ಮಹಾಘಟಬಂಧನ್‌ ಅನಾಥ ಮಗು


Team Udayavani, Apr 20, 2019, 4:39 PM IST

hav

ಬ್ಯಾಡಗಿ: ತಂದೆ ಇಲ್ಲದ ಅನಾಥ ಮಗುವಿನಂತಾಗಿರುವ ಮಹಾಘಟಬಂಧನ್‌ಗೆ ನಾಯಕ ಯಾರು ಎಂಬುದು ಇನ್ನೂ ಅಂತಿಮವಾಗಿಲ್ಲ. ಸಚಿವ ಸ್ಥಾನ ಆಕಾಂಕ್ಷಿಗಳಿಗಿಂತ ಪ್ರಧಾನಿ ಹುದ್ದೆ ರೇಸ್‌ನಲ್ಲಿ 20ಕ್ಕೂ ಹೆಚ್ಚು ನಾಯಕರಿದ್ದಾರೆ.ಹೀಗಿರುವಾಗ ಅತಂತ್ರ ಸರ್ಕಾರದಿಂದ ಜನರ ಆಶೋತ್ತರಗಳು ಈಡೇರಲು ಸಾಧ್ಯವೇ? ದೇಶದ ಬಡ ಜನರಿಗೆ ಸುಭದ್ರ ಸರ್ಕಾರ ನೀಡಲು ಹೇಗೆ ಸಾಧ್ಯ ಎಂದು ಬಿಜೆಪಿ ಸ್ಟಾರ್‌ ಪ್ರಚಾರಕಿ ನಟಿ ಶೃತಿ ಪ್ರಶ್ನಿಸಿದರು.

ಮೋಟೆಬೆನ್ನೂರಿನಲ್ಲಿ ಹಾವೇರಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಪರ ಪ್ರಚಾರ ಭಾಷಣ ನಡೆಸಿದ ಅವರು, ಬಿಜೆಪಿಯವರು ಮೋದಿ ಹೆಸರಿನಲ್ಲಿ ಮತಯಾಚಿಸುತ್ತಿದ್ದಾರೆ ಎಂದು ಹೇಳುವ ಕಾಂಗ್ರೆಸ್‌ ನಾಯಕರು ಸಹ ಮಾಜಿ ಪ್ರಧಾನಿ ಮನಮೋಹನಸಿಂಗ್‌ ಹೆಸರಿನಲ್ಲಿ ಮತ ಕೇಳಲಿ. ಬಲಿಷ್ಠ ಹಾಗೂ ಸುಭದ್ರ ರಾಷ್ಟ್ರ ನಿರ್ಮಾಣಕ್ಕಾಗಿ ನರೇಂದ್ರ ಮೋದಿ ಅವರ ಹೆಸರು ಹೇಳಿಯೇ ನಾವು ಮತ ಕೇಳುತ್ತೇವೆ ಎಂದು ತಿರುಗೇಟು ನೀಡಿದರು.

