ನಿವಾರಣೆಯಾಗದ ಸ್ಥಳೀಯ ಸಂಸ್ಥೆ ಮೀಸಲಾತಿ ಗೊಂದಲ

ಅಧ್ಯಕ್ಷ, ಉಪಾಧ್ಯಕ್ಷರಿಲ್ಲದೇ ನಾವಿಕನಿಲ್ಲದ ದೋಣಿಯಂತಾದ ಸ್ಥಿತಿ

Team Udayavani, Sep 11, 2020, 4:52 PM IST

ನಿವಾರಣೆಯಾಗದ ಸ 5 ಸ್ಥಳೀಯ ಸಂಸ್ಥೆ ಮೀಸಲಾತಿ ಗೊಂದಲ

ಹಾವೇರಿ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದು ಸದಸ್ಯರು ಆಯ್ಕೆಯಾಗಿ 2 ವರ್ಷ ಕಳೆದರೂ, ಇನ್ನೂ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಗೊಂದಲ ನಿವಾರಣೆಯಾಗದ ಕಾರಣ ಇದುವರೆಗೂ ಅಧಿ ಕಾರ ಸಿಕ್ಕಿಲ್ಲ. ಹೀಗಾಗಿ, ಸ್ಥಳೀಯ ಸಂಸ್ಥೆಗಳ ಸ್ಥಿತಿ ನಾವಿಕನಿಲ್ಲದ ದೋಣಿಯಂತಾಗಿದೆ.

2018ರ ಆಗಸ್ಟ್‌ ತಿಂಗಳಲ್ಲಿ ಹಾವೇರಿ, ರಾಣಿಬೆನ್ನೂರು, ಹಿರೇಕೆರೂರು, ಸವಣೂರು, ಹಾನಗಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆನಡೆದು, ಸೆಪ್ಟೆಂಬರ್‌ 3 ರಂದು ಫಲಿತಾಂಶ ಬಂದಿತ್ತು. ಚುನಾವಣೆನಡೆದು ಬರೋಬ್ಬರಿ ಎರಡು ವರ್ಷಗಳು ಕಳೆದಿದ್ದರೂ ಚುನಾವಣೆಯಲ್ಲಿ ಗೆದ್ದಿರುವ ಅಭ್ಯರ್ಥಿಗಳು ಅಧಿಕಾರದ ಗದ್ದುಗೆ ಏರಲು ಸಾಧ್ಯವಾಗಿಲ್ಲ.

2019 ಮೇ ತಿಂಗಳಲ್ಲಿ ಚುನಾವಣೆ ಎದುರಿಸಿದ ಬ್ಯಾಡಗಿ, ಶಿಗ್ಗಾವಿ ಪುರಸಭೆಗಳ ಚುನಾಯಿತ ಅಭ್ಯರ್ಥಿಗಳು ಸಹ ಇದೇ ಸಂದಿಗ್ಧ ಸ್ಥಿತಿ ಎದುರಿಸುತ್ತಿದ್ದಾರೆ. ಹೀಗಾಗಿ, ಸ್ಥಳೀಯ ಆಡಳಿತ ಯಂತ್ರಗಳು ಸಂಪೂರ್ಣ ನಿಷ್ಕ್ರಿಯಗೊಂಡಿದ್ದು, ಜನಪ್ರತಿನಿಧಿಯಾಗಿ ಆಯ್ಕೆಯಾದರೂ ಜನರ ಸೇವೆ ಮಾಡಲು ಇವರಿಂದ ಸಾಧ್ಯವಾಗುತ್ತಿಲ್ಲ.

