ಸ್ವಾತಂತ್ರ್ಯ ಸಂಗ್ರಾಮಕ್ಕೆ ಮುನ್ನುಡಿ ಬರೆದಿದ್ದ ಮಹಾದೇವ

ಹಾವೇರಿ-ಹೊಸರಿತ್ತಿಯಲ್ಲಿ ಮೈಲಾರ ಮಹಾದೇವ, ವೀರಯ್ಯ ಹಿರೇಮಠ, ತಿರಕಪ್ಪ ಮಡಿವಾಳ ಅವರ ಸ್ಮರಣೆ

Team Udayavani, Apr 1, 2022, 3:23 PM IST

16

ಹಾವೇರಿ: ಸ್ವಾತಂತ್ರ್ಯ ಹೋರಾಟಗಾರರ ತವರೂರು ಎಂದು ಕರೆಸಿಕೊಳ್ಳುತ್ತಿರುವ ಹಾವೇರಿಯಲ್ಲಿ ಬ್ರಿಟಿಷರ ವಿರುದ್ಧ ಹಲವಾರು ಹೋರಾಟಗಳನ್ನು ನಡೆಸಿ, ಮೈಲಾರ ಮಹಾದೇವ, ವೀರಯ್ಯ ಹಿರೇಮಠ ಹಾಗೂ ತಿರಕಪ್ಪ ಮಡಿವಾಳ ಅವರು ಹುತಾತ್ಮರಾದ ತಾಲೂಕಿನ ಹೊಸರಿತ್ತಿಯ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣ ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಾಕ್ಷಿಯಾಗಿದೆ.

ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಜಿಲ್ಲೆಯ ಹೆಮ್ಮೆಯ ಸುಪುತ್ರ ಮೈಲಾರ ಮಹಾದೇವ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮುನ್ನುಡಿ ಬರೆದು ಹೋರಾಟದ ಕಿಚ್ಚು ಹಚ್ಚಿದರು. ಬ್ರಿಟಿಷರಿಗೆ ಸಂಬಂಧಿಸಿದ ಟಪಾಲುಗಳನ್ನು (ಪತ್ರ)ಅಪಹರಿಸುವುದು, ರೈಲ್ವೆ ನಿಲ್ದಾಣಗಳಿಗೆ ಬೆಂಕಿ ಹಚ್ಚುವುದು, ಪೊಲೀಸರ ಬಂದೂಕುಗಳ ಅಪಹರಣ, ಪೊಲೀಸ್‌ ಠಾಣೆಗಳಿಗೆ ಬೆಂಕಿ ಹಚ್ಚುವುದು, ನ್ಯಾಯಾಲದ ಮೇಲೆ ದಾಳಿ ಹೀಗೆ ಸುಮಾರು 74ಕ್ಕೂ ಹೆಚ್ಚು ಯಶಸ್ವಿ ದಾಳಿಗಳನ್ನು ನಡೆಸಿ ಮೈಲಾರ ಮಹಾದೇವ ಬ್ರಿಟಿಷರ ನಿದ್ದೆಗೆಡಿಸಿದ್ದರು.

ಕಂದಾಯ ಕಚೇರಿ ಮೇಲೆ ದಾಳಿ: ಹೊಸರಿತ್ತಿಯ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ರೈತರಿಂದ ಸಂಗ್ರಹಿಸಿಟ್ಟಿದ್ದ ಕಂದಾಯ ಹಣವನ್ನು ಲೂಟಿ ಮಾಡಿ, ರೈತರಿಗೆ ಹಿಂದಿರುಗಿಸುವ ಹೋರಾಟಕ್ಕೆ ಮೈಲಾರ ಮಹಾದೇವ ಮುಂದಾದರು.

1943ರ ಮಾ.31ರಂದು ಇದಕ್ಕಾಗಿ ತಮ್ಮ ತಂಡದೊಂದಿಗೆ ದಾಳಿ ಬಗ್ಗೆ ಚರ್ಚಿಸಿ ಬೆಳಗಿನ ವೇಳೆ ಯಾರಿಗೂ ಅನುಮಾನ ಬರದಂತೆ ಬ್ರಿಟಿಷರ ಮೇಲೆ ಮೂರು ಕಡೆಗಳಿಂದ ದಾಳಿ ನಡೆಸಲು ತೀರ್ಮಾನಿಸಿದ್ದರು. ಚೆನ್ನೂರ ಕಡೆಯಿಂದ ಕೊಲ್ಲಾರಿ ಚಕ್ಕಡಿಯಲ್ಲಿ ಮದುವೆಗೆ ಬರುವಂತೆ ಕೆಲವರು ಬರುವುದು, ಹಲವರು ನದಿ ಕಡೆಯಿಂದ ಮೈತೊಳೆದುಕೊಳ್ಳಲು ಹೋದವರಂತೆ ತಿರುಗಿ ಬರುವುದು ಹಾಗೂ ಇನ್ನು ಕೆಲವರು ನದಿಗೆ ಹೊಗುವವರಂತೆ ಊರೊಳಗಿನಿಂದ ಬಂದು ಕಂದಾಯ ಕಚೇರಿ ಮೇಲೆ ದಾಳಿ ನಡೆಸಲು ನಿರ್ಧರಿಸಲಾಗಿತ್ತು.ಆದರೆ, ಈ ದಾಳಿ ಮಹಾದೇವ ಅವರ ಕೊನೆಯುಸಿರು ನಿಲ್ಲಿಸುತ್ತದೆ ಎಂದು ಯಾರೂ ಊಹೆ ಮಾಡಿರಲಿಲ್ಲ.

