ಕಾಮಗಾರಿ ಗುಣಮಟ್ಟ ಕಾಪಾಡಿ


Team Udayavani, Jan 29, 2020, 3:47 PM IST

hv-tdy-2

ಹಾವೇರಿ: ನೆರೆಹಾವಳಿಯಿಂದ ಹಾನಿಗೊಳಗಾದ ಶಾಲಾ ಕೊಠಡಿಗಳನ್ನು ತ್ವರಿತವಾಗಿ ದುರಸ್ತಿ ಕಾರ್ಯ ಮುಗಿಸಬೇಕು ಎಂದು ಎಂದು ಶಾಸಕ ನೆಹರು ಓಲೇಕಾರ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ತ್ತೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮೀಣ ರಸ್ತೆಗಳ ಡಾಂಬರೀಕರಣ ಹಾಕಿದ ಕೆಲ ಸಮಯದಲ್ಲಿ ಕಿತ್ತುಹೋಗುತ್ತಿರುವುದು ತಾಲೂಕಿನ ವಿವಿಧೆಡೆ ಕಂಡುಬಂದಿದೆ. ಲೋಕೋಪಯೋಗಿ ಹಾಗೂ ಜಿಲ್ಲಾ ಪಂಚಾಯತ್‌ ಇಂಜಿನಿಯರ್‌ಗಳು ಕಾಮಗಾರಿಗಳ ಸ್ಥಳದಲ್ಲಿ ಇದ್ದು ಮೇಲುಸ್ತುವಾರಿ ಮಾಡಬೇಕು ಹಾಗೂ ಮಂದಗತಿಯಲ್ಲಿ ನಡೆಯುವ ಕಾಮಗಾರಿಗಳನ್ನು ಚುರುಕುಗೊಳಿಸಬೇಕು. ಅಪೂರ್ಣ ಕಾಮಗಾರಿಗಳು ತ್ವರಿತವಾಗಿ ಪೂರ್ಣಗೊಳ್ಳಬೇಕು ಎಂದು ಇಂಜಿನಿಯರ್‌ಗಳಿಗೆ ಸೂಚಿಸಿದರು.

ಬೆಳೆವಿಮೆ ಸೇರಿದಂತೆ ರೈತರಿಗಾಗಿ ರೂಪಿಸಲಾದ ಸರ್ಕಾರದ ವಿವಿಧ ಯೋಜನೆಗಳನ್ನು ಸಕಾಲದಲ್ಲಿ ರೈತರಿಗೆ ತಲುಪಿಸಬೇಕು. ರೈತರಿಗೆ ಯೋಜನೆಗಳು ಸರಿಯಾಗಿ ತಲುಪಿಸದರೆ ರೈತರ ಪ್ರತಿಭಟನೆಗಳು ನಿಲ್ಲುತ್ತವೆ. ಕೃಷಿ ಅಧಿಕಾರಿಗಳ ಅಸಮರ್ಪಕ ಕಾರ್ಯನಿವಹಣೆಯಿಂದ ಯೋಜನೆಗಳು ಸರಿಯಾಗಿ ಜನರಿಗೆ ತಲುಪುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಬೆಳವಿಗಿ, ಯಲಗಚ್ಚ, ಕಡಕೋಳ ಗ್ರಾಮಗಳಲ್ಲಿ ನಿರ್ಮಾಣವಾಗುವ ಪಶು ಆರೋಗ್ಯ ಕೇಂದ್ರಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಹೊಸರಿತ್ತಿಯಲ್ಲಿರುವ ನೂತನ ಆಸ್ಪತ್ರೆ, ಆವರಣದ ಹಳೇ ಕಟ್ಟಡವನ್ನು ತೆರವುಗೊಳಿಸಿ, ಗೇಟ್‌ ನಿರ್ಮಿಸಿದರೆ ಆಸ್ಪತ್ರೆ ಸುವ್ಯವಸ್ಥಿತವಾಗಿ ಕಾಣಿಸುತ್ತದೆ ಎಂದು ಆರೋಗ್ಯ ಇಲಾಖಾಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಸದಸ್ಯ ಸಿದ್ಧರಾಜು ಕಲಕೋಟಿ ಸೂಚಿಸಿದರು.

ಹಾವೇರಿ ಜಿಲ್ಲಾ ಕೆಎಸ್‌ಆರ್‌ಟಿಸಿ ಘಟಕದ ಕಾರ್ಯವೈಖರಿ ಬಗೆಗೆ ಸಾಕಷ್ಟು ದೂರುಗಳಿವೆ. ಹಲವಾರು ಗ್ರಾಮಗಳಿಗೆ ಬಸ್ಸಿನ ವ್ಯವಸ್ಥೆ ಸರಿಯಾಗಿಲ್ಲ. ಶಾಲಾ-ಕಾಲೇಜು ಮಕ್ಕಳು ಹಾಗೂ ಜನಸಾಮಾನ್ಯರಿಗೆ ತೊಂದರೆಯುಂಟಾಗುತ್ತದೆ. ಮೇಲ್ಮುರಿ, ಕಿತ್ತೂರು ಸೇರಿದಂತೆ ಮುಂಜಾನೆ ಬಸ್‌ ವ್ಯವಸ್ಥೆ ಕಲ್ಪಿಸಬೇಕು. ಕೆಲ ಗ್ರಾಮಗಳಲ್ಲಿ ಗ್ರಾಮೀಣ ಭಾಗದ ಬಸ್ಸುಗಳನ್ನು ನಿಲ್ಲಿಸದೇ ಇರುವುದರಿಂದ ವಿದ್ಯಾರ್ಥಿಗಳು, ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ತ್ವರಿತವಾಗಿ ಸಮರ್ಪಕ ಬಸ್‌ ಸೌಕರ್ಯ ಕಲ್ಪಿಸಿ ಎಂದು ಬ್ಯಾಡಗಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಸೂಚಿಸಿದರು.

ಸಭೆಯಲ್ಲಿ ಕೆಆರ್‌ಡಿಎಲ್‌, ಸಣ್ಣ ನೀರಾವರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಕ್ಷರ ದಾಸೋಹ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಮಾಹಿತಿ ಪಡೆದರು.ಸಭೆಯಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷ ಕಮಲವ್ವ ಪಾಟೀಲ, ತಾಪಂ ಇಒ ಬಸವರಾಜ, ಜಿಪಂ ಸದಸ್ಯರಾದ ವಿರುಪಾಕ್ಷಪ್ಪ ಕಡ್ಲಿ ಸೇರಿದಂತೆ ವಿವಿಧ ಇಲಾಖಾ ಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.