ಕೌಶಲ್ಯದಿಂದ ಬದುಕು ಉಜ್ವಲ

•ಜೀವನ ದೃಷ್ಟಿ ಸರಿಪಡಿಸಿಕೊಳ್ಳಿ•ಸರಿದಾರಿಯೇ ಬದುಕು

Team Udayavani, Aug 25, 2019, 11:06 AM IST

hv-tdy-3

ಹಾನಗಲ್ಲ; ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರವನ್ನು ಎನ್‌ಎಸ್‌ಎಸ್‌ ಜಿಲ್ಲಾ ನೋಡಲ್ ಅಧಿಕಾರಿ ಡಾ| ಪ್ರಕಾಶ ಹೊಳೇರ ಉದ್ಘಾಟಿಸಿದರು.

ಹಾನಗಲ್ಲ: ಕೌಶಲ್ಯಯುತ ವಿಧಾನದಿಂದ ಯಶಸ್ವಿ ಬದುಕು ನಮ್ಮದಾಗಲಿದ್ದು, ಭವಿಷ್ಯದ ಬದುಕಿಗೆ ನಮ್ಮನ್ನು ಸಜ್ಜುಗೊಳಿಸಿಕೊಳ್ಳುವಲ್ಲಿ ಯುವ ಸಮುದಾಯ ಈಗಲೇ ಸನ್ನದ್ಧರಾಗಬೇಕು ಎಂದು ಎನ್‌ಎಸ್‌ಎಸ್‌ ಜಿಲ್ಲಾ ನೋಡಲ್ ಅಧಿಕಾರಿ ಡಾ| ಪ್ರಕಾಶ ಹೊಳೇರ ತಿಳಿಸಿದರು.

ಶನಿವಾರ ಹಾನಗಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಾವೇರಿ ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಯೋಜಿಸಿದ್ದ ‘ಜೀವನ ಕೌಶಲ್ಯ ತರಬೇತಿ’ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಪಠ್ಯದ ಹೊರತಾಗಿಯೂ ಒಂದು ಪ್ರಪಂಚವಿದೆ. ಅದು ನಮ್ಮ ಬದುಕಿಗೆ ಸಹಕಾರಿಯೂ ಆಗಿದೆ. ಅದರೆ, ಅಲ್ಲಿ ಒಳ್ಳೆಯದನ್ನು ಮಾತ್ರ ಸ್ವೀಕರಿಸಬೇಕು. ನಮ್ಮ ಸುತ್ತಲ ಬದುಕು ಸುಂದರವಾಗಲು ಸುಂದರ ಬದುಕಿನ ಕನಸುಗಳೂ ಬೇಕು. ಆತ್ಮ, ಮನಸ್ಸು, ದೈಹಿಕ ಬಲ ಕುಂದಬಾರದು. ಸರಿದಾರಿಯತ್ತ ಬದಲಾವಣೆಯೇ ಬದುಕು. ದುಸ್ಸಾಹಸ ಬೇಡ. ಜೀವನ ದೃಷ್ಟಿ ಸರಿಪಡಿಸಿಕೊಳ್ಳಿ ಎಂದು ಸಲಹೆ ಮಾಡಿದರು.

ಅಧ್ಯಕ್ಷತೆವಹಿಸಿ ಮಾತನಾಡಿದ ಪ್ರಾಚಾರ್ಯ ಮಾರುತಿ ಶಿಡ್ಲಾಪುರ, ಯುವ ಮನಸ್ಸುಗಳು ಅಕಾಲಿಕವಾಗಿ ಮುಪ್ಪಿಗೆ ಬಲಿಯಾಗುತ್ತಿವೆ. ಪುಸ್ತಕ ಸಂಸ್ಕೃತಿ ದೂರವಾಗಿ ಆಧುನಿಕ ತಂತ್ರಜ್ಞಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದೇವೆ. ಆಧುನಿಕತೆಯ ಹೆಸರಿನಲ್ಲಿ ಬದುಕು ಹಸನಗೆಡುವುದು ಬೇಡ ಎಂದ ಅವರು, ನಾಳೆಗಾಗಿ ನನ್ನಲ್ಲಿ ಉತ್ಸಾಹ ಇಮ್ಮಡಿಗೊಳ್ಳಬೇಕು. ಅದಕ್ಕಾಗಿ ಉನ್ನತವಾದುದನ್ನು ಕಟ್ಟಿಕೊಳ್ಳಬೇಕು. ಹೋದ ಸಮಯ ಮತ್ತೆ ಬಾರದು ಎಂದರು.

ಜೀವನ ಕೌಶಲ್ಯ ತರಬೇತಿಯ ಸಂಪನ್ಮೂಲ ವ್ಯಕ್ತಿ ಈಶ್ವರ ಹುಣಸಿಕಟ್ಟಿ ಮಾತನಾಡಿ, ನಮ್ಮ ಮನಸ್ಸನ್ನು ನಮ್ಮ ಹಿಡಿತದಲ್ಲಿಡಬೇಕು. ಜೀವನ ಎಂದರೆ ಮನಬಂದಂತೆ ಬದುಕುವುದಲ್ಲ, ಮನಸ್ಸನ್ನು ಆದರ್ಶ ಬದುಕಿಗೆ ಹತ್ತಿರ ಮಾಡಿಕೊಳ್ಳುವುದು ಮುಖ್ಯ. ಜೀವನ ವಿಕಾಸವೇ ಬದುಕು. ಅವಿವೇಕವೆ ಬದುಕಿನ ಅಂತ್ಯ. ಮನೋಬಲವೇ ಎಲ್ಲದಕ್ಕೂ ಮುಖ್ಯ, ಧೈರ್ಯ ಸಾಹಸ ಮನೋವೃತ್ತಿಯೂ ಬೇಕು. ಮೋಸ ವಂಚನೆಯ ಜೀವನದಿಂದ ದೂರವಿರಿ. ಸಾಧ್ಯವಾದರೆ ಸಹಾಯ ಮಾಡಿ ಜೀವನ ಸಾರ್ಥಕವಾಗುತ್ತದೆ ಎಂದರು.

ಜೀವನ ಕೌಶಲ್ಯ ತರಬೇತಿಯ ಸಂಪನ್ಮೂಲ ವ್ಯಕ್ತಿ ಸಂಜೀವಕುಮಾರ ಬೆಳವತ್ತಿ ಪ್ರಾಸ್ತಾವಿಕ ಮಾತನಾಡಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ| ಎಚ್.ಎಸ್‌.ಬಾರ್ಕಿ, ಉಪನ್ಯಾಸಕ ಪ್ರೊ| ಎಸ್‌.ಎಸ್‌. ನಿಸ್ಸೀಮಗೌಡರ್‌, ಪ್ರೊ| ಸುಮಂಗಲಾ ನಾಯನೇಗಿಲ, ಪ್ರೊ| ರೂಪಾ ಹಿರೇಮಠ, ಪ್ರೊ| ಕೆ.ಈಶ್ವರ, ಪ್ರೊ| ವೀಣಾ ದೇವರಗುಡಿ, ಪ್ರೊ| ಮೂಕಾಂಬಿಕಾ ನಾಯ್ಕ ಅತಿಥಿಗಳಾಗಿದ್ದರು. ದುರ್ಗಾಲಕ್ಷಿ ್ಮೕ ಕುಲಕರ್ಣಿ ಭಾವಗೀತೆ ಹಾಡಿದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.