ಭೂಮಿ-ಪರಿಸರ ಸಂರಕ್ಷಣೆ ಎಲ್ಲರ ಕರ್ತವ್ಯ

ಹಿರಿಯ ದಿವಾಣಿ ನ್ಯಾಯಾಧೀಶ ಪುಟ್ಟರಾಜು ಸಲಹೆ

Team Udayavani, Apr 23, 2022, 3:26 PM IST

9

ಹಾವೇರಿ: ನಾವೆಲ್ಲರೂ ಭೂತಾಯಿ ಮಡಿಲಲ್ಲಿದ್ದೇವೆ. ಭೂಮಿ ಮತ್ತು ಪರಿಸರ ಇಲ್ಲದೇ ಬದುಕು ಅಸಾಧ್ಯವಾಗಿದೆ. ಹಾಗಾಗಿ, ಭೂಮಿ ಹಾಗೂ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಹೇಳಿದರು.

ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆಶ್ರಯದಲ್ಲಿ ಜರುಗಿದ ವಿಶ್ವ ಭೂಮಿ ದಿನಾಚರಣೆ ಹಾಗೂ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪರಿಸರ ಸಂರಕ್ಷಣೆ ಉದ್ದೇಶದಿಂದ ವಿಶ್ವಭೂಮಿ ದಿನ ಆಚರಿಸಲಾಗುತ್ತಿದೆ. ಇದು ಕೇವಲ ಆಚರಣೆಯಾಗಿ ಉಳಿದೇ ಕಾರ್ಯರೂಪಕ್ಕೆ ಬರಬೇಕು. ಗಣಿಗಾರಿಕೆ, ಜಲ ಮತ್ತು ವಾಯು ಮಾಲಿನ್ಯದಿಂದ ಪರಿಸರ ಕಲುಷಿತವಾಗುತ್ತಿದೆ ಹಾಗೂ ಅರಣ್ಯ ನಾಶವಾಗುತ್ತಿದೆ. ಸಕಲ ಜೀವ ಸಂಕುಲಕ್ಕೆ ಅರ್ಥಪೂರ್ಣ ಬುದುಕು ನೀಡಿರುವ ಭೂಮಿ ಸಂರಕ್ಷಣೆಯಲ್ಲಿ ವಿಫಲರಾಗಿದ್ದೇವೆ. ಭೂಮಿ ಪ್ರಾಮುಖ್ಯತೆ ಕುರಿತು ಎಲ್ಲರೂ ಗಂಭೀರವಾಗಿ ಚಿಂತನೆ ಮಾಡಬೇಕು ಎಂದರು.

ಪರಿಸರ ಸಂರಕ್ಷಣೆ ಎಲ್ಲರ ಮೂಲಭೂತ ಕರ್ತವ್ಯವಾಗಿದೆ. ಭೂಮಿ ಸಂರಕ್ಷಣೆ ಕುರಿತು ಗ್ರಾಮ ಮಟ್ಟದಿಂದಲೇ ತಿಳಿವಳಿಕೆ ನೀಡುವುದು ಅಗತ್ಯವಾಗಿದೆ. ಪರಿಸರ ಸಂರಕ್ಷಣೆಗೆ ಕೇವಲ ಅ ಧಿಕಾರಿಗಳಲ್ಲದೇ ಎಲ್ಲರೂ ಕೈಜೋಡಿಸೋಣ ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಜಿಲ್ಲಾ ಪರಿಸರ ಅಧಿಕಾರಿ ಡಾ|ಸುಧಾ ಸೌಮ್ಯಲತ ಎಂ.ಕೆ. ಮಾತನಾಡಿ, ಆರ್ಥಿಕ ಬೆಳವಣಿಗೆ ಹಾಗೂ ಅಭಿವೃದ್ಧಿಗೆ ಭೂಮಿ ಮತ್ತು ಪರಿಸರ ಪೂರಕವಾಗಿದೆ. ಭೂಮಿಯಲ್ಲಿ ಹೇರಳ ಸಂಪನ್ಮೂಲವಿದ್ದು, ಅದನ್ನು ಮಿತವಾಗಿ ಹಾಗೂ ವೈಜ್ಞಾನಿಕವಾಗಿ ಬಳಸಬೇಕು. ಆದರೆ, ಇಂದು ಗಣಿಗಾರಿಕೆ, ಅರಣ್ಯ ನಾಶ, ಅತಿಯಾದ ರಸಗೊಬ್ಬರ, ಕೀಟನಾಶಕ ಬಳಕೆ ಹಾಗೂ ಪ್ಲಾಸ್ಟಿಕ್‌ ಬೆಳಕೆಯಿಂದ ವಾಯು ಮಾಲಿನ್ಯ, ಜಲ ಮಾಲಿನ್ಯ ಹಾಗೂ ಅರಣ್ಯ ನಾಶಗೊಂಡು ಭೂಮಿ ಕಲುಷಿತವಾಗುತ್ತಿದೆ. ಮಾಲಿನ್ಯ ತಡೆಯದಿದ್ದರೆ ಭೂಮಿಗೆ ಉಳಿಗಾಲವಿಲ್ಲ ಎಂದು ಹೇಳಿದರು.

