ಸ್ಥಳೀಯ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ


Team Udayavani, May 9, 2019, 2:15 PM IST

hav-5

ಬ್ಯಾಡಗಿ: ಮೇ 29 ರಂದು ನಡೆಯಲಿರುವ ಸ್ಥಳೀಯ ಪುರಸಭೆಯ ಚುನಾವಣೆಗೆ ಮೇ 9 ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಹಶೀಲ್ದಾರ್‌ ಕೆ.ಗುರುಬಸವರಾಜ ಹೇಳಿದರು.

ಪಟ್ಟಣದ ತಹಶೀಲ್ದಾರ್‌ ಕಚೇರಿ ಸಭಾ ಭವನದಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಮಾತನಾಡಿದ ಅವರು, ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 9 ರಿಂದ 16ರ ವರೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದಾಗಿದ್ದು ಮೇ 17 ನಾಮಪತ್ರ ಪರಿಶೀಲನೆ, ಮೇ 20 ನಾಮಪತ್ರ ಪಡೆಯಲು ಅಂತಿಮ ದಿನ, ಮೇ 29 ರಂದು ಮತದಾನ ಹಾಗೂ ಅವಶ್ಯಕತೆ ಇದ್ದಲ್ಲಿ ಮೇ 30 ರಂದು ಮರು ಮತದಾನಕ್ಕೆ ದಿನ ನಿಗದಿ ಪಡಿಸಲಾಗಿದ್ದು, ಮೇ 31 ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟವಾಗಲಿದೆ.

ಒಟ್ಟು 23182 ಮತದಾರರು: ಇಪ್ಪತ್ಮೂರು ವಾರ್ಡ್‌ಗಳಿಂದ 11288 ಪುರುಷರು ಹಾಗೂ 11880 ಮಹಿಳೆಯರು ಇತರೆ 4 ಸೇರಿದಂತೆ ಒಟ್ಟು 23182 ಮತದಾರರಿದ್ದಾರೆ ಎಂದರು. ಪ್ರಸಕ್ತ ಚುನಾವಣೆಯಲ್ಲಿ ಮತದಾನಕ್ಕೆ ಬ್ಯಾಲೆಟ್ ಪೇಪರ್‌ ಬದಲಾಗಿ ಇವಿಎಂ ಮಿಷನ್‌ಗಳನ್ನು ಬಳಕೆ ಮಾಡಲಾಗುತ್ತಿದೆಯಾದರೂ, ಹಾಕಿದ ಮತವನ್ನು ದೃಢೀಕರಿಸಿಕೊಳ್ಳಲು ಬಳಕೆ ಮಾಡಲಾಗುತ್ತಿದ್ದ ವಿವಿ ಪ್ಯಾಟ್ ಮಾತ್ರ ಈ ಚುನಾವಣೆಯಲ್ಲಿ ಬಳಕೆಯಾಗುತ್ತಿಲ್ಲ ಎಂದರು.

ಮೕವರು ಚುನಾವಣಾಧಿಕಾರಿಗಳು: ವಾರ್ಡ್‌ಗಳಿಗನುಸಾರ ಮೂವರು ಆರ್‌ಒ (ರಿಟರ್ನಿಂಗ್‌ ಆಫಿಸರ್‌) ಹಾಗೂ ಮೂವರು ಏಪಿ ಆರ್‌ಒಗಳನ್ನು ಆಯೋಜನೆ ಮಾಡಲಾಗಿದೆ. ಅದರಲ್ಲಿ ವಾರ್ಡ್‌ ಸಂಖ್ಯೆ 1 ರಿಂದ 8ರ ವರೆಗೆ ಅಕ್ಷರದಾಸೋಹ ಸಹಾಯಕ ನಿರ್ದೇಶಕ ಎನ್‌.ತಿಮ್ಮಾರೆಡ್ಡಿ, (ಮೊ.9480835636) ಅವರನ್ನು ಸಹಾಯಕ ಅಧಿಕಾರಿಯಾಗಿ ಕೃಷಿ ಅಧಿಕಾರಿ ಆರ್‌.ಮಂಜುನಾಥ (ಮೊ.8277931830) ಅವರನ್ನು, ವಾರ್ಡ್‌ ಸಂಖ್ಯೆ 9 ರಿಂದ 16ರ ವರೆಗೆ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎಂ.ಎಫ್‌ ಬಾರ್ಕಿ (ಮೊ.9480695253) ಸಹಾಯಕ ಅಧಿಕಾರಿಯಾಗಿ ಟ.ಎಸ್‌.ಲಮಾಣಿ (ಮೊ.9448927085), ವಾರ್ಡ್‌ ಸಂಖ್ಯೆ 17 ರಿಂದ 23ರ ವರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ರುದ್ರಮುನಿ (ಮೊ.9480695246) ಸಹಾಯಕ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆ ಪುಂಡಲಿಕ ಮಾನನವರ ಅವರನ್ನು ನಿಯೋಜನೆ ಮಾಡಲಾಗಿದೆ ಎಂದರು.

