ಅಗ್ನಿಶಾಮಕದಳದಲ್ಲಿ ಸಿಬ್ಬಂದಿ ಕೊರತೆ

ಒಟ್ಟು 181 ಮಂಜೂರಾತಿ ಹುದ್ದೆಗಳಲ್ಲಿ 106 ಹುದ್ದೆ ಭರ್ತಿ-ಉಳಿದ 75 ಹುದ್ದೆಗಳು ಖಾಲಿ

Team Udayavani, Jan 6, 2021, 3:13 PM IST

ಅಗ್ನಿಶಾಮಕದಳದಲ್ಲಿ ಸಿಬ್ಬಂದಿ ಕೊರತೆ

ಹಾವೇರಿ: ಅಗ್ನಿ ಅವಘಡದಂತಹ ತುರ್ತು ಸಂದರ್ಭದಲ್ಲಿ ಶೀಘ್ರ ನೆರವಿಗೆ ಬರಬೇಕಾದಅಗ್ನಿಶಾಮಕದಳ ಸಿಬ್ಬಂದಿ ಕೊರತೆಯಿಂದ ಬಳಲುತ್ತಿದೆ. ಇದರಿಂದ ಸಕಾಲಕ್ಕೆ ಸಮರ್ಪಕ ಸೇವೆ ಒದಗಿಸಲು ಅಡಚಣೆಯಾಗುತ್ತಿದೆ.

ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳ ಕಚೇರಿಯಲ್ಲಿ ಒಟ್ಟು 181 ಮಂಜೂರಾತ ಹುದ್ದೆಗಳಿದ್ದು, ಇದರಲ್ಲಿ 106 ಹುದ್ದೆಗಳುಭರ್ತಿಯಾಗಿವೆ. ಉಳಿದ 75 ಹುದ್ದೆಗಳು ಖಾಲಿಇವೆ. ಹಾವೇರಿ ಅಗ್ನಿಶಾಮಕ ಠಾಣೆಯಲ್ಲಿ 6,ರಾಣೆಬೆನ್ನೂರು ಅಗ್ನಿಶಾಮಕ ಠಾಣೆಯಲ್ಲಿ13, ಹಾನಗಲ್ಲ ಅಗ್ನಿಶಾಮಕ ಠಾಣೆಯಲ್ಲಿ 13,ಹಿರೇಕೆರೂರು ಅಗ್ನಿಶಾಮಕ ಠಾಣೆಯಲ್ಲಿ 12,ಶಿಗ್ಗಾವಿ ಅಗ್ನಿಶಾಮಕ ಠಾಣೆಯಲ್ಲಿ 11, ಬ್ಯಾಡಗಿಅಗ್ನಿಶಾಮಕ ಠಾಣೆಯಲ್ಲಿ 10, ಸವಣೂರು ಅಗ್ನಿಶಾಮಕ ಠಾಣೆಯಲ್ಲಿ 10 ಹುದ್ದೆಗಳು ಖಾಲಿ ಇವೆ.

ಮೂರು ಕಡೆ ಠಾಣಾಧಿ ಕಾರಿಗಳೇ ಇಲ್ಲ:

ಹಿರೇಕೆರೂರು, ಬ್ಯಾಡಗಿ, ಸವಣೂರು ಅಗ್ನಿಶಾಮಠ ಠಾಣೆಗಳಲ್ಲಿ ಠಾಣಾಧಿಕಾರಿಗಳೇ ಇಲ್ಲ. ಹಾನಗಲ್ಲನಲ್ಲಿ ಸಹಾಯಕ ಠಾಣಾಧಿಕಾರಿಯೂ ಇಲ್ಲದ ಪರಿಸ್ಥಿತಿಇದೆ. ಹಾನಗಲ್ಲ, ಹಿರೇಕೆರೂರು ಹಾಗೂ ಬ್ಯಾಡಗಿಠಾಣೆಗಳಲ್ಲಿ ಚಾಲಕ ತಂತ್ರಜ್ಞರು ಒಬ್ಬರೂಇಲ್ಲ. ಹಾನಗಲ್ಲ ಹಾಗೂ ಶಿಗ್ಗಾವಿ ಠಾಣೆಯಲ್ಲಿಪ್ರಮುಖ ಅಗ್ನಿಶಾಮಕರ ಕೊರತೆಯೂ ಇದೆ. ಈತುರ್ತು ಕಾರ್ಯದಲ್ಲಿ ಪ್ರಮುಖ ಪಾತ್ರ ವಹಿಸುವಅಗ್ನಿಶಾಮಕರ ಸಂಖ್ಯೆಯೂ ಅರ್ಧಕ್ಕರ್ಧ ಖಾಲಿಇದೆ.

