ನಿರ್ವಹಣೆ ಕೊರತೆ-ಕೆಟ್ಟು ನಿಂತ ಸಿಸಿ ಕ್ಯಾಮೆರಾ


Team Udayavani, Dec 23, 2021, 1:36 PM IST

ನಿರ್ವಹಣೆ ಕೊರತೆ-ಕೆಟ್ಟು ನಿಂತ ಸಿಸಿ ಕ್ಯಾಮೆರಾ

ಹಾವೇರಿ: ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು, ವಾಹನಗಳ ಕಳ್ಳತನ, ಮಹಿಳಾ ದೌರ್ಜನ್ಯಗಳ ಮೇಲೆ ಹದ್ದಿನ ಕಣ್ಣಿಡುವ ದೃಷ್ಟಿಯಿಂದ ಪೊಲೀಸ್‌ ಇಲಾಖೆ ನಗರದ ಪ್ರಮುಖ ಭಾಗಗಳಲ್ಲಿ ಅಳವಡಿಸಿದ್ದ ಅತ್ಯಾಧುನಿಕ ಸಿಸಿ ಕ್ಯಾಮೆರಾಗಳುನಿರ್ವಹಣೆಯಿಲ್ಲದೇ ಧೂಳು ತಿನ್ನುತ್ತಿದ್ದು, ನಗರದಲ್ಲಿನಡೆಯುವ ಅಪರಾಧ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ.

ನಗರದಲ್ಲಿ ನಡೆಯುವ ಅಪರಾಧ ಚಟುವಟಿಕೆಗಳು, ಅಪಘಾತಗಳು, ವಾಹನಗಳಕಳ್ಳತನ ಹಾಗೂ ಮಹಿಳಾ ದೌರ್ಜನ್ಯಗಳ ಪ್ರಕರಣಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿಮೆ ಮಾಡುವಹಿನ್ನೆಲೆಯಲ್ಲಿ ಸಂಚಾರಿ ಮತ್ತು ರಸ್ತೆ ಸುರಕ್ಷತಾ ಪ್ರಾಧಿಕಾರದ ಸಹಕಾರದೊಂದಿಗೆ ನಗರದಲ್ಲಿ ಕಳೆದ ನಾಲ್ಕೈದು ವರ್ಷಗಳ ಹಿಂದೆ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಆದರೆ, ನಿರ್ವಹಣೆಯ ಕೊರತೆಯಿಂದ ಬಹುತೇಕ ಸಿಸಿ ಕ್ಯಾಮೆರಾಗಳು ಹಾಳಾಗಿದ್ದು, ಧೂಳು ತಿನ್ನುತ್ತ ಕಣ್ಣು ಮುಚ್ಚಿಕೊಂಡು ಕುಳಿತಿವೆ. ಇದರಿಂದಾಗಿ ನಗರದಲ್ಲಿ ನಡೆಯುತ್ತಿರುವಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಲು ಪೊಲೀಸ್‌ ಇಲಾಖೆಗೆ ಸಮಸ್ಯೆ ಎದುರಾಗಿದೆ.

ಸಿಸಿ ಕ್ಯಾಮೆರಾ ಅಳವಡಿಕೆ: ನಗರದ ಪ್ರಮುಖವೃತ್ತಗಳಾದ ಹೊಸಮನಿ ಸಿದ್ದಪ್ಪ ವೃತ್ತ, ಸುಭಾಸಸರ್ಕಲ್‌, ಜೆಪಿ ವೃತ್ತ, ಜೆ.ಎಚ್‌.ಪಟೇಲ್‌ ವೃತ್ತ, ಅಂಬೇಡ್ಕರ್‌ ಸರ್ಕಲ್‌, ಜಿ.ಎಚ್‌.ಕಾಲೇಜು ಹತ್ತಿರ,ಕೆಇಬಿ ವೃತ್ತ, ಅಕ್ಕಮಹಾದೇವಿ ಸರ್ಕಲ್‌, ಬಸ್‌ ನಿಲ್ದಾಣ, ಎಂ.ಜಿ. ರಸ್ತೆ, ಹಾನಗಲ್ಲ ರೋಡ್‌, ಪಾದಗಟ್ಟಿ ಕ್ರಾಸ್‌, ಬಸವೇಶ್ವರ ನಗರದ 17ನೇ ಕ್ರಾಸ್‌, ರೈಲ್ವೆನಿಲ್ದಾಣದ ಹತ್ತಿರ, ಇಜಾರಿಲಕಮಾಪುರ ಸೇರಿದಂತೆನಗರದ ಪ್ರಮುಖ 36 ಪ್ರದೇಶಗಳಲ್ಲಿ ಲಕ್ಷಾಂತರ ರೂ. ವೆಚ್ಚ ಮಾಡಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಆದರೆ, ನಿರ್ವಹಣೆ ಕೊರತೆಯಿಂದ ಸಿಸಿ ಕ್ಯಾಮರಾ ಇದ್ದೂ ಇಲ್ಲದಂತಾಗಿದೆ.