ಗರೀಬಿ ಹಠಾವೋ ಎಂಬ ಘೋಷವಾಕ್ಯದೊಂದಿಗೆ ದಿ| ಇಂದಿರಾ ಗಾಂಧಿ ಫೋಟೊ ತೋರಿಸಿ ವೋಟ್ ಹಾಕಿಸಿಕೊಂಡ ಕಾಂಗ್ರೆಸ್‌ 60 ವರ್ಷಗಳ ಕಾಲ ಆಡಳಿತ ನಡೆಸಿದರೂ ದೇಶದ ಜನರ ಬಡತನ ಮಾತ್ರ ನಿವಾರಣೆ ಮಾಡಲಿಲ್ಲ. ಪುಕ್ಕಟೆ ಯೋಜನೆಗಳಿಗೆ ಕೈ ಒಡ್ಡುವುದನ್ನು ಮತದಾರರು ಮೊದಲು ಬಿಡಬೇಕು. ದೇಶ ಸಂದಿಗ್ಧ ಸ್ಥಿತಿ ತಲುಪಲು ಕಾರಣವಾದವರನ್ನು ಅಧಿಕಾರದಿಂದ ದೂರವಿಡುವಂತಾಗಬೇಕು. ವಿರೋಧಿ ರಾಷ್ಟ್ರಗಳು ಯಾವ ಸಂದರ್ಭದಲ್ಲಾದರೂ ಭಾರತದ ಮೇಲೆ ಯುದ್ಧಕ್ಕೆ ಬರಬಹುದು. ಅದನ್ನು ಎದುರಿಸಿ ತಕ್ಕ ಉತ್ತರ ಕೊಡುವಂಥ ಸಮರ್ಥ ನಾಯಕತ್ವ ಇರುವುದು ಪ್ರಧಾನಿ ಮೋದಿ ಅವರಿಗೆ ಮಾತ್ರ. ಹೀಗಾಗಿ ಮತ್ತೂಮ್ಮೆ ಮೋದಿ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ಕಾಂಗ್ರೆಸ್‌ ಯುವರಾಜನ ಮಾತು ಕೇಳಿದರಂತೂ, ಇದಕ್ಕಿಂತ ದೊಡ್ಡ ಅಪಹಾಸ್ಯ ಬೇರೊಂದಿಲ್ಲ. ಆಲೂಗಡ್ಡೆ ಬಿತ್ತನೆ ಮಾಡಿ ಬಂಗಾರ ಬೆಳೆಯುವುದಾಗಿ ಹೇಳುವ ರಾಹುಲ್ ಗಾಂಧಿ ಅವರಿಗೆ ಸಾಮಾನ್ಯ ಜನರ ಸಂಕಷ್ಟ ಅರ್ಥವಾಗಲಿದೆಯೇ? ಕೇವಲ ಗಾಂಧಿ ಪರಿವಾರ ಎಂದಾಕ್ಷಣ ಅವರನ್ನು ಭವಿಷ್ಯದ ಪ್ರಧಾನಿ ಎಂಬುದಾಗಿ ಬಿಂಬಿಸಲಾಗುತ್ತಿದೆ. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ದೇಶದ ಅತ್ಯುನ್ನತ ಹುದ್ದೆಗೆ ಏರಿಸಿದಂಥ ಬಿಜೆಪಿಗೆ ಕಾರ್ಯಕರ್ತರೇ ಶಕ್ತಿ. ಈ ಹಿಂದೆ ಚಾಯ್‌ವಾಲ್ನನ್ನು ಪ್ರಧಾನಿಯನ್ನಾಗಿ ಮಾಡಿದ ತಾವು ಇದೀಗ ಚೌಕಿದಾರನನ್ನು ಪ್ರಧಾನಿಯನ್ನಾಗಿ ಮಾಡಲು ಶಿವಕುಮಾರ ಉದಾಸಿ ಅವರನ್ನು ಬೆಂಬಲಿಸುವಂತೆ ಆಗ್ರಹಿಸಿದರು.

ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಶಾಸಕ ನೆಹರು ಓಲೇಕಾರ, ಮಾಜಿ ಶಾಸಕ ಸುರೇಶಗೌಡ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಸಜ್ಜನ, ಭೋಜರಾಜ ಕರೂದಿ, ಶಂಕ್ರಣ್ಣ ಮಾತನವರ, ವೀರೇಂದ್ರ ಶೆಟ್ಟರ, ಸಿ.ಆರ್‌.ಬಳ್ಳಾರಿ, ಅನುಸೂಯಾ ಕುಳೇನೂರ, ಸಿದ್ಧರಾಜ ಕಲಕೋಟಿ, ಶೋಭಾ ನಿಸ್ಸೀಮಗೌಡ್ರ, ವಿ.ವಿ. ಹಿರೇಮಠ, ನಾಗರಾಜ ಬಳ್ಳಾರಿ, ವನಿತ ಗುತ್ತಲ, ಮುರಿಗೆಪ್ಪ ಶೆಟ್ಟರ, ವೈ.ಎನ್‌. ಕರೇಗೌಡ್ರ, ವಿಜಯ ಬಳ್ಳಾರಿ, ಚಂದ್ರಶೇಖರ ಆನ್ವೇರಿ, ಲಲಿತಾ ಬ್ಯಾಟಪ್ಪನವರ, ಸುರೇಶ ಅಸಾದಿ, ನಾಗರಾಜ ಹಾವನೂರ, ವಿದ್ಯಾಶೆಟ್ಟಿ ಸೇರಿದಂತೆ ಇನ್ನಿತರರು ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.