರ ರಾಜ್ಯದಿಂದ ಬಂದವರ ಮೇಲೆ ನಿಗಾ

ಹಾವೇರಿ: ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಹಶೀಲ್ದಾರರೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಹಾವೇರಿ: “ಸೇವಾ ಸಿಂಧು’ ಆ್ಯಪ್‌ನಲ್ಲಿ ದಾಯಿಸಿಕೊಳ್ಳದೆ ಅನ್ಯಮಾರ್ಗದಲ್ಲಿ ಯಾರಾದರೂ ಹೊರ ರಾಜ್ಯದಿಂದ ಜಿಲ್ಲೆಯೊಳಗೆ ಬಂದಿದ್ದರೆ ಅವರನ್ನು ಪತ್ತೆ ಮಾಡಿ ಕೂಡಲೇ ಕ್ವಾರಂಟೈನ್‌ಗೆ ಒಳಪಡಿಸಬೇಕು ಹಾಗೂ ಅವರ ಗಂಟಲು ದ್ರವ ಲ್ಯಾಬ್‌ಗ ಕಳುಹಿಸಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಎಲ್ಲ ತಹಶೀಲ್ದಾರ್‌ಗೆ ಸೂಚಿಸಿದರು.

ತಾಲೂಕು ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದ ವೇಳೆ ಅವರು ಮಾತನಾಡಿದರು. ಸೇವಾ ಸಿಂಧು ನೋಂದಣಿ ಪ್ರಕಾರ ಹೊರ ರಾಜ್ಯದಿಂದ ಜಿಲ್ಲೆಗೆ ಆಗಮಿಸಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರುವವರು, ಕ್ವಾರಂಟೈನ್‌ ಅವಧಿ ಮುಗಿಸಿದವರು, ಗೃಹ ಕ್ವಾರಂಟೈನ್‌ ಆದವರ ನಿಖರ ಮಾಹಿತಿಯನ್ನು ಪ್ರತಿ ತಹಶೀಲ್ದಾರರು ಹೊಂದಬೇಕು. ಯಾವುದೇ ಕಾರಣಕ್ಕೂ ಹೊರ ರಾಜ್ಯದಿಂದ ಬಂದವರು ಆರೋಗ್ಯ ತಪಾಸಣೆ ಹಾಗೂ ಕ್ವಾರಂಟೈನ್‌ನಿಂದ ಹೊರಗುಳಿಯಬಾರದು. ಆರೋಗ್ಯ ಇಲಾಖೆಯ ಎಸ್‌ಓಪಿ ಪ್ರಕಾರ ಕ್ರಮವಹಿಸಬೇಕು ಹಾಗೂ ಸೋಂಕು ಹೆಚ್ಚಾಗಿರುವ ಜಿಲ್ಲೆಗಳಿಂದ ಬರುವವರ ಮೇಲೂ ನಿಗಾವಹಿಸಬೇಕು. ಅಗತ್ಯ ಬಿದ್ದರೆ ತಪಾಸಣೆಗೆ ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು. ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರುವವರಿಗೆ ಉತ್ತಮ ಊಟ, ಉಪಹಾರ ನೀಡಬೇಕು. ಯಾವುದೇ ಕೊರತೆಯಾಗಬಾರದು. ಸ್ವತ್ಛತೆಗೆ ಆದ್ಯತೆ ನೀಡಬೇಕು. ಅಗತ್ಯವಿದ್ದರೆ ಕ್ವಾರಂಐನ್‌ ಕೇಂದ್ರಗಳಿಗೆ ಪ್ರತ್ಯೇಕ ಸ್ವಚ್ಛತಾ ಕೆಲಸಗಾರರನ್ನು ನೇಮಕ ಮಾಡಿಕೊಳ್ಳಬೇಕು. ಮಾಸ್ಕ್, ಸ್ಯಾನಿಟೈಸರ್‌ ಸೇರಿದಂತೆ ಎಲ್ಲ ವ್ಯವಸ್ಥೆ ಮಾಡಿ ಕ್ವಾರಂಟೈನ್‌ ಸೆಂಟರ್‌ನಿಂದ ಸೋಂಕು ಹರಡಬಾರದು. ಈ ಕುರಿತಂತೆ ನಿರಂತರ ತಪಾಸಣೆ ನಡೆಸಿ ಒಂದೊಮ್ಮೆ ಈ ಕೇಂದ್ರಗಳಿಂದ ಸೋಂಕು ಹರಡಿದರೆ ತಾಲೂಕು ವೈದ್ಯಾಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.