ಜಿಲ್ಲಾ ಅಗ್ನಿಶಾಮಕ ಕಚೇರಿಯಲ್ಲಿ ಜಿಲ್ಲಾಅಗ್ನಿಶಾಮಕ ಅಧಿಕಾರಿ ಹುದ್ದೆ ಒಂದು, ಅಗ್ನಿಶಾಮಕ ಠಾಣಾಧಿಕಾರಿಗಳು 7, ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಗಳು 6, ಚಾಲಕ ತಂತ್ರಜ್ಞರು 6, ಪ್ರಮುಖ ಅಗ್ನಿಶಾಮಕರು 27,ಅಗ್ನಿಶಾಮಕ ಚಾಲಕರು 32, ಅಗ್ನಿಶಾಮಕರು 102 ಹೀಗೆ ಒಟ್ಟು 181 ಮಂಜೂರಾತಿ ಹುದ್ದೆಗಳಿವೆ.ಆದರೆ, ಅಗ್ನಿಶಾಮಕ ಠಾಣಾ ಧಿಕಾರಿಗಳ 3ಹುದ್ದೆ, ಸಹಾಯಕ ಠಾಣಾಧಿ ಕಾರಿಗಳ ಒಂದುಹುದ್ದೆ, ಚಾಲಕ ತಂತ್ರಜ್ಞರ 3 ಹುದ್ದೆ, ಪ್ರಮುಖಅಗ್ನಿಶಾಮಕರ 2 ಹುದ್ದೆ, ಅಗ್ನಿಶಾಮಕ ಚಾಲಕರ10 ಹುದ್ದೆ ಹಾಗೂ ಅಗ್ನಿಶಾಮಕರ 56 ಹುದ್ದೆಗಳು ಖಾಲಿ ಇವೆ.

ಜಿಲ್ಲಾ ಅಗ್ನಿಶಾಮಕ ಕಚೇರಿಯಲ್ಲಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಹುದ್ದೆ ಒಂದು,ಅಗ್ನಿಶಾಮಕ ಠಾಣಾಧಿಕಾರಿಗಳು 4, ಸಹಾಯಕಠಾಣಾ ಧಿಕಾರಿಗಳು 5, ಚಾಲಕ ತಂತ್ರಜ್ಞರು 3, ಪ್ರಮುಖ ಅಗ್ನಿಶಾಮಕರು 25, ಅಗ್ನಿಶಾಮಕಚಾಲಕರು 22, ಅಗ್ನಿಶಾಮಕರು 46 ಹೀಗೆ ಒಟ್ಟು106 ಹುದ್ದೆಗಳು ಮಾತ್ರ ಭರ್ತಿಯಾಗಿವೆ.ಸಿಬ್ಬಂದಿ ಕೊರತೆಯ ನಡುವೆಯೂಅಗ್ನಿಶಾಮಕ ದಳ ಇರುವಷ್ಟು ಸಿಬ್ಬಂದಿಬಳಸಿಕೊಂಡು ತುರ್ತು ಸೇವೆಯಲ್ಲಿ ನಿರತವಾಗಿದೆ. ಸರ್ಕಾರ ಕೂಡಲೇ ಖಾಲಿ ಇರುವಹುದ್ದೆಗಳನ್ನು ಭರ್ತಿ ಮಾಡಿ ಸಿಬ್ಬಂದಿ ಮೇಲಿನಕೆಲಸದ ಒತ್ತಡ ಕಡಿಮೆ ಮಾಡುವ ಮೂಲಕ ಅಗ್ನಿಶಾಮಕ ದಳಕ್ಕೆ ಇನ್ನಷ್ಟು ಬಲ ತುಂಬಬೇಕಿದೆ.

