ಮಕ್ಕಳಲ್ಲಿ ಕೌಶಲ್ಯ ಹೆಚ್ಚಿಸುವ ಕೆಲಸವಾಗಲಿ
Team Udayavani, Nov 18, 2018, 4:18 PM IST
ಹಾವೇರಿ: ಜಗತ್ತಿನಲ್ಲಿ ಕುಶಲತೆ ಮಹತ್ವ ಪಡೆದುಕೊಂಡಿದ್ದು ಇಂದಿನ ಮಕ್ಕಳಲ್ಲಿ ಕೌಶಲ್ಯತೆ ಹೆಚ್ಚಿಸುವ ಕೆಲಸ ಅವಶ್ಯವಿದೆ ಎಂದು ಶಾಸಕ ನೆಹರು ಓಲೇಕಾರ ಹೇಳಿದರು. ನಗರದ ಜಿಲ್ಲಾ ಗುರುಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರೌಢಶಾಲಾ ವೃತ್ತಿ ಶಿಕ್ಷಣ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿಯೊಬ್ಬರಲ್ಲೂ ವಿಶೇಷ ಪ್ರತಿಭೆ ಅಡಗಿರುತ್ತದೆ. ಶಿಕ್ಷಕರಿಂದ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಬೆಳಕಿಗೆ ತರುವ ಪ್ರಯತ್ನ ನಡೆಯಬೇಕು. ಶಿಕ್ಷಕರು ಮುತುವರ್ಜಿ ವಹಿಸಿ ಮಕ್ಕಳ ಅಭಿವೃದ್ಧಿಗೆ ಶ್ರಮಿಸಬೇಕು. ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊರಹಾಕಲು ವೃತ್ತಿ ಕಲಿಕೋತ್ಸವ ಉತ್ತಮ ವೇದಿಕೆಯಾಗಿದೆ. ಇದರ ಸದುಪಯೋಗವನ್ನು ಎಲ್ಲ ಮಕ್ಕಳು ಪಡೆದುಕೊಳ್ಳಬೇಕು. ಮಕ್ಕಳ ಕೌಶಲ್ಯತೆಯನ್ನು ಬೆಳೆಸಿಕೊಳ್ಳಲು 5ನೇ ತರಗತಿಯಿಂದ ಕಾಲೇಜ್ ಹಂತದ ವರೆಗೂ ಕಲಿಕೋತ್ಸವ ನಡೆಯಬೇಕು. ಆ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತೇನೆ ಎಂದರು. ತಾಪಂ ಅಧ್ಯಕ್ಷ ಕರಿಯಪ್ಪ ಉಂಡಿ, ವೃತ್ತಿ ಶಿಕ್ಷಣ ಶಿಕ್ಷಕ ಮಂಜಪ್ಪ ಆರ್. ಮಾತನಾಡಿದರು. ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು.ಡಯಟ್ ನಿರ್ದೇಶಕ ಬಸವಲಿಂಗಪ್ಪ ಜಿ.ಎಂ., ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಶಿವಣ್ಣಸೇರಿದಂತೆ ವೃತ್ತಿ ಶಿಕ್ಷಕರ ಸಂಘದ ಪದಾಧಿಕಾರಿಗಳು, ಶಿಕ್ಷಕರು ಇದ್ದರು.
ಗಮನ ಸೆಳೆದ ಪ್ರದರ್ಶನ
ಕೃಷಿ ಉಪಕರಣಗಳು, ಔಷಧ ಸಸ್ಯಗಳು, ಏತ ನೀರಾವರಿ, ಮನೆ ಬಳಕೆ ವಸ್ತುಗಳು, ಗುಡಿ ಕೈಗಾರಿಕೆಗಳು, ಮನೆಮದ್ದು, ತೋಟಗಾರಿಕೆ, ಪಶು ಸಂಗೋಪನೆ, ಆರೋಗ್ಯ, ಹೊಲಿಗೆಗೆ ಸಂಬಂಧಿಸಿದ ವಸ್ತುಗಳು, ಗುಡಿ ಕೈಗಾರಿಕೆಗಳ ವಸ್ತುಗಳು ಪ್ರದರ್ಶನದಲ್ಲಿ ಗಮನ ಸೆಳೆದರೆ, ಬಟ್ಟೆ ಸಾಬೂನು, ವ್ಯಾಸ್ಲೆನ್, ಪೇನಾºಮ್, ಬಟ್ಟೆ ಪೌಡರ್, ಅಲಂಕಾರಿಕ ಬಟ್ಟೆಗಳು, ಶಾಲು, ಹೊದಿಕೆ, ಅಂಗಿ, ಪ್ಯಾಂಟ್, ಟವೆಲ್, ಸೀರೆ, ಕುಪ್ಪಸ, ಗೋಶಾಲೆ, ನರ್ಸರಿ, ಎರೆಗೊಬ್ಬರ, ಎರೆ ಜಲ, ಸಿರಿಧಾನ್ಯ, ಬೀಜಗಳ ಬಿತ್ತನೆ, ಗೊಬ್ಬರ, ಜೈವಿಕ ಇಂಧನ, ಕೈಯಲ್ಲಿ ಹೆಣೆದ ಅಲಂಕಾರಿಕ ವಸ್ತುಗಳು ನೋಡುಗರನ್ನು ಆಕರ್ಷಿಸಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
ಹಾವೇರಿ: ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ
ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