ಮಾವು ಬೆಳೆಗಾರನಿಗೆ ದಲ್ಲಾಳಿ-ಕರ್ಫ್ಯೂ ಶಾಕ್‌

ಸಂಕಷ್ಟದ ಸುಳಿಗೆ ಸಿಲುಕಿದ ರೈತ,  ­ಅನ್ನದಾತನಿಗೆ ಸಿಹಿ ಕೊಡಲಿಲ್ಲ ಮಾವು

Team Udayavani, May 17, 2021, 6:06 PM IST

18541155222230hnl2

ರವಿ ಲಕ್ಷ್ಮೇಶ್ವರ

ಹಾನಗಲ್ಲ: ದಲ್ಲಾಳಿಗಳ ಕೈಗೊಂಬೆಯಾಗಿರುವ ಮಾವು ಬೆಳೆದ ರೈತ, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ಸಂಕಷ್ಟದ ಸುಳಿಗೆ ಸಿಲುಕಿದ್ದಾನೆ.

ಹಾನಗಲ್ಲ ತಾಲೂಕಿನಲ್ಲಿ 3.5 ಸಾವಿರ ಹೆಕ್ಟೇರ್‌ನಷ್ಟು ಮಾವು ತೋಟಗಳಿವೆ. ಎರಡು ಮೂರು ದಶಕಗಳಿಂದ ಪೋಷಿಸಿಕೊಂಡು ನಾಲ್ಕಾರು ರೂ. ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದ ಮಾವು ಬೆಳೆಗಾರನ ಕನಸು ಹುಸಿಯಾಗಿ ಹತಾಶ ಸ್ಥಿತಿಗೆ ತಲುಪಿದ್ದಾನೆ. ದಲ್ಲಾಳಿಗಳ ಬಿಗಿ ಪಟ್ಟಿನ ಪೆಟ್ಟು ತಿಂದು ಕಂಗಾಲಾಗಿರುವುದು ಒಂದೆಡೆಯಾದರೆ, ಇನ್ನೊಂದೆಡೆ ಕೊರೊನಾ ಶಾಕ್‌ಗೆ ಸಂಚಲನವನ್ನೇ ಕಳೆದುಕೊಂಡಿದ್ದಾನೆ.

ತೋಟಗಾರಿಕೆ ಇಲಾಖೆ ಮಾವು ವಿಮೆ ವಿಷಯದಲ್ಲಿ ನಮ್ಮ ಪಾತ್ರವಿಲ್ಲ. ಅದು ಹವಾಮಾನ ಆಧಾರಿತ ವಿಮಾ ಪರಿಹಾರ ಎಂದು ಕೈ ಚೆಲ್ಲುತ್ತದೆ. ವಾಸ್ತವದ ಅರಿವು ತೋಟಗಾರಿಕೆ ಇಲಾಖೆಗಿದ್ದರೂ ಅಸಹಾಯಕವಾಗಿದೆ. ಕಳೆದ ವರ್ಷ ಇದೇ ರೀತಿ ಕೊರೊನಾ ಹಾಗೂ ದಲ್ಲಾಳಿಗಳ ಹೊಡೆತಕ್ಕೆ ಸಿಕ್ಕು ರೈತರು ಕಷ್ಟಪಟ್ಟು ಬೆಳೆದ ಮಾವು ತೋಟದಲ್ಲಿಯೇ ಕೊಳೆತು ಹೋಯಿತು. ಹಲವರು ಹತ್ತಾರು ವರ್ಷಗಳಿಂದ ಕಾಳಜಿಯಿಂದ ಬೆಳೆಸಿದ ಮಾವಿನ ಗಿಡಗಳನ್ನು ಕಡಿದು ಹಾಕಿದರು. ಇನ್ನೊಂದೆಡೆ ಮಾವಿನ ತೋಪಿನಲ್ಲಿಯೇ ಕೆಲವರು ಭವಿಷ್ಯದ ಆಶಾದಾಯಕ ಮನಸ್ಥಿತಿಯಿಂದ ಅಡಕೆ ಗಿಡ ನೆಟ್ಟಿದ್ದಾರೆ. ಆದರೆ, ಮಾವು ತೋಪಿನ ಆದಾಯವನ್ನೇ ನೆಚ್ಚಿಕೊಂಡವರಿಗೆ ಎರಡು ವರ್ಷ ಮೇಲೆಳಲಾರದ ಹೊಡೆದ ಬಿದ್ದಿದೆ. ಈ ನಡುವೆ ಕಳೆದ ವರ್ಷದ ಮಾವು ವಿಮೆಯಲ್ಲಿ ಭಾರೀ ಏರುಪೇರಾಗಿದೆ.

