ನಿಸ್ವಾರ್ಥ ಸೇವೆಯಿಂದ ಬದುಕು ಸಾರ್ಥಕ


Team Udayavani, Nov 18, 2019, 1:45 PM IST

hv-tdy-2

ರಾಣಿಬೆನ್ನೂರ: ಪ್ರಶಸ್ತಿ ಪುರಸ್ಕಾರಗಳ ನಿರೀಕ್ಷೆ ಹೊಂದದೆ ನಿಸ್ವಾರ್ಥ ಭಾವನೆಯಿಂದ ಕೆಲಸ ಮಾಡಬೇಕು. ಕೆಲಸ ಮಾಡುವುದು ನಮ್ಮ ಕರ್ತವ್ಯ ಮಾತ್ರ ಅದರ ಫಲ ಪರಮಾತ್ಮನಿಗೆ ಬಿಡಬೇಕು, ಅಂದಾಗ ಜೀವನ ಪರಿಪೂರ್ಣವಾಗಲು ಸಾಧ್ಯ ಎಂದು ರಟ್ಟಿಹಳ್ಳಿ ಕಬ್ಬಿಣಕಂತಿಮಠದ ಶಿವಲಿಂಗ ಶಿವಾಚಾರ್ಯರು ಹೇಳಿದರು.

ನಗರದ ಚೆನ್ನೇಶ್ವರಮಠದಲ್ಲಿ ಇತ್ತೀಚಿಗೆ ಜರುಗಿದ ಜ್ಞಾನವಾಹಿನಿ ಮಾಸಿಕ ಧರ್ಮಸಭೆ ಮತ್ತು ರಂಭಾಪುರಿ ಪೀಠದ ಲಿಂ| ಜಗದ್ಗುರು ವೀರ ಗಂಗಾಧರ ಶಿವಾಚಾರ್ಯರ ಸಂಸ್ಮರಣೋತ್ಸವದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಮನುಜನು ತನ್ನ ಜೀವಿತ ಕಾಲದಲ್ಲಿ ಮನಸ್ಸು, ಬುದ್ಧಿ, ಚಿತ್ತ ಎಲ್ಲಿಯವರೆಗೂ ಶುದ್ಧವಾಗಿರುವುದಿಲ್ಲವೋ ಅಲ್ಲಿಯವರೆಗೂ ಶಾಂತಿ, ನೆಮ್ಮದಿ ಹಾಗೂ ಸಂತೃಪ್ತಿ ದೊರೆಯುವುದಿಲ್ಲ ಎಂದು ನುಡಿದರು.

ಹೊನ್ನಾಳಿ ಹಿರೇಕಲ್ಮಠದ ಒಡೆಯರ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ಮಾಮೀಜಿ ಮಾತನಾಡಿ, ಮನುಷ್ಯ ಮನಸ್ಸು, ಬುದ್ದಿ, ಚಿತ್ತಗಳನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡು ಸದ್ಗುರುವಿನ ಉಪದೇಶವನ್ನು ಆಲಿಸಿದಾಗಲೇ ಮನುಜ ಸದ್ಗತಿಯನ್ನು ಪಡೆಯಲು ಸಾಧ್ಯ. ಸತ್ಸಂಗವು ಮನುಷ್ಯನನ್ನು ಒತ್ತಡದ ಜೀವನದಿಂದ ಬಿಡುಗಡೆ ಪಡೆದು ಮುಕ್ತಿಯ ಕಡೆಗೆ ಕೊಂಡೊಯ್ಯುವ ಸನ್ಮಾರ್ಗವಾಗಿದೆ, ಸತ್ಸಂಗವು ಜನ್ಮಜನ್ಮಾಂತರದ ಪಾಪಕರ್ಮಗಳು ನಾಶವಾಗಿ ಮುಕ್ತಿಯನ್ನು ಪಡೆಯಲು ಸಾಧ್ಯ ಎಂದು ನುಡಿದರು.

ಕಾರ್ಯಕ್ರಮ ಉದ್ಘಾಟಿಸಿದ ತಾಲೂಕು ಕಸಾಪ ಅಧ್ಯಕ್ಷೆ ಎ.ಬಿ.ರತ್ನಮ್ಮ ಮಾತನಾಡಿ, ಇಂದಿನ ಒತ್ತಡ ಜೀವನದಲ್ಲಿ ಸಾಗುತ್ತಿರುವ ಮನುಜರು ಆಧ್ಯಾತ್ಮದ ಚಿಂತನೆ ಮತ್ತು ಭಾವನೆಗಳಿಂದ ಬಿಡುಗಡೆ ಹೊಂದುತ್ತಿದ್ದೇವೆ. ಅಧ್ಯಾತ್ಮ ಜೀವನವಿಲ್ಲದ ಬದುಕು ನುಸಿ ತಿಂದ ಧಾನ್ಯಗಳಂತಾಗುತ್ತಿದ್ದೇವೆ. ಇದರಿಂದ ಜೀವನ ಬರಡಾಗುತ್ತಿದೆ. ಆದಕಾರಣ ಪ್ರತಿಯೊಬ್ಬರೂ ಮನೆಯಲ್ಲಿ ಮಕ್ಕಳಿಗೆ ಸಂಸ್ಕಾರ ಹಾಗೂ ನೀತಿ ಕಥೆಗಳನ್ನು ಹೇಳಬೇಕು ಎಂದರು. ಹರಿಹರದ ಕವಿಗುರುರಾಜ ಪಾಟೀಲ ರಂಭಾಪುರಿ ಪೀಠದ ಲಿಂಗೈಕ್ಯ ಶ್ರೀಗಳ ಜೀವನ ಮತ್ತು ಸಾಧನೆ ಕುರಿತು ಉಪನ್ಯಾಸ ನೀಡಿದರು.

ಇದೇ ಸಂದರ್ಭದಲ್ಲಿ ಸ್ಥಳೀಯ ಆನಿಮಠದ ಆರ್‌.ಜಿ. ಮಹೇಶ್ವರಯ್ಯ, ಪಿಎಚ್‌ಡಿ ಪುರಸ್ಕೃತ ಡಾ| ದುಶಂತ ಓಲೇಕಾರ, ಗುತ್ತಲದ ಸಿ.ಬಿ.ಕುರುವತ್ತಿಗೌಡ್ರ, ಶಿಕ್ಷಕ ಪಾಲಾಕ್ಷಸ್ವಾಮಿ ನೆಗಳೂರಮಠ ಅವರನ್ನು ಸನ್ಮಾನಿಸಲಾಯಿತು. ನಗರಸಭೆ ಪೌರಾಯುಕ್ತ ಡಾ| ಮಹಾಂತೇಶ ಎನ್‌., ಉಮೇಶ ಗುಂಡಗಟ್ಟಿ, ಅ.ಸಿ.ಹಿರೇಮಠ, ಸುನಂದಮ್ಮ ತಿಳವಳ್ಳಿ, ವಿ.ವಿ. ಹರಪನಹಳ್ಳಿ, ಗಿರಿಜಾ ದುರ್ಗದಮಠ, ಕಸ್ತೂರಿ ಪಾಟೀಲ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.