ಎಂ.ಎಸ್‌. ಕಾಯ್ದೆ ಜಾರಿಗೆ ಸೂಚನೆ

ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸಲಹೆ

Team Udayavani, Apr 28, 2022, 2:14 PM IST

13

ಹಾವೇರಿ: ಕರ್ನಾಟಕ ರಾಜ್ಯ ಸೇರಿದಂತೆ ದೇಶದಲ್ಲಿ ಮ್ಯಾನ್ಯುಯಲ್‌ ಸ್ಕ್ಯಾವೆಂಜರ್ ನಿಷೇಧ ಕಾಯ್ದೆ ಜಾರಿಗೊಳಿಸಲಾಗಿದೆ. ಈ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅಧಿಕಾರಿಗಳು ಅನುಷ್ಠಾನಕ್ಕೆ ತರಬೇಕೆಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ. ಶಿವಣ್ಣ(ಕೋಟೆ) ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಆಯೋಜಿಸಲಾದ ಎಂ.ಎಸ್‌. ಕಾಯ್ದೆ ಮತ್ತು ನಿಯಮಗಳು-2013ರ ಅಂಶಗಳ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಈ ಕಾಯ್ದೆ ಕುರಿತಂತೆ ಪ್ರತಿಯೊಬ್ಬ ಅಧಿಕಾರಿಗಳು ಸ್ಪಷ್ಟವಾಗಿ ತಿಳಿವಳಿಕೆ ಹೊಂದುವುದು ಅಗತ್ಯವಾಗಿದೆ. ಈ ಹಿನ್ನೆಲೆಯೆಲ್ಲಿ ಕಾಯ್ದೆಯನ್ನು ಮನದಟ್ಟು ಮಾಡಿಕೊಡಲು ಕಾರ್ಯಾಗಾರ ಆಯೋಜಿಸಲಾಗಿದೆ.

ಮ್ಯಾನ್ಯುಯಲ್‌ ಸ್ಕ್ಯಾವೆಂಜರ್ ಪದ್ಧತಿ ನಡೆಯಬಾರದು ಎಂಬುದು ಸರ್ಕಾರದ ಉದ್ದೇಶವಾಗಿದೆ ಹಾಗೂ ಸಮಾಜ ಸುಧಾರಣೆಗೆ ಆಯೋಗ ರಚನೆ ಮಾಡಲಾಗಿದೆ. ಪೌರಕಾರ್ಮಿಕರು ಮಾಡುವ ಕೆಲಸ ಬೇರೆ ಯಾರೂ ಮಾಡಲು ಸಾಧ್ಯವಿಲ್ಲ. ಅಂತಹ ಕಟ್ಟಕಡೆಯ ವ್ಯಕ್ತಿಯನ್ನು ಮುಖ್ಯವಾಹಿನಿಗೆ ತರುವ ಕೆಲಸ ಆಯೋಗ ಮಾಡುತ್ತಿದೆ. ಪ್ರಧಾನ ಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳು ಪೌರಕಾರ್ಮಿಕರ ಬಗ್ಗೆ ಅಪಾರ ಕಾಳಜಿ ತೋರುತ್ತಾರೆ. ಅಧಿಕಾರಿಗಳು ಸಹ ನಿಯಮಾನುಸಾರ ಸರ್ಕಾರದ ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ಪ್ರೀತಿಯಿಂದ ಕಾಣಬೇಕು ಎಂದರು.

