ಪಂಚಾಕ್ಷರಿ ಗವಾಯಿಗಳ ಹೆಸರಲ್ಲಿ ಮೌಲಿಕ ಪ್ರಶಸ್ತಿ ಘೋಷಿಸಲು ಆಗ್ರಹ

131 ವರ್ಷ ಕಳೆದರೂ ಇದುವರೆಗೂ ಶಿವಯೊಗಿಗಳ ಹೆಸರಿನಲ್ಲಿ ಯಾವುದೇ ಪ್ರಶಸ್ತಿ ಘೋಷಣೆಯಾಗಿಲ್ಲ

Team Udayavani, Feb 4, 2022, 5:36 PM IST

ಪಂಚಾಕ್ಷರಿ ಗವಾಯಿಗಳ ಹೆಸರಲ್ಲಿ ಮೌಲಿಕ ಪ್ರಶಸ್ತಿ ಘೋಷಿಸಲು ಆಗ್ರಹ

ಹಾನಗಲ್ಲ: ಅಂಧ, ಅನಾಥರಿಗೆ ಬೆಳಕು ನೀಡಿದ ಸಂಗೀತದ ದಿವ್ಯ ಚೈತನ್ಯ ಶಕ್ತಿ, ಕಾಡಶೆಟ್ಟಿಹಳ್ಳಿಯಲ್ಲಿ ಜನಿಸಿ ಗದಗನ್ನು ಕಾರ್ಯ ಕ್ಷೇತ್ರವಾಗಿ ಮಾಡಿಕೊಂಡು, ಜಗದ್ವಿಖ್ಯಾತರಾದ ಲಿಂ|ಡಾ|ಪಂ|ಪಂಚಾಕ್ಷರ ಶಿವಯೋಗಿಗಳವರ ಹೆಸರಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಮೌಲಿಕ ಪ್ರಶಸ್ತಿ ನೀಡುವಂತಾಗಬೇಕು ಎಂದು ಅಕ್ಕಿಆಲೂರು ವಿರಕ್ತಮಠದ ಶಿವಬಸವ ಮಹಾಸ್ವಾಮಿಗಳು ಒತ್ತಾಯಿಸಿದರು.

ತಾಲೂಕಿನ ಕಾಡಶೆಟ್ಟಿಹಳ್ಳಿ ಗ್ರಾಮದಲ್ಲಿ ಲಿಂ|ಡಾ|ಪಂ|ಪಂಚಾಕ್ಷರಿ ಶಿವಯೋಗಿಗಳವರ 131ನೇ ಜಯಂತ್ಯುತ್ಸವದ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಗಾನಯೋಗಿ ಶಿವಯೋಗಿ ಪಂ.ಪಂಚಾಕ್ಷರಿ ಗವಾಯಿಗಳವರ ಸಾಂಸ್ಕೃತಿಕ ಹಾಗೂ ಸಾಹಿತ್ಯ ಕಲಾ ಸಂಘ ಸಂಯುಕ್ತವಾಗಿ ಆಯೋಜಿಸಿದ್ದ ಸಂಗೀತೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಕಾಡಶೆಟ್ಟಿಹಳ್ಳಿ ಎಂದಾಕ್ಷಣ ಪಂಚಾಕ್ಷರಿ ಗವಾಯಿಗಳವರ ಸಂಗೀತ ಸಾಧನೆ ಹಾಗೂ ಪುಟ್ಟರಾಜ ಕವಿ ಗವಾಯಿಗಳಂತಹ ಮೇಧಾವಿ ಸಂಗೀತಗಾರರ ನೆನಪಾಗುತ್ತದೆ. ಕುರುಡ, ಕುಂಟ, ವಿಕಲಚೇತನರು ಭಿಕ್ಷೆ ಬೇಡುತ್ತಿದ್ದ ಕಾಲ ಹೋಗಿ, ಭಕ್ತಿಯಿಂದ ಸಂಗೀತ ಅಭ್ಯಾಸ ಮಾಡಿ, ಆ ಮೂಲಕ ಬದುಕು ಅರಳಿಸಿಕೊಳ್ಳುವ ದಿವ್ಯ ಚೈತನ್ಯ ನೀಡಿದರು. “ಗುರುವಿನ ಗುರು ಮಹಾಗುರು’ ಎಂಬಂತೆ ಸಂಗೀತದ ಗುರುವಾಗಿ, ಆಧ್ಯಾತ್ಮದ ಶ್ರೇಷ್ಠ ಶಕ್ತಿಯಾಗಿ
ಹೊರಹೊಮ್ಮಿದ ಪಂಚಾಕ್ಷರಿ ಗವಾಯಿಗಳು ಜಗಮೆಚ್ಚಿದ ದಿವ್ಯ ಶಕ್ತಿ ಎಂದರು.

