Karnataka poll 2023; ಹಾವೇರಿಯಲ್ಲಿ ಘಟಾನುಘಟಿಗಳ ಖದರ್‌; ಉಕ್ಕಿನ ಮನುಷ್ಯ ಗುದ್ಲೆಪ್ಪ


Team Udayavani, Apr 5, 2023, 6:17 PM IST

Karnataka poll 2023;ಹಾವೇರಿಯಲ್ಲಿ ಘಟಾನುಘಟಿಗಳ ಖದರ್‌; ಉಕ್ಕಿನ ಮನುಷ್ಯ ಗುದ್ಲೆಪ್ಪ ಹಳ್ಳಿಕೇರಿ

ಹಾವೇರಿ: ಮರಿ ಕಲ್ಯಾಣವೆಂದೇ ಪ್ರಸಿದ್ಧಿ ಪಡೆದಿರುವ ಹಾವೇರಿ ವಿಧಾನಸಭಾ ಕ್ಷೇತ್ರ 15 ವಿಧಾನಸಭೆ ಚುನಾವಣೆ ಎದುರಿಸಿದ್ದು, ಈಗ 16ನೇ ಚುನಾವಣೆಗೆ ಸಿದ್ಧಗೊಂಡಿದೆ. 12 ಚುನಾವಣೆಗಳಲ್ಲಿ ಸಾಮಾನ್ಯ ಕ್ಷೇತ್ರವಾಗಿದ್ದ ಹಾವೇರಿ 2008ರಿಂದ ಎಸ್‌ಸಿ ಮೀಸಲು ಕ್ಷೇತ್ರವಾಗಿದೆ.

ಪ್ರಸಕ್ತ 2023ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯನ್ನಾಗಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಅವರನ್ನು ಘೋಷಿಸಿದೆ. ಆದರೆ, ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಬಂಡಾಯದ ಬಿಸಿ ತಟ್ಟಿದೆ. ಬಿಜೆಪಿಯಲ್ಲಿ ಹಾಲಿ ಶಾಸಕ ನೆಹರು ಓಲೇಕಾರ ಇದ್ದರೂ ಅವರಿಗೆ ಟಿಕೆಟ್‌ ತಪ್ಪಿಸಲು ಇತರ ಆಕಾಂಕ್ಷಿಗಳು ಶತಾಯ ಗತಾಯ ಪ್ರಯತ್ನಿಸುತ್ತಿದ್ದಾರೆ. ಬಿಜೆಪಿಯಲ್ಲಿ ಲೀಡ್ಕರ್‌ ಉಪಾಧ್ಯಕ್ಷ ಡಿ.ಎಸ್‌.ಮಾಳಗಿ, ಜಿಪಂ ಮಾಜಿ ಅಧ್ಯಕ್ಷ ಪರಮೇಶ್ವರಪ್ಪ ಮೇಗಳಮನಿ, ಮಲ್ಲೇಶಪ್ಪ ಹರಿಜನ,
ವೆಂಕಟೇಶ ನಾರಾಯಣಿ, ರಾಮು ಮಾಳಗಿ, ಶ್ರೀಪಾದ ಬೆಟಗೇರಿ ಆಕಾಂಕ್ಷಿಗಳಿದ್ದಾರೆ. ಬಿಜೆಪಿ ಟಿಕೆಟ್‌ ಬಯಸಿ ಬ್ಯಾಡಗಿ ಗ್ರೇಡ್‌-2 ತಹಶೀಲ್ದಾರ್‌ ಗವಿಸಿದ್ದಪ್ಪ ದ್ಯಾಮಣ್ಣನವರ ತಮ್ಮ ಹುದ್ದೆಗೆ ರಾಜೀನಾಮೆ ಕೊಟ್ಟಿದ್ದಾರೆ. ಹೀಗಾಗಿ, ಟಿಕೆಟ್‌ ಯಾರಿಗೆ ಸಿಗುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ಇನ್ನು ಬೇಡ ಜಂಗಮ(ಎಸ್‌ಸಿ) ಜಾತಿ ಪ್ರಮಾಣ ಪತ್ರ ಪಡೆದಿದ್ದ ಎಂ.ಎಂ.ಹಿರೇಮಠ ಪಕ್ಷೇತರರಾಗಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದರು. ಆದರೆ, ಜಿಲ್ಲಾಧಿಕಾರಿಗಳು ಅವರ ಜಾತಿ ಪ್ರಮಾಣ ಪತ್ರ ರದ್ದುಪಡಿಸಿದ್ದು, ಈ ಕ್ರಮವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ಹಿರೇಮಠ ಹೇಳಿದ್ದಾರೆ. ಹೀಗಾಗಿ, ಹಾವೇರಿ ಮೀಸಲು ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಆಗುತ್ತಿರುವ ರಾಜಕೀಯ ಬೆಳವಣಿಗೆಗಳು ಕುತೂಹಲ ಮೂಡಿಸಿವೆ.