ಕ್ವಾರಂಟೈನ್‌ ಕೇಂದ್ರದ ನಿರ್ವಹಣೆ ಕುರಿತಂತೆ ಈಗಾಗಲೇ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೇಮಿಸಲಾಗಿದೆ. ಇಲ್ಲಿನ ಸೌಕರ್ಯಗಳ ಕುರಿತಂತೆ ಸಮಗ್ರ ವರದಿ ಸಲ್ಲಿಸಲು ಸೂಚಿಸಲಾಗಿದೆ. ಕೇಂದ್ರಗಳ ಸೌಲಭ್ಯಗಳಲ್ಲಿ ಬದಲಾವಣೆಗಳಿದ್ದರೆ ನೋಡಲ್‌ ಅಧಿಕಾರಿಗಳು ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು. ಹೊರ ಜಿಲ್ಲೆಗಳಿಂದ ಆಗಮಿಸಿದವರಲ್ಲಿ ಕೋವಿಡ್‌ ಲಕ್ಷಣಗಳಿದ್ದರೆ ಅವರ ಆರೋಗ್ಯ ತಪಾಸಣೆ ನಡೆಸಿ ಕ್ವಾರಂಟೈನ್‌ಗೆ ಒಳಪಡಿಸಬೇಕು. ಈ ಕುರಿತಂತೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಒಳಗೊಂಡ ಗ್ರಾಮ  ಸಮಿತಿ ತ್ವರಿತವಾಗಿ ಈ ಕಾರ್ಯ ಮಾಡಬೇಕು ಎಂದು ಸೂಚಿಸಿದರು.

ಸರ್ಕಾರದ ಮಾರ್ಗಸೂಚಿಯಂತೆ ಆರೋಗ್ಯ ತಪಾಸಣೆ ಹಾಗೂ ಕ್ವಾರಂಟೈನ್‌ ನಿರ್ವಹಣೆ ಮಾಡಬೇಕು. ಯಾವುದೇ ಕಾರಣಕ್ಕೂ ಕೋವಿಡ್‌ ಮಾರ್ಗಸೂಚಿ ಹೊರತುಪಡಿಸಿ ಸ್ಥಳೀಯವಾಗಿ ನಿರ್ಧಾರ ತೆಗೆದುಕೊಂಡು ಯಾವುದೇ ಸಮಸ್ಯೆಗಳು ಎದುರಾದರೆ ತಹಶೀಲ್ದಾರರನ್ನು ಹೊಣೆಗಾರರನ್ನಾಗಿ ಮಾಡುವುದಾಗಿ ಅವರು ಎಚ್ಚರಿಸಿದರು.

ಜಿಪಂ ಸಿಇಒ ರಮೇಶ ದೇಸಾಯಿ ಮಾತನಾಡಿ, ಸವಣೂರ- ಶಿಗ್ಗಾವಿ ಮಾದರಿಯಲ್ಲಿ ಜಿಲ್ಲೆಯ ಉಳಿದ ತಾಲೂಕು ಪಟ್ಟಣ ಪ್ರದೇಶಗಳಲ್ಲಿ ವೈದ್ಯರ ಉಪಸ್ಥಿತಿಯಲ್ಲಿ ಆರೋಗ್ಯ ತಪಾಸಣೆ ನಡೆಸಬೇಕು. ವೈದ್ಯರ ಕೊರತೆ ಕಂಡಲ್ಲಿ ಆಯುಷ್‌ ವೈದ್ಯರು ಸ್ವಯಂ ಪ್ರೇರಣೆಯಿಂದ ಸೇವೆ ಸಲ್ಲಿಸಲು ಮುಂದೆ ಬಂದಿದ್ದಾರೆ. ಅವರ ಸೇವೆ ಬಳಸಿಕೊಂಡು ತಪಾಸಣೆ ನಡೆಸಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ, ಉಪವಿಭಾಗಾಧಿಕಾರಿ ಡಾ| ದಿಲೀಷ್‌ ಶಶಿ, ಆಹಾರ ಮತ್ತು ನಾಗರಿಕ ಸಬರಾಜು ಇಲಾಖೆ ವಿನೋದಕುಮಾರ ಹೆಗ್ಗಳಗಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಚೈತ್ರಾ, ಆರ್‌ಸಿಎಚ್‌ ಅಧಿಕಾರಿ ಡಾ| ಜಯಾನಂದ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಪಿ.ಕೆ. ಹಾವನೂರ, ತಹಶೀಲ್ದಾರ್‌ಗಳಾದ ಶಂಕರ್‌, ಬಸವನಗೌಡ ಕೊಟೂರ ಹಾಗೂ ಡಾ| ಪ್ರಭಾಕರ ಕುಂದೂರ ಇತರರು ಇದ್ದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.