ಬಿತ್ತನೆ ಬೀಜ ಕೊರತೆಯಾಗದಿರಲಿ

•ಕಾಲಕಾಲಕ್ಕೆ ಕೃಷಿ ಅಧಿಕಾರಿಗಳ ಮಾರ್ಗದರ್ಶನ ಪಡೆಯಿರಿ

Team Udayavani, Jun 3, 2019, 11:14 AM IST

haveri-tdy-2..02

ಹಿರೇಕೆರೂರ: ಕೃಷಿ ಇಲಾಖೆ ಆವರಣದಲ್ಲಿ ನಡೆದ ರಿಯಾಯಿತಿ ದರದ ಬಿತ್ತನೆ ಬೀಜಗಳ ವಿತರಣಾ ಕಾರ್ಯಕ್ರಮಕ್ಕೆ ಶಾಸಕ ಬಿ.ಸಿ.ಪಾಟೀಲ ಚಾಲನೆ ನೀಡಿದರು.

ಹಿರೇಕೆರೂರ: ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಸಕಾಲಕ್ಕೆ ವಿತರಣೆಯಾಗುವಂತೆ ಅಧಿಕಾರಿಗಳು ಜಾಗೃತಿ ವಹಿಸಬೇಕು. ಯಾವುದೇ ಕಾರಣಕ್ಕೂ ಬೀಜದ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಶಾಸಕ ಬಿ.ಸಿ.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಕೃಷಿ ಇಲಾಖೆಯ ಆವರಣದಲ್ಲಿ ರಿಯಾಯಿತಿ ದರದಲ್ಲಿ ರೈತರಿಗೆ ಬಿತ್ತನೆ ಬೀಜ ವಿತರಿಸಿ ಮಾತನಾಡಿದ ಅವರು, ಈಗಾಗಲೇ ಬಿತ್ತನೆ ಕಾರ್ಯ ಮುಕ್ತಾಯವಾಗಬೇಕಾಗಿತ್ತು. ಆದರೆ, ಮಳೆ ಕೊರತೆಯಿಂದಾಗಿ ವಿಳಂಭವಾಗಿದ್ದು, ಮುಂಬರುವ ದಿನಗಳಲ್ಲಿ ವರುಣ ಕೃಪೆ ತೋರಿ ರೈತರು ಮೊಗದಲ್ಲಿ ಮಂದಹಾಸ ಬೀರಿ ಉತ್ತಮ ಬೆಳೆ ಬೆಳೆಯುವಂತಾಗಲಿದೆ ಎಂದು ಆಶಿಸಿದರು.

ರೈತರಿಗೆ ಕೃಷಿ ಇಲಾಖೆಯಿಂದ ನೀಡುವ ಸಹಾಯಧನದ ಬೀಜಗಳನ್ನು ಬಿತ್ತುವ ಮೂಲಕ ಉತ್ತಮ ಬೆಳೆ ಬೆಳೆಯಬಹುದು. ಕೆಲವು ಬಾರಿ ಅನ್ನದಾತ ಎಷ್ಟೇ ಕಷ್ಟಪಟ್ಟು ಉತ್ತಮ ಬೆಳೆ ಬೆಳದರೂ ಕೀಟ ಬಾಧೆಯಿಂದ ಫಸಲು ಕುಂಟಿತಗೊಳ್ಳುವುದು. ಹೀಗಾಗಿ ಅದನ್ನು ತಡೆಯಲು ರೈತರು ಬಿತ್ತನೆ ಸಮಯದಿಂದ ಬೆಳೆ ಕಟಾವಿನ ವರೆಗೊ ಕಾಲಕಾಲಕ್ಕೆ ಕೃಷಿ ಅಧಿಕಾರಿಗಳ ಮಾರ್ಗದರ್ಶನ ಪಡೆದುಕೊಳ್ಳಬೇಕು. ಬೆಳೆಗೆ ಅಗತ್ಯ ಪೋಷಕಾಂಶಗಳನ್ನು ನೀಡುವ ಮೂಲಕ ಉತ್ತಮ ಫಸಲು ಬೆಳೆಯುವಂತಾಗಲಿ. ಸರ್ಕಾರ ಸಹಾಯಧನದಲ್ಲಿ ವಿತರಿಸುವ ಬಿತ್ತನೆ ಬೀಜದ ಸದ್ಬಳಕೆ ಮಾಡಿಕೊಳ್ಳಬೇಕು. ಈ ವರ್ಷ ಉತ್ತಮ ಮಳೆಯಾಗಿ ಸರಿಯಾಗಿ ಬೆಳೆ ಬೆಳೆದು ರೈತರು ಅರ್ಥಿಕವಾಗಿ ಸಶಕ್ತರಾಗಲಿ ಎಂದು ಹಾರೈಸಿದರು.