ಸಕಲ ಜೀವ ಸಂಕುಲಕ್ಕೆ ಭೂಮಿ ಆಧಾರವಾಗಿದೆ. ಸೌರಮಂಡಲದಲ್ಲಿ ವೈವಿಧ್ಯಮಯ ಜೀವರಾಶಿ ಹೊಂದಿದ ಏಕೈಕ ಗೃಹ ಭೂಮಿ. ಇದನ್ನು ಉಳಿಸಿ ಬೆಳೆಸುವುದು ಹಾಗೂ ನಮ್ಮ ಮುಂದಿನ ಪೀಳಿಗೆಗೆ ಆರೋಗ್ಯಕರ ಭೂಮಿ ಹಸ್ತಾಂತರಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.

ತಾಜ್ಯ ನಿರ್ವಹಣೆಯಲ್ಲಿ ವೈಜ್ಞಾನಿಕ ಕ್ರಮ ಅನುಸರಿಸಬೇಕು. ಪ್ಲಾಸ್ಟಿಕ್‌ ಬಳಕೆ ಕಡಿಮೆ ಮಾಡಬೇಕು. ರಾಸಾಯನಿಕ ಗೊಬ್ಬರ ಹಾಗೂ ಕೀಟ ನಾಶಕ ಬಳಕೆ ಕಡಿಮೆಗೊಳಿಸಿ ಸಾವಯವ ಕೃಷಿಗೆ ಆದ್ಯತೆ ನೀಡಬೇಕು. ಮಳೆ ನೀರು ಕೊಯ್ಲು ಮಾಡಿ ಇಂಗುಗುಂಡಿ ನಿರ್ಮಿಸಿ ನೀರು ಸಂರಕ್ಷಿಸಬೇಕು. ಈ ಕಾರ್ಯ ನಮ್ಮ ಮನೆಯಿಂದಲೇ ಆರಂಭವಾಗಬೇಕು. ನೀರು ಮತ್ತು ಪರಿಸರ ಮಾಲಿನ್ಯವಾಗಂದತೆ ಎಚ್ಚರ ವಹಿಸಬೇಕೆಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್‌ ಗಿರೀಶ ಸ್ವಾದಿ ಮಾತನಾಡಿ, ಭೂಮಿ ಸಮತೋಲನ ಕಾಪಾಡಬೇಕು. ಇಲ್ಲವಾದರೆ ಪ್ರಕೃತಿ ವಿಕೋಪದಂತಹ ಅವಘಡಗಳು ಸಂಭವಿಸುತ್ತವೆ. ಈ ಹಿನ್ನೆಲೆಯಲ್ಲಿ ಪರಿಸರಕ್ಕೆ ಹಾನಿಯಾಗದಂತೆ ನಿಗಾ ವಹಿಸಬೇಕು ಹಾಗೂ ಭೂಮಿ ಉಳಿಸಲು ಎಲ್ಲರೂ ಕೈಜೋಡಿಸಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಅಶೋಕ ನೀರಲಗಿ, ತೋಟಗಾರಿಕೆ ಸಹಾಯಕ ನಿರ್ದೇಶಕ ಬಸವರಾಜ ಬರೆಗಾರ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣಾಧಿಕಾರಿ ನಾಗರಾಜ ಇಚ್ಚಂಗಿ ಸ್ವಾಗತಿಸಿ, ಉಪ ತಹಶೀಲ್ದಾರ್‌ ಅಂಕನಕೊಪ್ಪ ವಂದಿಸಿದರು.

ಪರಿಸರ ಸಂರಕ್ಷಣೆ ಎಲ್ಲರ ಮೂಲಭೂತ ಕರ್ತವ್ಯವಾಗಿದೆ. ಭೂಮಿ ಸಂರಕ್ಷಣೆ ಕುರಿತು ಗ್ರಾಮ ಮಟ್ಟದಿಂದಲೇ ತಿಳಿವಳಿಕೆ ನೀಡುವುದು ಅಗತ್ಯವಾಗಿದೆ. ಪರಿಸರ ಸಂರಕ್ಷಣೆಗೆ ಕೇವಲ ಅಧಿಕಾರಿಗಳಲ್ಲದೇ ಎಲ್ಲರೂ ಕೈಜೋಡಿಸಬೇಕು. -ಪುಟ್ಟರಾಜು, ಹಿರಿಯ ದಿವಾಣಿ ನ್ಯಾಯಾಧೀಶರು, ಹಾವೇರಿ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.