ಕಾರ್ಮಿಕರ ಸಹಾಯಧನ ಬಿಡುಗಡೆಗೆ ಮನೋಜ್ ಸೂಚನೆ
Team Udayavani, May 1, 2020, 6:57 PM IST
ಸಾಂದರ್ಭಿಕ ಚಿತ್ರ
ಹಾವೇರಿ: ಕಾರ್ಮಿಕರಿಗೆ ಸರ್ಕಾರ ಘೋಷಿಸಿರುವ ಎರಡು ಸಾವಿರ ರೂ. ನೆರವಿನ ಹಣವನ್ನು ತ್ವರಿತವಾಗಿ ಎಲ್ಲ ನೋಂದಾಯಿತ ಅರ್ಹ ಎಲ್ಲ ಕಾರ್ಮಿಕರ ಖಾತೆಗೆ ಜಮಾ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಸೂಚನೆ ನೀಡಿದರು. ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ನೋಂದಾಯಿತ 38 ಸಾವಿರ ಕಾರ್ಮಿಕರ ಪೈಕಿ ನಾಲ್ಕು ಸಾವಿರ ಕಾರ್ಮಿಕರಿಗೆ ಈಗಾಗಲೇ ಹಣ ಜಮೆಯಾಗಿದೆ. ಜಿಲ್ಲಾ ಕಚೇರಿಯಿಂದ ಎಲ್ಲರ ಮಾಹಿತಿಯನ್ನು ಕೇಂದ್ರ ಕಚೇರಿಗೆ ಒದಗಿಸಲಾಗಿದೆ. ಪರಿಶೀಲನೆ ನಂತರ ಕೇಂದ್ರ ಕಚೇರಿಯಿಂದಲೇ ನೇರವಾಗಿ ಕಾರ್ಮಿಕರ ಖಾತೆಗೆ ಹಣ ಜಮೆಯಾಗಲಿದೆ ಎಂದು ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ ಮಾಹಿತಿ ನೀಡಿದರು.
ಕಳಪೆ ಬಿತ್ತನೆ ಬೀಜ ದಾಸ್ತಾನು ಮಾಡಿದ ಕೋಲ್ಡ್ ಸ್ಟೋರೇಜ್ ಸೀಜ್ ಮಾಡಲಾಗಿದೆ. ಈ ಬೀಜಗಳನ್ನು ಬೇರೆಡೆ ಸ್ಥಳಾಂತರಿಸಿ ಕೋಲ್ಡ್ ಸ್ಟೋರೆಜ್ ಖಾಲಿ ಮಾಡಿಕೊಡಲು ಕೃಷಿ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು. ಚೆಕ್ಪೋಸ್ಟ್ ಚಟವಟಿಕೆ ಕುರಿತಂತೆ ಮಾಹಿತಿ ಪಡೆದ ಅವರು, ಪ್ರತಿ ವಾಹನಗಳ ಮೇಲೆ ತೀವ್ರ ನಿಗಾವಹಿಸಬೇಕೆಂದು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ, ಎಸ್ಪಿ ಕೆ.ಜಿ. ದೇವರಾಜು, ಜಿಪಂ ಸಿಇಒ ರಮೇಶ ದೇಸಾಯಿ, ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಹೆಚ್ಚುವರಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಇನ್ನಿತರ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