ಸಹಾಯಕ ಕೃಷಿ ನಿರ್ದೇಶಕ ಎಂ.ವಿ. ಮಂಜುನಾಥ ಮಾತನಾಡಿ, 250 ಟನ್‌ ಬಿತ್ತನೆ ಬೀಜಗಳು ಮಾರಾಟವಾಗುವ ನಿರೀಕ್ಷೆ ಹೊಂದಿದ್ದು, ಈ ಸಲ ಸಕಾಲಕ್ಕೆ ಮಳೆ ಬಾರದ ಹಿನ್ನೆಲೆ ರೈತರು ಹತ್ತಿ ಬೆಳೆ ಕಡಿಮೆ ಮಾಡಿ ಗೋವಿನ ಜೋಳ ಅಧಿಕ ಪ್ರಮಾಣದಲ್ಲಿ ಬಿತ್ತಲಿದ್ದಾರೆ. ಹೀಗಾಗಿ ಇಲಾಖೆ ಹೆಚ್ಚುವರಿಯಾಗಿ ಹತ್ತು ಟನ್‌ ಗೋವಿನ ಜೋಳದ ಬೀಜಗಳು ಮಾರಾಟಕ್ಕೆ ಸಿದ್ಧಪಡಿಸಿಕೊಂಡಿದೆ. ರಿಯಾಯಿತಿ ಬೀಜಗಳ ವಿತರಣೆಗಾಗಿ ಹಿರೇಕೆರೂರ, ರಟ್ಟಿಹಳ್ಳಿ ಹಾಗೂ ಹಂಸಭಾವಿ ಕೇಂದ್ರಗಳ ಜೊತೆಗೆ ಹೆಚ್ಚುವರಿಯಾಗಿ ಮಾಸೂರ ಹಳ್ಳೂರ, ತಡಕನಹಳ್ಳಿ, ಚಿಕ್ಕೇರೂರ ಕೇಂದ್ರಗಳಲ್ಲಿ ಮಾರಾಟ ಮಾಡಲಾಗುವುದು. ಇದರ ಪ್ರಯೋಜನವನ್ನು ರೈತರು ಪಡೆದುಕೊಳ್ಳಬೇಕು. ಅದಲ್ಲದೆ ಗೋವಿನ ಜೋಳಕ್ಕೆ ಸೈನಿಕ ಹುಳುಗಳ ಬಾಧೆ ಹೆಚ್ಚಾಗುತ್ತಿದ್ದು, ಅದನ್ನು ತಡೆಯಲು ರೈತರು ಬೆಳೆಗಳ ಮುಂಜಾಗೃತಿ ಕ್ರಮ ತಗೆಕೊಂಡು ಸಕಾಲಕ್ಕೆ ಔಷಧ ಸಿಂಪಡಿಸಬೇಕು ಎಂದು ತಿಳಿಸಿದರು.

ತಾಲೂಕ ಪಂಚಾಯತ್‌ ಅಧ್ಯಕ್ಷ ಹೇಮಪ್ಪ ಮುದರಡ್ಡೇರ, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಜಿ.ಶಿವನಗೌಡ, ಸದಸ್ಯರಾದ ಬಸವರಾಜ ಭರಮಗೌಡ್ರ, ಪಾರವ್ವ ಸೂಡಂಬೇರ, ರತ್ನಮ್ಮ ಕೆರೂಡಿ, ಗಿರಿಜಾ ದನವಿನವರ, ಪಪಂ ಸದಸ್ಯರಾದ ಗುರುಶಾಂತಪ್ಪ ಎತ್ತಿನಹಳ್ಳಿ, ಅಶೋಕ ಜಾಡಬಂಡಿ, ಕೃಷಿ ಅಧಿಕಾರಿಗಳಾದ ಮಾರುತಿ ಅಂಗರಗಟ್ಟಿ, ಪಿ.ಎಂ.ವಾಲಿ, ಎಂ.ಜಿ.ಹಾಲಗಿ ಸೇರಿದಂತೆ ವಿವಿಧ ಗ್ರಾಮಗಳ ರೈತರು ಹಾಜರಿದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.