ತೋಟಗಾರಿಕಾ ಇಲಾಖೆಯಲ್ಲಿ ವಿಚಾರಿಸಿದರೆ, ಇದು ನಮ್ಮ ಕೈಯಲ್ಲಿಲ್ಲ ಎಂದು ಅಧಿಕಾರಿಗಳು ಕೈಚೆಲ್ಲುವುದು ಸಹಜವಾಗಿದೆ. ಅಕ್ಕಪಕ್ಕದ ಗ್ರಾಪಂಗಳಲ್ಲಿಯೇ ವಿಪರೀತ ವ್ಯತ್ಯಾಸ ಬೆಳೆ ವಿಮೆ ಕಂಪನಿಯಿಂದ ಆಗಿದೆ ಎಂಬ ಸತ್ಯ ಇಲಾಖೆಗೆ ಗೊತ್ತಿದೆ. ಹವಾಮಾನ ಆಧಾರಿತ ಎಂದು ಹೇಳುವ ತೋಟಗಾರಿಕೆ ಇಲಾಖೆಗೆ ವಾಸ್ತವ ತಿಳಿದಿದೆ. ಆದರೂ, ಕಣ್ಣಿದ್ದೂ ಜಾಣ ಕುರುಡುತನ ಪ್ರದರ್ಶಿಸುತ್ತಿದೆ. ಒಂದೇ ಮಳೆ ಮಾಪನ ಕೇಂದ್ರ, ಅದೇ ವಾತಾವರಣದಲ್ಲಿದ್ದ ಮಾವು ಬೆಳೆಗೆ ಭಾರೀ ಪ್ರಮಾಣದ ನಷ್ಟವಾದರೂ ಅತ್ಯಂತ ಕಡಿಮೆ ವಿಮೆ ಪರಿಹಾರ ಬಂದಿದೆ. ಈ ಬಗ್ಗೆ ರೈತ ಮಾತ್ರ ಅಸಹಾಯಕನಾಗಿದ್ದಾನೆ. ತೋಟಗಳು ಸಂಪೂರ್ಣ ಹಾಳಾಗಿದ್ದರೂ, ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ಬೆಳೆ ವಿಮೆ ಪರಿಹಾರ ದೊರೆಯತ್ತಿದೆ. ಪ್ರಸಕ್ತ ವರ್ಷ ಹತ್ತಾರು ಬಾರಿ ಮಳೆ ಬಂದು ಮಾವು ಫಸಲು ಪೂರ್ಣ ಪ್ರಮಾಣದಲ್ಲಿ ಕಲೆಯಾಗಿ ಕೆಟ್ಟು ಹೋಗಿದೆ. ಬೆಳೆಯ ಪ್ರಮಾಣವೂ ತೀರ ಕಡಿಮೆ. ಇದರ ನಡುವೆ ಮಾವು ಖರೀದಿಸುವವರೂ ರೈತರೊಂದಿಗೆ ಆಟವಾಡುತ್ತಿದ್ದಾರೆ.

ಬಾಯಿಗೆ ಬಂದ ಬೆಲೆಗೆ ಇರುವಷ್ಟು ಮಾವು ಮಾರಿ ರೈತರು ಊರಿಗೆ ಮರಳುತ್ತಿದ್ದಾರೆ. ಮಾವಿನ ಮಂಡಿಗಳ ಮಾಲೀಕರು ಒಂದು ಕೆ.ಜಿಗೆ 20 ರಿಂದ 25 ರೂ.ಗೆ ಖರೀದಿಸುತ್ತಿದ್ದಾರೆ. ಹಾಗಾಗಿ, ಬೇರೆ ದಾರಿ ಇಲ್ಲದೇ ರೈತ ಸೋತು ಹೋಗಿದ್ದಾನೆ. ಪ್ರಸಕ್ತ ವರ್ಷದ ಮಾವಿಗೆ ಬೆಳೆ ವಿಮೆ ಯಾವ ಪ್ರಮಾಣದಲ್ಲಿ ಬರಬಹುದು ಎಂಬ ಬಗ್ಗೆಯೂ ರೈತ ವಿಶ್ವಾಸ ಕಳೆದುಕೊಂಡಿದ್ದಾನೆ. ಕಳೆದ ವರ್ಷದ ತಾರತಮ್ಯ ಈ ವರ್ಷವೂ ಮುಂದುವರಿಯುವುದೇ? ಇಷ್ಟು ದೊಡ್ಡ ಪ್ರಮಾಣದಲ್ಲಿ ಮಾವು ಬೆಳೆ ಹಾನಿಯಾಗಿದ್ದರೂ ತೋಟಗಾರಿಕೆ ಇಲಾಖೆ ರೈತನ ಪರವಾಗಿ ಎಲ್ಲಿಯೂ ಸಹಾಯಕ್ಕೆ ಬಂದಿಲ್ಲ. ರೈತನ ಅಳಲು ಕೇಳಿಲ್ಲ. ಹವಾಮಾನ ಆಧಾರಿತ ಎಂಬ ಕಾರಣಕ್ಕೆ ಇಲಾಖೆ ಅಸಹಾಯಕ ಎಂದು ರೈತನೂ ಕೈಚೆಲ್ಲಿದ್ದಾನೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.