ಹರಾಜ್ನಲ್ಲಿ ಖಿಲಾರಿ ತಳಿ ಮಾರಾಟ
Team Udayavani, Jun 13, 2020, 3:10 PM IST
ಬಂಕಾಪುರ: ಪಟ್ಟಣದ ಖಿಲಾರಿ ತಳಿ ಗೋವು ಸಂವರ್ಧನಾ ಕೇಂದ್ರದಲ್ಲಿ ಹರಾಜಿನ ಮೂಲಕ ಜಾನುವಾರುಗಳನ್ನು ಮಾರಾಟ ಮಾಡಲಾಯಿತು.
ಕಳೆದ ಸಾಲಿನಲ್ಲಿ ಸಾರ್ವಜನಿಕ ಬಹಿರಂಗ ಹರಾಜಿನಲ್ಲಿ ವಿಲೇವಾರಿ ಆಗದೇ ಉಳಿದ ಜಾನುವಾರುಗಳನ್ನು ಖಿಲಾರಿ ತಳಿ ಗೋವು ಸಂವರ್ಧನಾ ಕೇಂದ್ರದ ಅಧಿಕಾರಿಗಳು ಸರ್ಕಾರದ ಆದೇಶದ ಮೇರೆಗೆ ಸರ್ಕಾರದ ನೋಂದಾಯಿತ ಗೋ ಶಾಲೆ ಮತ್ತು ಸಂಸ್ಥೆಗಳಿಗೆ 16 ಆಕಳು, ಎರಡು ಹೋರಿಗಳನ್ನು ಹರಾಜಿನ ಮೂಲಕ ಮಾರಾಟ ಮಾಡಲಾಯಿತು.
ಹರಾಜಿನಲ್ಲಿ ಒಂದು ಸಂಸ್ಥೆ ಎರಡು ಗೋ ಶಾಲೆಗಳು ಪಾಲ್ಗೊಂಡಿದ್ದವು. ಇವುಗಳಲ್ಲಿ ಬಾಲೆಹೋಸುರಿನ ದಿಂಗಾಲೇಶ್ವರಮಠದ ಕುಮಾರೇಶ್ವರ ಜೀವ ವಿಕಸನ ಟ್ರಸ್ಟ್ ಗೋಶಾಲೆ ಎಂಟು ಆಕಳು ಒಂದು ಹೋರಿಯನ್ನು ಹರಾಜಿನಲ್ಲಿ ಖರೀದಿಸಿದರೆ, ದಾವಣಗೆರೆ ಹೆಬ್ಟಾಳ ಮಠದ ಗೋಶಾಲೆ ಐದು ಆಕಳು ಒಂದು ಹೋರಿಯನ್ನು ಲೀಲಾವಿನಲ್ಲಿ ಖರೀದಿಸಿತು. ಬೆಳಗಾವಿ ಯುನೈಟೆಡ್ ಸಮಾಜ ಕಲ್ಯಾಣ ಟ್ರಸ್ಟ್ಗೆ ಮೂರು ಆಕಳುಗಳನ್ನು ಮಾರಲಾಯಿತು. ಬಾಲೆಹೊಸೂರಿನ ದಿಂಗಾಲೇಶ್ವರ ಶ್ರೀಗಳು, ಧಾರವಾಡ ಜಂಟಿ ನಿರ್ದೇಶಕ ಡಾ| ಜೆ.ಪಂಪಾಪತಿ, ಕೃಷಿ ವಿವಿ ಪ್ರಾಧ್ಯಾಪಕ ಡಾ| ಅನೀಲ ಪಾಟೀಲ, ಬಂಕಾಪುರ ಗೋ ಸಂವರ್ಧನ ಕೇಂದ್ರದ ಉಪನಿರ್ದೇಶಕ ಡಾ| ಬಸವರಾಜ ಹಿರೇಮಠ, ಜ್ಯೋತಿ ಹಿರೇಮಠ, ಬಿ.ಎಚ್.ಬ್ಯಾಡಗಿ, ಕೃಷ್ಣಾ ನಾಯಕ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