2 ವರ್ಷ ಹಿಂದೆಯೇ ಚುನಾವಣೆ: ಈಗಾಗಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದು ಎರಡು ವರ್ಷಗಳೇ ಕಳೆದಿವೆ. ಮೀಸಲಾತಿಕಾದಾಟದಿಂದ ಕೆಲವರು ತಮಗೆ ಮೀಸಲು ಸಿಗಬೇಕು ಎಂದು ಪಟ್ಟುಹಿಡಿದು ಸರ್ಕಾರದ ಮೀಸಲು ನಿಗದಿ ವಿರುದ್ಧ ನ್ಯಾಯಾಲಯದ ಮೆಟ್ಟಲು ಏರಿದ್ದರಿಂದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನನೆಗುದಿಗೆ ಬಿದ್ದಿದೆ. ಇನ್ನೊಂದೆಡೆ ಅಧಿಕಾರ ಸಿಗದೇ ವಾರ್ಡ್‌ಗಳ ಜನರ ಕುಂದುಕೊರತೆಗಳಿಗೆ ಸಮರ್ಪಕವಾಗಿ ಸ್ಪಂದಿಸಲು ಸಾಧ್ಯವಾಗದೇ ಚುನಾಯಿತ ಅಭ್ಯರ್ಥಿಗಳು ಪರದಾಡುತ್ತಿದ್ದಾರೆ. ಚುನಾಯಿತ ಸದಸ್ಯರು ಇದ್ದರೂ ಅಧ್ಯಕ್ಷ, ಉಪಾಧ್ಯಕ್ಷರು ಆಯ್ಕೆಗೊಳ್ಳದೇ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಡಳಿತಾಧಿಕಾರಿಗಳ ನೇತೃತ್ವದಲ್ಲಿ ಆಡಳಿತ ಮುಂದುವರೆದಿದೆ.

ಅಧಿಕಾರಿಗಳದ್ದೇ ದರ್ಬಾರ್‌: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಯ್ಕೆಯಾದರೂ ಇನ್ನೂ ಅಧಿಕೃಧಿತವಾಗಿ ಸದಸ್ಯರಾಗಿಲ್ಲ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದು ಜನಪ್ರತಿನಿಧಿ ಗಳ ಆಡಳಿತ ಶುರುವಾದ ಬಳಿಕವೇ ಸದಸ್ಯರ ಅಧಿಕಾರವೂ ಆರಂಭವಾಗುತ್ತದೆ. ಈಗ ಹೆಸರಿಗಷ್ಟೇ ಸದಸ್ಯರಾಗಿದ್ದು, ಯಾವ ಕೆಲಸ ಮಾಡಲಾಗದ ಸ್ಥಿತಿಯಲ್ಲಿ ಸದಸ್ಯರಿದ್ದಾರೆ. ಹೀಗಾಗಿ, ನಗರ ಸಂಸ್ಥೆಗಳು ಸಹಯಾವುದೇ ಕೆಲಸ ಕಾರ್ಯಗಳಿಗೆ ಮಾಡಲು ಸಾಧ್ಯವಾಗದೆ ಅತಂತ್ರವಾಗಿವೆ. ಇದರಿಂದ ಅಧಿಕಾರಿಗಳು ಮಾಡಿದ್ದೇ ಆಟ ಎಂಬಂತಾಗಿದೆ. ಗೆದ್ದ ಸದಸ್ಯರ ಮಾತನ್ನು ಅಧಿಕಾರಿಗಳು ಕೇಳುತ್ತಿಲ್ಲ. ಇದನ್ನು ವಿರೋಧಿ ಸಲು ಸದಸ್ಯರಿಗೆ ಅಧಿಕಾರದ ಗುರಾಣಿ ಸಿಕ್ಕಿಲ್ಲ. ಇತ್ತ ಮತ ಹಾಕಿ ಗೆಲ್ಲಿಸಿದ ಜನರು ತಮ್ಮ ವಾರ್ಡ್‌ ಸಮಸ್ಯೆಗಳನ್ನು ಸದಸ್ಯರ ಮುಂದಿಡುತ್ತಿದ್ದು, ಅವರು ಇಕ್ಕಟ್ಟಿಗೆ ಸಿಲುಕಿದ್ದಾರೆ.

