ಸಾಲಮನ್ನಾ ಫಲಾನುಭವಿ ಖಾತೆಗೆ ಹಣ ಜಮೆ ಮಾಡಿ
Team Udayavani, Jul 21, 2019, 12:34 PM IST
ಹಾವೇರಿ: ರೈತ ಸಂಘದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹಾವೇರಿ: ರಾಜ್ಯ ಸರ್ಕಾರದ ಸಾಲಮನ್ನಾ ಘೋಷಣೆಯಿಂದ ಜಿಲ್ಲೆಯ ಬಹುತೇಕ ರೈತರಿಗೆ ಏನೂ ಪ್ರಯೋಜನವಾಗಿಲ್ಲ. ಸರ್ಕಾರ ಕೂಡಲೇ ಸಾಲಮನ್ನಾ ಫಲಾನುಭವಿ ರೈತರ ಖಾತೆಗೆ ಹಣ ಜಮೆ ಮಾಡಬೇಕು. ಇಲ್ಲದಿದ್ದರೆ ಆಗಸ್ಟ್ 19ರಂದು ಜಿಲ್ಲಾಡಳಿತಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಎಚ್ಚರಿಕೆ ನೀಡಿದರು.
ನಗರದ ಪ್ರವಾಸಿಗೃಹದಲ್ಲಿ ಶನಿವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ದುರಾಡಳಿತದಿಂದ ಜನತೆ ಭ್ರಮ ನಿರಸನಗೊಂಡಿದ್ದಾರೆ. ಹಿಂದೆಂದೂ ಕಂಡರಿಯದ ಭೀಕರ ಬರಗಾಲದಿಂದ ತತ್ತರಿಸಿ ರೈತರು ಹತಾಶರಾಗಿದ್ದಾರೆ. ರೈತರಿಗೆ ವರವಾಗಬೇಕಿದ್ದ ರಾಜ್ಯ ಸರ್ಕಾರದ ಸಾಲಮನ್ನಾ ಯೋಜನೆ ರೈತರಿಗೆ ಶಾಪವಾಗಿ ಪರಿಣಮಿಸಿದೆ ಎಂದರು.
ಸಾಲಮನ್ನಾದ ಗೊಂದಲದಿಂದಾಗಿ ರೈತರನ್ನು ಪ್ರಪಾತಕ್ಕೆ ನೂಕಿದಂತಾಗಿದೆ. ಸಾಲಮನ್ನಾದ ಮಾಹಿತಿ ಯಾವ ಅಧಿಕಾರಿಗಳಿಂದಲೂ ಸಿಗುತ್ತಿಲ್ಲ, ಬ್ಯಾಂಕ್ ವ್ಯವಸ್ಥಾಪಕರು, ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಬಳಿಯೂ ಸಿಗುತ್ತಿಲ್ಲ, ನಮ್ಮ ಸಾಲಮನ್ನಾ ಆಗುತ್ತದೆಯೋ ಇಲ್ಲವೋ ಎಂಬುದು ರೈತರಿಗೆ ಗೊತ್ತಾಗುತ್ತಿಲ್ಲ, ಅವರಿಗೆ ಹೊಸ ಸಾಲವೂ ಸಿಗುತ್ತಿಲ್ಲ. ಹೀಗಾಗಿ ರೈತರು ಮಾಹಿತಿಗಾಗಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಕೂಡಲೇ ರೈತರಿಗೆ ಸರಿಯಾದ ಮಾಹಿತಿ ನೀಡಿ ಗೊಂದಲ ಬಗೆಹರಿಸಬೇಕು ಎಂದು ಅವರು ಆಗ್ರಹಿಸಿದರು.
ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಒಂದು ತಿಂಗಳು ತಡವಾಗಿ ಬಿತ್ತನೆಯಾಗಿದೆ. ಮುಂದೆ ಸರಿಯಾಗಿ ಬೆಳೆ ಬರುತ್ತದೆಯೋ ಇಲ್ಲವೋ ಎಂಬ ಚಿಂತೆ ರೈತರನ್ನು ಕಾಡುತ್ತಿದೆ. ಇನ್ನೂ ಹಳ್ಳಿಗಳಲ್ಲಿ ಕುಡಿಯಲು ಸಮರ್ಪಕ ನೀರು, ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ, ಕೆರೆಗಳಲ್ಲಿ ನೀರು ತುಂಬಿಲ್ಲ. ಅಧಿಕಾರಿಗಳು ಸಹ ಜನರಿಗೆ ಸ್ಪಂದಿಸುತ್ತಿಲ್ಲ, ಜಿಲ್ಲಾಡಳಿತ ಸಂಪೂರ್ಣ ನಿಷ್ಕ್ರೀಯವಾಗಿದೆ.
ಉಸ್ತುವಾರಿ ಸಚಿವರು ಜಿಲ್ಲೆಯನ್ನು ಮರೆತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಾಜಕೀಯ ಪಕ್ಷಗಳು ರೇಸಾರ್ಟ್ ರಾಜಕಾರಣ ಮಾಡುತ್ತಿದ್ದು, ಜನರ ಗೋಳು ಕೇಳುವವರಿಲ್ಲದಾಗಿದೆ ಎಂದು ಕೆಂಚಳ್ಳೇರ ಆಕ್ರೋಶ ವ್ಯಕ್ತಪಡಿಸಿದರು.
ಸಂಘಟನೆಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ಜಿಲ್ಲೆಗೆ 158ಕೋಟಿ ರೂ., ಬೆಳೆವಿಮೆ ಮಂಜೂರಾಗಿದೆ ಎಂದು ಕೃಷಿ ಅಧಿಕಾರಿಗಳು ಹೇಳುತ್ತಾರೆ. ಯಾವ ರೈತರಿಗೆ, ಯಾವ ಬೆಳೆಗೆ ಎಷ್ಟು ವಿಮೆ ಬಂದಿದೆ ಎಂಬ ಮಾಹಿತಿ ಸಿಗುತ್ತಿಲ್ಲ, ಕೂಡಲೇ ಯಾವ ಬೆಳೆಗೆ ಎಷ್ಟು ಹಣ ಬಂದಿದೆ ಎಂಬ ಮಾಹಿತಿ ಕೊಟ್ಟು ತಕ್ಷಣ ರೈತರ ಖಾತೆಗೆ ವಿಮಾ ಹಣ ಜಮೆ ಮಾಡಬೇಕು. ಸಾಲಮನ್ನಾ ಯೋಜನೆಯನ್ನು ಒಮ್ಮೆ ಕೈಗೆತ್ತಿಕೊಂಡಿದ್ದು, ಹೆಚ್ಚು ದಿನದೂಡದೇ ಅದನ್ನು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.
ಸಂಘಟನೆಯ ಪ್ರಮುಖರಾದ ಪ್ರಭುಗೌಡ ಪ್ಯಾಟಿ, ಸುರೇಶ ಚಲವಾದಿ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