ಜ್ಞಾನದ ಹಸಿವು ನೀಗಿಸುವ ಗ್ರಂಥಾಲಯ


Team Udayavani, Mar 16, 2020, 4:44 PM IST

hv-tdy-1

ಹಾವೇರಿ: ಜ್ಞಾನ ವಿಕಾಸಕ್ಕೆ ಗ್ರಂಥಾಲಯಗಳು ಸಂವರ್ಧನಾ ಶಕ್ತಿ ಕೇಂದ್ರಗಳಾಗಿ ಕಾರ್ಯ ನಿರ್ವಹಿಸುತ್ತ ಕಿರಿಯರಾದಿಯಾಗಿ ಹಿರಿಯರ ವರೆಗೂ ಜ್ಞಾನದ ಹಸಿವು ನೀಗಿಸುವ ಮಹತ್ವಪೂರ್ಣ ಕಾರ್ಯ ಮಾಡುತ್ತ ಬಂದಿವೆ ಎಂದು ಹುಬ್ಬಳ್ಳಿ ಪಿ.ಸಿ. ಜಾಬೀನ್‌ ಕಾಲೇಜಿನ ಪ್ರಧಾನ ಗ್ರಂಥಪಾಲಕ ಬಸವರಾಜ ಎಸ್‌. ಮಾಳವಾಡ ಹೇಳಿದರು.

ನಗರದ ಗುದೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಗ್ರಂಥಾಲಯ ವಿಭಾಗವು ಆಯೋಜಿಸಿದ್ದ “ಶೈಕ್ಷಣಿಕ ವರ್ಷದಲ್ಲಿ ಗ್ರಂಥಾಲಯ ಸಂಪನ್ಮೂಲಗಳ ಉಪಯೋಗ’ ಎಂಬ ವಿಷಯದಡಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ಜ್ಞಾನ ಹೆಚ್ಚಿಸಿ ಕೊಳ್ಳಬೇಕಾದರೆ ಗ್ರಂಥಾಲಯಗಳು ಅತೀ ಅವಶ್ಯಕವಾಗಿದ್ದು, ಶಿಕ್ಷಣದಲ್ಲಿ ಗ್ರಂಥಾಲಯವು ತನ್ನದೇ ಆದ ಮಹತ್ವ ಹೊಂದಿದೆ. ಪುಸ್ತಕಗಳು ಹಾಗೂ ಗ್ರಂಥಾಲಯಗಳು ಜೀವಂತ ದೇವಾಲಯಗಳಿದ್ದಂತೆ. ಉತ್ತಮ ಜ್ಞಾನಾಸಕ್ತರಿಗೆ ಪೂರಕ ಮಾಹಿತಿ ಮತ್ತು ವಿಷಯಗಳನ್ನು ಅರ್ಜಿಸಲು ಸಂಪೂರ್ಣವಾದ ಸಂಪನ್ಮೂಲವನ್ನು ಒದಗಿಸಿಕೊಡುತ್ತವೆ. ಓದುವ ಹವ್ಯಾಸದ ಜತೆಗೆ ಬೌದ್ಧಿಕ ಮತ್ತು ಮಾನಸಿಕ ಸ್ಥಿಮಿತತೆ ಕಾಯ್ದುಕೊಳ್ಳಲು ಸಹಕಾರಿ ಎಂದರು.

ಅಪಾರ ಜ್ಞಾನದ ಭಂಡಾರವೇ ಆಗಿರುವ ಗ್ರಂಥಾಲಯವು ಬದುಕಿನ ಶಾಂತಿ ಮತ್ತು ನೆಮ್ಮದಿ ಕಟ್ಟಿಕೊಡುವ ಕೆಲಸ ಮಾಡುತ್ತವೆ. ಪಠ್ಯ ಹಾಗೂ ಪಠ್ಯೇತರ ವಿಷಯಗಳನ್ನು ಏಕಕಾಲಕ್ಕೆ ಬೋಧನೆ ಮಾಡುವ ಸ್ಥಳ ಗ್ರಂಥಾಲಯ. ಸಹಪಠ್ಯವು ಒಳಗೊಳ್ಳುವ ಏಕೈಕ ಸಾಧನೆ. ಗ್ರಂಥಾಲಯವು ಶಿಕ್ಷಣ ಪ್ರಗತಿಗೆ ಪೂರಕವಾದ ಕಾರ್ಯ ನಿರ್ವಹಿಸುತ್ತದೆ. ಜತೆಗೆ ನಾವಿಣ್ಯತೆಯ ತಾಂತ್ರಿಕ ಗ್ರಂಥಾಲಯಗಳು ಇಂದು ಎಲ್ಲೆಡೆ ಲಭ್ಯವಿದ್ದು, ಅಂಗೈಯಲ್ಲಿಯೇ ಗ್ರಂಥಾಲಯವನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳಬಹುದು ಎಂದರು.