ನಿರ್ವಹಣೆ ಇಲ್ಲದೇ ಹಾಳು: ನಗರದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಲು ಸಿಸಿ ಕ್ಯಾಮರಾ ಸಹಕಾರಿಯಾಗಿದ್ದು,ಈಮೂಲಕ ಸಂಚಾರಿ ನಿಯಮ ಉಲ್ಲಂಘನೆ, ಅಪಘಾತ ಪ್ರಕರಣ,  ಸರಗಳ್ಳತನ, ವಾಹನಗಳ ಕಳ್ಳತನ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳನ್ನು ಮಟ್ಟಹಾಕಲು ಪೊಲೀಸ್‌ ಇಲಾಖೆಗೆ ಸಾಥ್‌ ನೀಡುತ್ತಿವೆ . ಆದರೆ ಇಲ್ಲಿನ ಪೊಲೀಸ್‌ ಇಲಾಖೆ ಸಿಸಿ ಕ್ಯಾಮೆರಾಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿರುವುದು ವಿಪರ್ಯಾಸದ ಸಂಗತಿ. ನಗರದ ಜನತೆ ಆತಂಕ ರಹಿತವಾಗಿ ಸಂಚಾರಕ್ಕೆ ಮುಕ್ತಗೊಳಿಸಲು ಸಂಬಂಧಿಸಿದವರು ಸಿಸಿಕ್ಯಾಮೆರಾಗಳನ್ನು ದುರಸ್ತಿಗೊಳಿಸಬೇಕಾದಅನಿವಾರ್ಯತೆ ಇದೆ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಖಾಸಗಿ ಫೂಟೆಜ್‌ಗಳ ಮೊರೆ: ನಗರದ 36ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಅಳವಡಿಸಿರುವ ಸಿಸಿಕ್ಯಾಮೆರಾಗಳು ಹಾಳಾಗಿದ್ದು, ನಗರದಲ್ಲಿ ಕಳ್ಳತನ ಸೇರಿದಂತೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಇನ್ನೂ ನಗರದಲ್ಲಿ ನಡೆಯುವ ಅಪಘಾತ, ಕಳ್ಳತನ,ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಗಳನ್ನು ಪತ್ತೆ ಹಚ್ಚಲು ‌ ಪೊಲೀಸ್‌ ಇಲಾಖೆ ನಗರದ ವಿವಿಧ ಅಂಗಡಿಕಾರರು, ಸಾರ್ವಜನಿಕರು ಅಳವಡಿಸಿರುವ ಸಿಸಿ ಕ್ಯಾಮೆರಾಗಳ ಫೂಟೇಜ್‌ಗಳ ಮೊರೆ ಹೋಗುವುದು ಅನಿವಾರ್ಯವಾಗಿದೆ. ಜಿಲ್ಲಾ ಪೊಲೀಸ್‌ ಇಲಾಖೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುವ ಮೂಲಕಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ನಗರದಲ್ಲಿಕೆಟ್ಟು ನಿಂತಿರುವ ಸಿಸಿ ಕ್ಯಾಮೆರಾಗಳನ್ನು ಸರಿಪಡಿಸುವಕುರಿತು ಶಾಸಕರುಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ.ಹಾವೇರಿ ನಗರದಲ್ಲಿ ಹೆಚ್ಚುವರಿಯಾಗಿಮಾರುಕಟ್ಟೆಪ್ರದೇಶ, ಎಲ್ಲ ಭಾಗದಿಂದ ನಗರಕ್ಕೆ ಪ್ರವೇಶಿಸುವ ಸ್ಥಳ ‌ಸೇರಿ 100ಕ್ಕೂಹೆಚ್ಚು ಪ್ರದೇಶಗಳನ್ನುಹೊಸದಾಗಿ ಗುರುತಿಸಲಾಗಿದೆ.ಈ ಪ್ರದೇಶದಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ನಗರಸಭೆ, ಶಾಸಕರು ಹಾಗೂ ಡಿಸಿಯವರೊಂದಿಗೆ ಚರ್ಚಿಸಿ ಅನುದಾನ ಬಿಡುಗಡೆ ಮಾಡಲು ಮನವಿ ಮಾಡಲಾಗಿದೆ. – ಹನುಮಂತರಾಯ,ಎಸ್ಪಿ,ಹಾವೇರಿ

-ವೀರೇಶ ಮಡ್ಲೂರ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.