ಒಟ್ಟು 23 ಮತಗಟ್ಟೆಗಳು: ಪ್ರತಿ ವಾರ್ಡಗೆ ಒಂದರಂತೆ ಒಟ್ಟು 23 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದರದಲ್ಲದೇ ಮಸ್ಟ ರಿಂಗ್‌ ಡಿಮಸ್ಟರಿಂಗನ್ನು ತಹಶೀಲ್ದಾರ ಕಚೇರಿಯಲ್ಲಿಯೇ ನಡೆಸಲಾಗುವುದು ಎಂದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿನ ಸೂಚನೆ ಮೇರೆಗೆ ವಿಶೇಷಚೇತನರ ಮತದಾನಕ್ಕೆ ವಿಶೇಷವಾದ ಸೌಲಭ್ಯ ಕಲ್ಪಿಸಲಾಗುವುದು ಎಂದರು.

3 ಸ್ಥಳದಲ್ಲಿ ನಾಮ ಪತ್ರ ಸಲ್ಲಿಕೆ: ಮೇ 9ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಮೂರು ಸ್ಥಳಗಳಲ್ಲಿ ನಾಮಪತ್ರ ಸಲ್ಲಿಕೆಗೆ ವ್ಯವಸ್ಥೆ ಮಾಡಲಾಗಿದೆ. ತಾಲೂಕು ಪಂಚಾಯತ್‌ ಸಭಾಂಗಣ, ಪುರಸಭೆ ಬ್ಯಾಡಗಿ ಮತ್ತು ಸಾಮರ್ಥ್ಯಸೌಧದಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ ಎಂದರು.

ಶೈಕ್ಷಣಿಕ ಹಿನ್ನಡೆಗೆ ಅವಕಾಶ ಮಾಡಬೇಡಿ: ಸಮಾಜ ಕಲ್ಯಾಣ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ವತಿಯಿಂದ ಇಬ್ಬಿಬ್ಬರು ಅಧಿಕಾರಿಗಳನ್ನು ಆರ್‌ಒ, ಎಆರ್‌ಒಗಳನ್ನಾಗಿ ನೇಮಕ ಮಾಡಿದ್ದರ ಹಿನ್ನೆಲೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ ಟಿ.ಎಸ್‌.ಲಮಾಣಿ ಹಾಗೂ ಸಮನ್ವಯಾಧಿಕಾರಿ ಎಂ.ಎಫ್‌.ಬಾರ್ಕಿ ಮಾತನಾಡಿ, ಇನ್ನೇನು ಕೇವಲೆ ದಿನಗಳಲ್ಲಿ ಶಾಲೆಗಳು ಆರಂಭವಾಗಲಿವೆ. ಮೇ 20ರಿಂದ ಪುಸ್ತಕ ವಿತರಣೆ ಸೇರಿದಂತೆ ಮೇ 28ಕ್ಕೆ ಶಾಲಾ ಪ್ರಾರಂಭೋತ್ಸವ ಹಾಗೂ ಜೂನ್‌ನಲ್ಲಿ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಇಬ್ಬರಲ್ಲಿ ಯಾರಾದರು ಒಬ್ಬರನ್ನು ಚುನಾವಣೆ ಕಾರ್ಯದಿಂದ ಕೈ ಬಿಟ್ಟಲ್ಲಿ ಅನೂಕೂಲವಾಗಲಿದೆ. ಇಲ್ಲದೇ ಹೋದಲ್ಲಿ ಶೈಕ್ಷಣಿಕ ಕಾರ್ಯಗಳಿಗೆ ಹಿನ್ನಡೆಯಾಲಿದ್ದು. ಈ ಕುರಿತಂತೆ ಮತ್ತೂಮ್ಮೆ ಪರಿಶೀಲನೆ ನಡೆಸುವಂತೆ ಮನವಿ ಮಾಡಿದರು. ಇದೇ ರೀತಿಯ ಸಮಸ್ಯೆ ನಮ್ಮ ಇಲಾಖೆಯದ್ದು ಆಗಿದ್ದು, ಈ ಕುರಿತಂತೆ ಜಿಲ್ಲಾಧಿಕಾರಿಗಳಿಗೆ ಈ-ಮೇಲ್ ಮೂಲಕ ಮನವಿ ಸಲ್ಲಿಸಿರುವುದಾಗಿ ಲಮಾಣಿ ತಿಳಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.