ಅಗ್ನಿಶಾಮಕ ಠಾಣೆ-ಹುದ್ದೆಗಳ ವಿವರ :

ಹಾವೇರಿ ಅಗ್ನಿಶಾಮಕ ಠಾಣೆಯಲ್ಲಿ ಒಟ್ಟು 25 ಮಂಜೂರಾತಿ ಹುದ್ದೆಗಳಿದ್ದು 19 ಹಾಲಿ ಹುದ್ದೆಗಳು ಭರ್ತಿಯಾಗಿವೆ. 6 ಹುದ್ದೆಗಳು ಖಾಲಿ ಇವೆ. ರಾಣೆಬೆನ್ನೂರು ಅಗ್ನಿಶಾಮಕ ಠಾಣೆಯಲ್ಲಿ ಒಟ್ಟು 27 ಮಂಜೂರಾತಿ ಹುದ್ದೆಗಳಿದ್ದು 14 ಹಾಲಿ ಹುದ್ದೆಗಳು ಭರ್ತಿಯಾಗಿವೆ. 13 ಹುದ್ದೆಗಳು ಖಾಲಿ ಇವೆ. ಹಾನಗಲ್ಲ ಅಗ್ನಿಶಾಮಕ ಠಾಣೆಯಲ್ಲಿ ಒಟ್ಟು 27 ಮಂಜೂರಾತಿ ಹುದ್ದೆಗಳಿದ್ದು, 14 ಹಾಲಿ ಹುದ್ದೆಗಳು ಭರ್ತಿಯಾಗಿವೆ. 13 ಹುದ್ದೆಗಳುಖಾಲಿ ಇವೆ. ಹಿರೇಕೆರೂರು ಹಾನಗಲ್ಲ ಅಗ್ನಿಶಾಮಕ ಠಾಣೆಯಲ್ಲಿ ಒಟ್ಟು 27 ಮಂಜೂರಾತಿ ಹುದ್ದೆಗಳಿದ್ದು, 15 ಹಾಲಿ ಹುದ್ದೆಗಳು ಭರ್ತಿಯಾಗಿವೆ. 12 ಹುದ್ದೆಗಳು ಖಾಲಿ ಇವೆ. ಶಿಗ್ಗಾವಿಅಗ್ನಿಶಾಮಕ ಠಾಣೆಯಲ್ಲಿ ಒಟ್ಟು 27 ಮಂಜೂರಾತಿ ಹುದ್ದೆಗಳಿದ್ದು, 16 ಹಾಲಿ ಹುದ್ದೆಗಳುಭರ್ತಿಯಾಗಿವೆ. 11 ಹುದ್ದೆಗಳು ಖಾಲಿ ಇವೆ. ಬ್ಯಾಡಗಿ ಅಗ್ನಿಶಾಮಕ ಠಾಣೆಯಲ್ಲಿ ಒಟ್ಟು24 ಮಂಜೂರಾತಿ ಹುದ್ದೆಗಳಿದ್ದು, 14 ಹಾಲಿ ಹುದ್ದೆಗಳು ಭರ್ತಿಯಾಗಿವೆ. 10 ಹುದ್ದೆಗಳುಖಾಲಿ ಇವೆ. ಸವಣೂರು ಅಗ್ನಿಶಾಮಕ ಠಾಣೆಯಲ್ಲಿ ಒಟ್ಟು 24 ಮಂಜೂರಾತಿ ಹುದ್ದೆಗಳಿದ್ದು 14 ಹಾಲಿ ಹುದ್ದೆಗಳು ಭರ್ತಿಯಾಗಿವೆ. 10 ಹುದ್ದೆಗಳು ಖಾಲಿ ಇವೆ.

ಜಿಲ್ಲೆಯ ಅಗ್ನಿಶಾಮಕ ಠಾಣೆಗಳ ಕಚೇರಿಯಲ್ಲಿ ಒಟ್ಟು 181 ಮಂಜೂರಾತಿ ಹುದ್ದೆಗಳಿದ್ದು,106 ಹುದ್ದೆಗಳು ಭರ್ತಿಯಾಗಿವೆ. 75 ಹುದ್ದೆಗಳು ಖಾಲಿ ಇವೆ. ಸಿಬ್ಬಂದಿ ಕೊರತೆ ಮಧ್ಯೆಯೂ ಸಾರ್ವಜನಿಕರಿಗೆ ತುರ್ತು ನೆರವು ನೀಡಲಾಗುತ್ತಿದೆ. ಸರ್ಕಾರ ಶೀಘ್ರದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವ ನೀರಿಕ್ಷೆ ಇದೆ.  –ಸೋಮಶೇಖರ ಅಗಡಿ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ, ಹಾವೇರಿ

 

-ವೀರೇಶ ಮಡ್ಲೂರ

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.