ಪಕ್ಷಕ್ಕಿಂತ ವ್ಯಕ್ತಿಗೆ ಆದ್ಯತೆ: ಹಾವೇರಿ ಕ್ಷೇತ್ರದಲ್ಲಿ ಪಕ್ಷಕ್ಕಿಂತ ವ್ಯಕ್ತಿಗಳಿಗೆ ಮಣೆ ಹಾಕಿರುವುದೇ ಹೆಚ್ಚು. ವ್ಯಕ್ತಿಯ ಸ್ವಭಾವ, ವರ್ಚಸ್ಸು ಆಧರಿಸಿ ಚುನಾವಣೆಯಲ್ಲಿ ಮತದಾರರು ಅಭ್ಯರ್ಥಿಗಳಿಗೆ ಮಣೆ ಹಾಕಿದ್ದಾರೆ. ಎಸ್‌.ಎಫ್‌.ತಾವರೆ, ಡಾ.ಚಿತ್ತರಂಜನ ಕಲಕೋಟಿ, ಬಸವರಾಜ ಶಿವಣ್ಣನವರ ಅವರು ಬೇರೆ-ಬೇರೆ ಪಕ್ಷದಿಂದ ಸ್ಪರ್ಧಿಸಿದ್ದರು. ಜನ ಪಕ್ಷಕ್ಕಿಂತ ವ್ಯಕ್ತಿಗೆ ಮಾನ್ಯತೆ ನೀಡಿದ್ದಾರೆ. ಆದರೆ ಪಕ್ಷೇತರರಾಗಿ ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ಈವರೆಗೂ ಮಾನ್ಯತೆ ನೀಡಿರುವುದು ಕಂಡು ಬಂದಿಲ್ಲ.

ಈವರೆಗಿನ ಹಾವೇರಿ ಶಾಸಕರು: 1951 ಗುದ್ಲೆಪ್ಪ ಹಳ್ಳಿಕೇರಿ(ಕಾಂಗ್ರೆಸ್‌), 1957 ಸಿದ್ದವ್ವ ಮಹಾದೇವಪ್ಪ ಮೈಲಾರ (ಕಾಂಗ್ರೆಸ್‌), 1962 ಬಿ.ವಿ.ಮಾಗಾವಿ (ಕಾಂಗ್ರೆಸ್‌), 1967 ಬಿ.ವಿ. ಮಾಗಾವಿ (ಕಾಂಗ್ರೆಸ್‌), 1972 ಎಸ್‌. ಎಫ್‌.ತಾವರೆ (ಕಾಂಗ್ರೆಸ್‌), 1978 ಎಸ್‌.ಎಫ್‌.ತಾವರೆ (ಕಾಂಗ್ರೆಸ್‌), 1983 ಡಾ.ಚಿತ್ತರಂಜನ ಕಲಕೋಟಿ (ಜೆಎನ್‌ಪಿ), 1985 ಡಾ.ಚಿತ್ತರಂಜನ ಕಲಕೋಟಿ (ಜನತಾ ಪಕ್ಷ), 1989 ಎಂ.ಡಿ.ಶಿವಪುರ (ಕಾಂಗ್ರೆಸ್‌), 1994 ಬಸವರಾಜ ಶಿವಣ್ಣನವರ (ಜನತಾ ದಳ), 1999 ಬಸವರಾಜ ಶಿವಣ್ಣನವರ (ಜೆಡಿಎಸ್‌), 2004 ಶಿವರಾಜ ಸಜ್ಜನರ (ಬಿಜೆಪಿ), 2008 ನೆಹರು ಓಲೇಕಾರ (ಬಿಜೆಪಿ), 2013 ರುದ್ರಪ್ಪ ಲಮಾಣಿ (ಕಾಂಗ್ರೆಸ್‌), 2018 ನೆಹರು ಓಲೇಕಾರ (ಬಿಜೆಪಿ) ಆಯ್ಕೆಯಾಗಿದ್ದಾರೆ.

