ಕುರಿ ಹಟ್ಟಿಯ ಮೇಲೆ ಚಿರತೆ ದಾಳಿ ಶಂಕೆ: 19 ಕುರಿಗಳ ಸಾವು!
Team Udayavani, May 20, 2022, 2:29 PM IST
ಹಾವೇರಿ: ರೈತರೊಬ್ಬರ ಹಟ್ಟಿಯಲ್ಲಿದ್ದ 19 ಕುರಿಗಳು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಮುದೆನೂರು ಗ್ರಾಮದಲ್ಲಿ ನಡೆದಿದೆ. ಕುರಿಗಳ ಸಾವಿಗೆ ಚಿರತೆ ದಾಳಿ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.
ಫಕ್ಕೀರಪ್ಪ ಮಳನಾಯಕನಹಳ್ಳಿ ಎಂಬುವವರಿಗೆ ಸೇರಿದ ಕುರಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತ ಫಾರಂ ಕಡೆ ಬಾರದೆ ಮನೆಯಲ್ಲಿ ಇದ್ದಾಗ ಘಟನೆ ನಡೆದಿದೆ.
ಒಂದು ಅಥವಾ ಎರಡು ಚಿರತೆಗಳು ಸೇರಿ ದಾಳಿ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸುಮಾರು ಮೂರು ಲಕ್ಷ ರೂ. ಮೌಲ್ಯದ ಕುರಿಗಳು ಸಾವನ್ನಪ್ಪಿದೆ.
ಸ್ಥಳಕ್ಕೆ ಹಲಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.