ಹೆಬ್ಬುಲಿಯಂತೆ ನುಗ್ಗಿದ ಮಹಾದೇವ: 1943ರ ಏ.1ರಂದು ಬೆಳಗಿನ ಜಾವ ಮೊದಲೇ ಯೋಜಿಸಿದಂತೆಯೇ ಎಲ್ಲರೂ ಬಂದು ಅಲ್ಲಲ್ಲಿ ಮರೆಯಾಗಿ ಕುಳಿತಿದ್ದರು. ಕಂದಾಯ ಕಚೇರಿ ಕಾವಲು ಪೊಲೀಸರ ಮೇಲೆರಗಲು ಮಹಾದೇವ ಅವರು ತಮ್ಮ ಸಹಚರರಿಗೆ ಸೂಚನೆ ನೀಡಿದರು. ಆಗ ಸಹಚರರು ಅಸಹಾಯಕರಾದ ಕಾರಣ ಮಹಾದೇವ ಅವರು ತಾವೇ ಸ್ವತಃ ಹೆಬ್ಬುಲಿಯಂತೆ ನುಗ್ಗಿದರು. ಆಗ ಉಳಿದವರೂ ಬಂದು ಸೇರಿದರು. ಅಷ್ಟರಲ್ಲಿ ಮಹಾದೇವ ಕಂದಾಯ ಸಂಗ್ರಹಿಸಿಟ್ಟಿದ್ದ ಗುಡಿಯ(ದೇವಸ್ಥಾನ)ಕಟ್ಟೆ ಏರಿದ್ದರು.

ಆಗ ಪೊಲೀಸನೊಬ್ಬ ತನ್ನ ಕೈಯಲ್ಲಿದ್ದ ಬಂದೂಕನ್ನು ಜೋರಾಗಿ ಮಹಾದೇವ ಅವರತ್ತ ಬೀಸಿದ್ದರಿಂದ ಬಂದೂಕು ಅವರ ಹೊಟ್ಟೆ ಸೇರಿತು. ಮತ್ತೂಬ್ಬ ಪೊಲೀಸ್‌ ಮಹಾದೇವರ ಎದೆಗೆ ಗುರಿಯಿಟ್ಟು ಗುಂಡು ಹಾರಿಸಿದ. ಒಂದರ ಮೇಲೊಂದರಂತೆ ನಾಲ್ಕು ಗುಂಡುಗಳು ಅವರ ಎದೆ ಸೇರಿದವು. ಆಗ ಮಹಾದೇವ ಅವರು “ಹೇ ಬಾಪು’ ಎನ್ನುತ್ತ ನೆಲಕ್ಕುರುಳಿದರು. ಮತ್ತಿಬ್ಬರು ಪೊಲೀಸರು ವೀರಯ್ಯ ಹಿರೇಮಠ ಹಾಗೂ ತಿರಕಪ್ಪ ಮಡಿವಾಳ ಮೇಲೆ ಗುಂಡಿನ ಮಳೆಗರೆದರು. ಮಹಾದೇವ ಹಾಗೂ ತಿರಕಪ್ಪ ಸ್ಥಳದಲ್ಲಿಯೇ ವೀರ ಮರಣ ಹೊಂದಿದರು. ತೀವ್ರ ಗಾಯಗೊಂಡಿದ್ದ ವೀರಯ್ಯ ಹಾವೇರಿಗೆ ಕರೆತಂದ ನಂತರ ಪ್ರಾಣ ಬಿಟ್ಟರು. ಮೈಲಾರ ಮಹಾದೇವ, ವೀರಯ್ಯ ಹಿರೇಮಠ ಹಾಗೂ ತಿರಕಪ್ಪ ಮಡಿವಾಳ ಅವರು ಕೊನೆಯುಸಿರೆಳೆದ ಸ್ಮರಣಾರ್ಥ ಹೊಸರಿತ್ತಿಯ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಹುತಾತ್ಮರ ವೀರಗಲ್ಲು ನಿಲ್ಲಿಸಲಾಗಿದೆ.

ವೀರೇಶ ಮಡ್ಲೂರ

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.