ಹಾವೇರಿ (ಎಸ್‌ಸಿ) ಕ್ಷೇತ್ರದ ವಿಶೇಷ: ಈ ಕ್ಷೇತ್ರದ ಇತಿಹಾಸವನ್ನುಒಮ್ಮೆ ಅವಲೋಕಿಸಿದರೆ ಅನೇಕ ಕುತೂಹಲದ ಅಂಶಗಳು ಕಣ್ಣೆದುರು ನಿಲ್ಲುತ್ತವೆ. 2008ರಿಂದ ಎಸ್‌ಸಿ ಕ್ಷೇತ್ರವಾದ ನಂತರ ಇಲ್ಲಿನ ನಾಯಕರು ಬ್ಯಾಡಗಿಗೆ ವಲಸೆ ಹೋದರೆ, ಅಲ್ಲಿನ ನಾಯಕರು ಹಾವೇರಿಗೆ ಬಂದರು. 1951ರಲ್ಲಿ ಜರುಗಿದ ಮೊದಲ ಚುನಾವಣೆಯಿಂದ ಸತತವಾಗಿ ಐದು ಬಾರಿ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಹಾವೇರಿ ಮತದಾರರು ಮಣೆ ಹಾಕಿದ್ದು ಸೇರಿ ಒಟ್ಟು 8 ಬಾರಿ ಕಾಂಗ್ರೆಸ್‌ ಅಭ್ಯರ್ಥಿಗಳು ಆಯ್ಕೆಯಾಗಿದ್ದರೆ, 4 ಬಾರಿ ಜನತಾ ಪರಿವಾರದ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. 3 ಬಾರಿ ಬಿಜೆಪಿ ಗೆಲುವಿನ ನಗೆ ಬೀರಿದೆ.

ನಾಲ್ಕು ಬಾರಿ ಮಹಿಳೆಯರು ಇಲ್ಲಿ
ಕಣಕ್ಕಿಳಿದಿದ್ದು, ಒಂದು ಬಾರಿ ಮಾತ್ರ ಮಹಿಳೆ, ಸ್ವಾತಂತ್ರ್ಯ ಹೋರಾಟಗಾರ ಮೈಲಾರ ಮಹದೇವರ ಪತ್ನಿ ಸಿದ್ದಮ್ಮ ಆಯ್ಕೆಯಾಗಿರುವುದು ಕ್ಷೇತ್ರದ ವಿಶೇಷವಾಗಿದೆ. ಸ್ವಾತಂತ್ರ್ಯಹೋರಾಟಗಾರ, ಕರ್ನಾಟಕದ ಉಕ್ಕಿನ ಮನುಷ್ಯ ಎಂದೇ ಖ್ಯಾತರಾಗಿದ್ದ ಗುದ್ಲೆಪ್ಪ ಹಳ್ಳಿಕೇರಿ ಅವರಂತಹ ಘಟಾನುಘಟಿಗಳು ಇಲ್ಲಿ ಆಯ್ಕೆಯಾಗಿದ್ದಾರೆ. ಗುದ್ಲೆಪ್ಪ ಹಳ್ಳಿಕೇರಿಯವರು ಅಂದಿನ ಮುಂಬೈ-ಕರ್ನಾಟಕ ವಿಧಾನಸಭೆ ಪ್ರವೇಶಿಸಿದ್ದರು. ಬಿ.ವಿ. ಮಾಗಾವಿ, ಎಸ್‌.ಎಫ್‌. ತಾವರೆ, ಡಾ. ಚಿತ್ತರಂಜನ ಕಲಕೋಟಿ, ಬಸವರಾಜ ಶಿವಣ್ಣನವರ ಅವರು ಸತತವಾಗಿ 2ಬಾರಿ ಆಯ್ಕೆಯಾಗಿದ್ದಾರೆ.

*ವೀರೇಶ ಮಡ್ಲೂರ

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.