ಮಾಜಿ ಶಾಸಕ ಶಿವರಾಜ ಸಜ್ಜನರ ಮಾತನಾಡಿ, ಪಂ. ಪಂಚಾಕ್ಷರಿ ಗವಾಯಿಗಳ ಹೆಸರಿನಲ್ಲಿ ರಾಷ್ಟ್ರಮಟ್ಟದ ಸಂಗೀತೋತ್ಸವ ನಡೆಯುವಂತಾಗಬೇಕು. ಆ ಮೂಲಕ ವಿಶ್ವವಿಖ್ಯಾತ ಸಂಗೀತ ಕಲಾವಿದರನ್ನು ಪ್ರತಿ ವರ್ಷ ಪ್ರಶಸ್ತಿ ಸಹಿತ ಗೌರವಿಸುವಂತಾಗಬೇಕು. ಆ ಮೂಲಕ ಸಂಗೀತ ಕ್ಷೇತ್ರವನ್ನು ಇನ್ನಷ್ಟು ಶಕ್ತಿಯುತವಾಗಿಸುವ ಮಹತ್ಕಾರ್ಯ ಸರಕಾರಗಳಿಂದ ನಡೆಯಬೇಕಾಗಿದೆ. ಹಾನಗಲ್ಲ ತಾಲೂಕಿನ ಕಾಡಶೆಟ್ಟಿಹಳ್ಳಿಯಲ್ಲಿ ಪ್ರತಿ ವರ್ಷ ನಡೆಯುತ್ತಿರುವ ಸಂಗೀತೋತ್ಸವಕ್ಕೆ ಇನ್ನಷ್ಟು ಮೆರಗು ಬರುವಂತೆ ಸರಕಾರದಿಂದ ಅನುದಾನ ಒದಗಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಡಾ.ವೆಂಕಟೇಶ ಪೂಜಾರ, ಕಾಡಶೆಟ್ಟಿಹಳ್ಳಿ ಗ್ರಾಮದಲ್ಲಿ ಪ್ರತಿ ವರ್ಷ ಲಿಂ|ಡಾ|ಪಂ|ಪಂಚಾಕ್ಷರಿ ಶಿವಯೋಗಿಗಳ ಜಯಂತ್ಯುತ್ಸವವನ್ನು ಆಚರಿಸುತ್ತ ಬಂದಿದೆ. 131 ವರ್ಷ ಕಳೆದರೂ ಇದುವರೆಗೂ ಶಿವಯೊಗಿಗಳ ಹೆಸರಿನಲ್ಲಿ ಯಾವುದೇ ಪ್ರಶಸ್ತಿ ಘೋಷಣೆಯಾಗಿಲ್ಲ. ಅವರ ಹೆಸರಿನಲ್ಲಿ ರಾಷ್ಟ್ರಮಟ್ಟದ ಕಾರ್ಯಕ್ರಮಗಳಾಗಲಿ, ಸರಕಾರದಿಂದ ಜಯಂತ್ಯುತ್ಸವವಾಗಲಿ ಆಚರಿಸುತ್ತಿಲ್ಲ. ಸರಕಾರ ಕೂಡಲೇ ಗಮನ ಹರಿಸಿ ಇಂತಹ ಮಹಾತ್ಮರ ಜಯಂತಿ ಆಚರಿಸುವಂತಾಗಬೇಕು ಹಾಗೂ ಅವರ ಹೆಸರಿನಲ್ಲಿ ಉನ್ನತ ಪ್ರಶಸ್ತಿ ಘೋಷಿಸಬೇಕು ಎಂದರು.

ಅಕ್ಕಿಆಲೂರು ಮುತ್ತಿನಕಂತಿ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು, ಹೋತನಹಳ್ಳಿ ಶಂಭುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಕೂಡಲದ ಗುರು ಮಹೇಶ್ವರ ಸ್ವಾಮಿಗಳು ಭಾಗವಹಿಸಿದ್ದರು. ಕಲಾ ಸಂಘದ ಅಧ್ಯಕ್ಷ ದಾನಪ್ಪಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಸಾಂವಸಗಿ ಗ್ರಾಪಂ ಅಧ್ಯಕ್ಷ ಬಸವರಾಜ ಅಗಸನಹಳ್ಳಿ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಸಂಗೀತ ಸೇವೆ: ಡಾ|ಮೃತ್ಯುಂಜಯ ಅಗಡಿ, ಡಾ|ವೆಂಕಟೇಶ ಪೂಜಾರ, ಶಿವಬಸಯ್ಯ ಚರಂತಿಮಠ, ಬಸಯ್ಯ ಹಂಚಿನಾಳ, ರಾಘವೇಂದ್ರ ಭಜಂತ್ರಿ, ಬಸವಣ್ಯಯ್ಯಶಾಸ್ತ್ರಿ ವೆಂಕಟಾಪೂರಮಠ, ಶಿವಯ್ಯ ಇಟಗಿಮಠ, ಪ್ರಕಾಶ ಆನವಟ್ಟಿ, ಡಾ|ಪರಶುರಾಮ ಕಟ್ಟಿಸಂಗಾವಿ ಸಂಗೀತ ಸೇವೆ ಸಲ್ಲಿಸಿದರು.

ಪ್ರಶಸ್ತಿ: ಇದೇ ಸಂದರ್ಭದಲ್ಲಿ ಪ್ರತಿ ವರ್ಷದಂತೆ ಗಾನಯೋಗಿ ಲಿಂ.ಪಂಚಾಕ್ಷರಿ ಶಿವಯೋಗಿಗಳವರ ಕಲಾ ಸಂಘ ಕೊಡಮಾಡುವ ಕುಮಾರ ಪಂಚಾಕ್ಷರೇಶ್ವರ
ಪ್ರಶಸ್ತಿಯನ್ನು ಧಾರವಾಡದ ಅಂತಾರಾಷ್ಟ್ರೀಯ ಸಂಗೀತ ಕಲಾವಿದ ಡಾ|ಮೃತ್ಯುಂಜಯ ಅಗಡಿ ಅವರಿಗೆ ಪ್ರದಾನ ಮಾಡಿ, ಗೌರವಿಸಲಾಯಿತು.

 

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.