ಒಟ್ಟಿನಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿಗೆ ಹಿಡಿದಿರುವ ಗ್ರಹಣ ಯಾವಾಗ ತೆರವಾಗುತ್ತೋ, ನನೆಗುದಿಗೆ ಬಿದ್ದಿರುವ ಅಭಿವೃದ್ಧಿ ಕಾಮಗಾರಿಗಳು ಯಾವಾಗ ವೇಗ ಪಡೆಯುತ್ತವೆಯೋ ಎಂದು ಜನರು ಚಾತಕ ಪಕ್ಷಿಯಂತೆ ಕಾಯುವಂತಾಗಿದೆ.

ಆಕಾಂಕ್ಷಿಗಳಲ್ಲಿ ಸಂಚಲನ: ರಾಜ್ಯ ಸರ್ಕಾರ ಮತ್ತೂಮ್ಮೆ ನಗರಾಭಿವೃದ್ಧಿ ಇಲಾಖೆ ಮೂಲಕ ಮೀಸಲಾತಿ ನಿಗದಿಗೆಮಾರ್ಗಸೂಚಿಗಳನ್ನು ಪರಿಷ್ಕರಿಸಲು ಆದೇಶಿಸಿರುವುದು ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗಳ ಮೇಲೆ ಕಣ್ಣಿಟ್ಟಿರುವ ಪ್ರಬಲ ಆಕಾಂಕ್ಷಿಗಳ ನಿದ್ದೆಗೆಡಿಸಿದೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಅನ್ವಯ ಅಧಿ ಕಾರ ಹಿಡಿಯುವ ಕನಸು ಹೊಂದಿರುವ ರಾಜಕೀಯ ಪಕ್ಷಗಳ ಆಕಾಂಕ್ಷಿಗಳಲ್ಲಿ ಸಂಚನ ಮೂಡಿಸಿದೆ. ಮೀಸಲಾತಿಪರಿಷ್ಕರಣೆ ಸಂದರ್ಭದಲ್ಲಿ ಎಲ್ಲಿ ನಮಗೆ ಪೂರಕವಾದ ಮೀಸಲಾತಿ ರದ್ದಾಗುತ್ತದೆ ಎಂಬ ಆತಂಕ ಕೆಲವರನ್ನು ಕಾಡುತ್ತಿದ್ದರೆ,ಮೀಸಲಾತಿ ಪರಿಷ್ಕರಣೆಯಿಂದ ತಮಗೆ ಅನುಕೂಲವಾಗಬಹುದು ಎಂಬ ಲೆಕ್ಕಾಚಾರ ಕೆಲವು ಆಕಾಂಕ್ಷಿಗಳದ್ದಾಗಿದೆ.

ಚುನಾವಣೆಯಲ್ಲಿ ಗೆದ್ದರೂ ಅಧಿಕೃತವಾಗಿ ನಗರಸಭೆ ಸದಸ್ಯರಾಗಲು ಸಾಧ್ಯವಾಗಿಲ್ಲ, ನಗರದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದೆ. ಆದರೂ, ಸದಸ್ಯರು ತಮ್ಮದೇ ವಾಪ್ತಿಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಅಭಿವೃದ್ಧಿ ಕಾಮಗಾರಿ ನಡೆಯದ ಪರಿಣಾಮ ಅನುದಾನ ಹಾಗೇ ಉಳಿದಿದೆ. ಮೂಲಭೂತ ಸೌಕರ್ಯ ಕೇಳಿ ಬರುವ ಸಾರ್ವಜನಿಕರಿಗೆ ಉತ್ತರಿಸುವುದೂ ಕಷ್ಟವಾಗಿದೆ. – ಸಂಜೀವಕುಮಾರ ನೀರಲಗಿ, ನಗರಸಭೆ ಚುನಾಯಿತ ಸದಸ್ಯರು, ಹಾವೇರಿ

 

-ವೀರೇಶ ಮಡ್ಲೂರ

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.