ಕುಡಿವ ನೀರಿನ ಯೋಜನೆಗೆ ಆದ್ಯತೆ ನೀಡಿ


Team Udayavani, Sep 9, 2019, 11:06 AM IST

hv-tdy-1

ಹಾವೇರಿ: ಜಿಲ್ಲಾ ನೋಡಲ್ ಅಧಿಕಾರಿ ಡಾ| ವಿಶಾಲ್ ನೆರೆ ನಿರ್ವಹಣೆ ಕುರಿತು ಅಧಿಕಾರಿಗಳ ಸಭೆ ನಡೆಸಿದರು.

ಹಾವೇರಿ: ನೆರೆ ಪರಿಹಾರ ಕಾರ್ಯಗಳ ಜತೆಗೆ ಮಳೆ ನೀರು ನಿಲ್ಲದೆ ನೀರು ಇಂಗದ ಪ್ರದೇಶಗಳಲ್ಲಿ ಬರುವ ಡಿಸೆಂಬರ್‌ ವೇಳೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು. ಈಗಿನಿಂದಲೇ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನಕ್ಕೂ ಆದ್ಯತೆ ನೀಡಿ, ಎದುರಾಗುವ ಬರವನ್ನು ಸಮರ್ಥವಾಗಿ ಎದುರಿಸಲು ಸಿದ್ಧವಾಗಿ ಎಂದು ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತರು ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಡಾ| ವಿಶಾಲ್ ಸೂಚಿಸಿದರು.

ನೆರೆ ಪರಿಹಾರ ಹಾಗೂ ಬರ ನಿರ್ವಹಣೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶೀಲನಾ ಸಭೆ ನಡೆಸಿ ಈಗಾಗಲೇ ಕುಡಿಯುವ ನೀರಿನ ಎಲ್ಲ ಯೋಜನೆಗಳಿಗೂ ಮಂಜೂರಾತಿ ನೀಡಲಾಗಿದೆ. ಅನುದಾನ ಬಿಡುಗಡೆಯಾಗಿದೆ. ಅಕ್ಟೋಬರ್‌-ನವೆಂಬರ್‌ ತಿಂಗಳೊಳಗೆ ಕುಡಿಯುವ ನೀರಿನ ಯೋಜನೆಗಳನ್ನು ಪೂರ್ಣಗೊಳಿಸಿ ಬೇಸಿಗೆಯಲ್ಲಿ ನೀರಿನ ಸಮಸ್ಯೆ ತಲೆದೊರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಹೇಳಿದರು.

ಒತ್ತಡಕ್ಕೆ ಒಳಗಾಗಿ ಸಮಸ್ಯೆ ತಂದುಕೊಳ್ಳಬೇಡಿ: ಅತಿವೃಷ್ಟಿ ಮತ್ತು ನೆರೆಯಿಂದ ಕುಸಿತಕ್ಕೊಳಗಾದ ಮನೆಗಳನ್ನು ಎಚ್ಚರಿಕೆಯಿಂದ ಸರ್ವೇಮಾಡಿ, ಪ್ರತಿ ಮನೆಯ ನಾಲ್ಕು ಫೋಟೋಗಳನ್ನು ಕಡ್ಡಾಯವಾಗಿ ಸಂಗ್ರಹಿಸಿ ಯಾವುದೇ ಒತ್ತಡಕ್ಕೆ ಒಳಗಾಗಿ ಸಮಸ್ಯೆ ತಂದುಕೊಳ್ಳಬೇಡಿ. ನಿಖರವಾದ ಸಮೀಕ್ಷೆ ಕೈಗೊಂಡು ಸರ್ಕಾರ ವಿಪತ್ತು ನಿರ್ವಹಣಾ ಮಾರ್ಗಸೂಚಿಯಂತೆ ಪರಿಹಾರ ನೀಡಿ. ರಾಜೀವ ಗಾಂಧಿ ವಸತಿ ನಿಗಮದ ವೆಬ್‌ಸೈಟ್‌ಗೆ ವಿಳಂಬವಿಲ್ಲದೆ ಮನೆಹಾನಿ ಫಲಾನುಭಾವಿವಾರು ವಿವರವನ್ನು ದಾಖಲಿಸಿ ಎಂದು ಹೇಳಿದರು.