ಇನ್ನೋರ್ವ ಭಾಷಣಕಾರ ಹುಬ್ಬಳ್ಳಿ ಅಗ್ರೀಸ್‌ ಬ್ಯುಸಿನೆಸ್‌ ಸೊಲುಷನ್ಸ್‌ನ ವ್ಯವಸ್ಥಾಪಕ ನಿರ್ದೇಶಕ ವೀರು ಉಪ್ಪೀನ ಮಾತನಾಡಿ, ಗ್ರಂಥಾಲಯಗಳು ಅರಿವಿನ ದಿವ್ಯ ಜ್ಞಾನದೀವಿಗೆಗಳು. ಇಷ್ಟಪಟ್ಟು ಓದುವವರಿಗೆ ಸುಜ್ಞಾನದ ಬೆಳಕು ನೀಡುವ ಅಕ್ಷಯ ತವನಿ ಗಳಿದ್ದಂತೆ. ಇಲ್ಲಿನ ಸಂಪನ್ಮೂಲ ಎಂದಿಗೂ, ಯಾವ ಕಾಲದಲ್ಲಿಯೂ ಬತ್ತಿ ಹೋಗುವುದಿಲ್ಲ. ಪ್ರಾಚೀನ ಕಾಲದಲ್ಲಿ ಮುದ್ರಣಾಲಯಗಳಿರಲಿಲ್ಲ. ಅಂದು ಜ್ಞಾನಾರ್ಜನೆಗಾಗಿ ಬಹಳವೇ ಕಷ್ಟಪಡುವ ಸಂದರ್ಭವಿತ್ತು. ಆದ್ದರಿಂದ ಹೊಸ ಹೊಸ ಆವಿಷ್ಕಾರಗಳ ಮೂಲಕ ಜಗತ್ತು ಕಿರಿದಾಗಿದೆ.

ಅಂತರ್ಜಾಲ ಎಲ್ಲ ಜಾಲಗಳನ್ನು ಬಂಧಿಸಿ ತನ್ನಲ್ಲಿ ಹಿಡಿದಿಟ್ಟುಕೊಂಡಿದೆ. ಅತ್ಯಂತ ಸರಳವಾಗಿ ತಾಂತ್ರಿಕ ವ್ಯವಸ್ಥೆಗಳ ಮೂಲಕ ಗ್ರಂಥಾಲಯವನ್ನು ಇದ್ದಲ್ಲಿಯೇ ಬಳಸುವ ವ್ಯವಸ್ಥೆ ಇದೆ. ಇದರ ಸದುಪಯೋಗವನ್ನು ವಿದ್ಯಾರ್ಥಿಗಳಾದವರು ನಿತ್ಯದ ಓದಿನಲ್ಲಿ ಕ್ರಮವಾಗಿ ಬಳಸುವ ಅವಶ್ಯಕತೆಯಿದೆ ಎಂದರು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಡಾ| ಎಂ. ಎಸ್‌. ಯರಗೊಪ್ಪ ವಹಿಸಿದ್ದರು. ಪ್ರೊ| ವೈ.ಎಚ್‌. ಯಲವಿಗಿ, ಪ್ರೊ| ಡಿ.ಎ. ಕೊಲ್ಲಾಪುರೆ, ಡಾ| ಎಸ್‌.ವಿ. ಮಡವಾಳೆ, ಪ್ರೊ| ವೆಂಕಟೇಶ ಕಲಾಲ ಇದ್ದರು. ಪ್ರಿಯಾ ಉಪ್ಪಿನ ಸಂಗಡಿಗರು ಪ್ರಾರ್ಥಿಸಿದರು. ನವರತ್ನ ಸ್ವಾಗತಿಸಿದರು. ಡಾ| ಟಿ. ರಾಜೇಶ್ವರಿ ಪ್ರಾಸ್ತಾವಿಕ ಮಾತನಾಡಿದರು. ಗ್ರಂಥಪಾಲಕ ಡಾ| ಆತ್ಮಾನಂದ ಜಿ.ಎಚ್‌. ಪರಿಚಯಿಸಿದರು. ರೂಪಾ ಕೋರೆ ನಿರೂಪಿಸಿದರು. ಶಿವಯೋಗಿ ಎ. ಚನ್ನಶೆಟ್ರ ವಂದಿಸಿದರು.

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.