ಊರಿನ ಮುಖ್ಯ ರಸ್ತೆ ಬಳಿ ಸ್ಥಳಾಂತರ ಮಾಡಿ: ನದಿ ದಡದಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಬಡವರ ಮನೆಗಳನ್ನು ಆದ್ಯತೆ ಮೇರೆಗೆ ಸ್ಥಳಾಂತರ, ಸ್ಥಳಾಂತರವಾಗುವ ನಿವೇಶನ ಊರಿನ ಮುಖ್ಯ ರಸ್ತೆ ಬಳಿಯೇ ಇರಲಿ. ಇದರಿಂದ ಮೂಲ ಸೌಕರ್ಯಗಳನ್ನು ಕಲ್ಪಿಸಲು ಅನುಕೂಲವಾಗಲಿದೆ. ಜಮೀನು ಖರೀದಿಗೆ ದುಬಾರಿಯಾದರು ತೊಂದರೆ ಇಲ್ಲ ಎಂದು ಹೇಳಿದರು.

ಅನರ್ಹರು ಸೌಲಭ್ಯ ಪಡೆಯುವಂತಾಗದಿರಲಿ: ಸಮೀಕ್ಷೆ ಸಂದರ್ಭದಲ್ಲಿ ಮಾಹಿತಿ ನಿಖರವಾಗಿರಲಿ. ಅನರ್ಹರು ಸೌಲಭ್ಯ ಪಡೆಯುವಂತಾಗಬಾರದು. ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆಯಲು ಮುಂದಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಫೀಲ್ಡ್ಲೆವೆಲ್ ಆಫೀಸರ್‌ಗಳು ನೀಡುವ ಮಾಹಿತಿಯನ್ನು ಶೇ.100ರಷ್ಟು ನಂಬದೆ ಉಪವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು ಮರು ಪರಿಶೀಲನೆ ನಡೆಸಬೇಕು. ಅರ್ಹರಿಗೆ ಅಗತ್ಯವಾದ ಸೌಲಭ್ಯ ತ್ವರಿತವಾಗಿ ದೊರಕಬೇಕು ಎಂದು ಹೇಳಿದರು.

ಬೆಳೆಹಾನಿ ಮತ್ತು ಭೂಮಿಹಾನಿ ಸಮೀಕ್ಷೆಯನ್ನು ನಿಖರವಾಗಿ ಕೈಗೊಳ್ಳಿ, ಗ್ರಾಮ ಲೆಕ್ಕಾಧಿಕಾರಿ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಜಂಟಿ ಸಮೀಕ್ಷೆ ನಡೆಸಬೇಕು ಎಂದು ಸೂಚಿಸಿದರು.

ವಿದ್ಯುತ್‌, ರಸ್ತೆ, ಸೇತುವೆ ಮೂಲ ಸೌಕರ್ಯಗಳ ಪುನರ್‌ ಸ್ಥಾಪನೆಗೆ ಆದ್ಯತೆ ನೀಡಿ. ಕುಡಿಯುವ ನೀರಿನ ಮರು ಸ್ಥಾಪನೆ ನಂತರ ಕಡ್ಡಾಯವಾಗಿ ಕುಡಿಯಲು ಯೋಗ್ಯವೇ ಎಂದು ಪ್ರಯೋಗಾಲಯದಲ್ಲಿ ಪರೀಕ್ಷೆಮಾಡಿ ನಂತರ ಜನರಿಗೆ ಪೂರೈಕೆ ಮಾಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ, ಅಪರ ಜಿಲ್ಲಾಧಿಕಾರಿ ಎನ್‌.ತಿಪ್ಪೇಸ್ವಾಮಿ, ಜಿಪಂ ಉಪಕಾರ್ಯದರ್ಶಿ ಜಿ.ಗೋವಿಂದಸ್ವಾಮಿ, ಜಿಲ್ಲಾ ಪಂಚಾಯತ್‌ ಸಹಾಯಕ ಕಾರ್ಯದರ್ಶಿ ಜಾಫರ್‌ ಸುತಾರ, ಕೃಷಿ ಜಂಟಿ ನಿರ್ದೇಶಕ ಮಂಜುನಾಥ್‌, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ ಹಾಗೂ ಇತರ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.