ಪ್ರಾತ್ಯಕ್ಷಿಕೆ ಮೂಲಕ ಆಯೋಗದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ರಘು ಅವರು ಮಾಹಿತಿ ನೀಡಿ, ಮಾನ್ಯುಯಲ್‌ ಸ್ಕ್ಯಾವೆಂಜರ್ ನಿಷೇಧ ಕಾಯ್ದೆಯನ್ನು (ಮಲಹೊರುವ ಪದ್ಧತಿ) 2013 ಸೆ. 18ರಿಂದ ಜಾರಿಗೆ ತರಲಾಗಿದೆ. ಅಧಿಕಾರಿಗಳು ಅನೈರ್ಮಲ್ಯ ಶೌಚಾಲಯಗಳನ್ನು ಗುರುತಿಸಬೇಕು ಹಾಗೂ ಉನ್ನತ ತಂತ್ರಜ್ಞಾನ ಅಳವಡಿಸಬೇಕು. ಅವೈಜ್ಞಾನಿಕ ಶೌಚಾಲಯಗಳಿದ್ದರೆ ಅವುಗಳನ್ನು ನೆಲಸಮ ಮಾಡಬೇಕು. ಮಲವನ್ನು ಚರಂಡಿಗೆ ಬಿಡುವುದು ಹಾಗೂ ಬಯಲು ಶೌಚಾಲಯ ಗುರುತಿಸಬೇಕು. ನೈರ್ಮಲ್ಯ ಶೌಚಾಲಯವಾಗಿ ಪರಿವರ್ತಿಸಬೇಕು. ಸೆಪ್ಟಿಕ್‌ ಟ್ಯಾಂಕ್‌ ಸ್ವತ್ಛತೆಗೆ ನಿಯೋಜಿತರು 10 ಲಕ್ಷ ವಿಮೆ ಹೊಂದಿರಬೇಕು ಹಾಗೂ 40 ಸುರಕ್ಷಾ ಪರಿಕರಗಳನ್ನು ಹೊಂದಿರಬೇಕು. ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಮಾನ್ಯುಯಲ್‌ ಸ್ಕ್ಯಾವೆಂಜರ್ ಪದ್ಧತಿಯಲ್ಲಿ ತೊಡಗಿದ್ದರೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ನೇರ ಹೊಣೆಗಾರರಾಗುತ್ತಾರೆ ಎಂದರು.

ಮ್ಯಾನ್ಯುಯಲ್‌ ಸ್ಕ್ಯಾವೆಂಜರ್ ಕಾರ್ಯಕ್ಕೆ ಖಾಸಗಿಯಾಗಿ ಕಾರ್ಮಿಕರ ನಿಯೋಜನೆ ಮಾಡಿದರೆ ದಂಡ ಹಾಗೂ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಮಾನ್ಯುಯಲ್‌ ಸ್ಕ್ಯಾವೆಂಜರ್ ಕೆಲಸದಿಂದ ವಿಮುಕ್ತಗೊಳಿಸಬೇಕು ಹಾಗೂ ಅವರಿಗೆ ಪುನರ್ವಸತಿ ಕಲ್ಪಿಸಬೇಕು. ಗುರುತಿನ ಚೀಟಿ(ಐಡಿ ಕಾರ್ಡ್‌) ನೀಡಬೇಕು, ವೃತ್ತಿಪರ ಕೌಶಲ ತರಬೇತಿ ನೀಡಬೇಕು. ಸಹಾಯಧನ ಸೌಲಭ್ಯ ಒದಗಿಸಬೇಕು. ಅವರ ಮಕ್ಕಳಿಗೆ ಸರ್ಕಾರ ಗುರುತಿಸಿದ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ ಕಲ್ಪಿಸಬೇಕು. ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ವಿವಿಧ ಸೌಲಭ್ಯ ಒದಗಿಸಬೇಕು ಎಂದು ತಿಳಿಸಿದರು.

ರಾಜ್ಯದಲ್ಲಿ ಈವರೆಗೆ 93 ಮ್ಯಾನ್ಯುಯಲ್‌ ಸ್ಕ್ಯಾವೆಂಜರ್ ಗಳು ಮರಣ ಹೊಂದಿದ್ದಾರೆ. ಹಾಗಾಗಿ ಯಂತ್ರಗಳ ಮೂಲಕವೇ ಶೌಚಾಲಯ ಗುಂಡಿಗಳನ್ನು ಸ್ವತ್ಛಗೊಳಿಸಬೇಕು. ಈ ಕುರಿತು ಅರಿವು ಮೂಡಿಸಬೇಕು. ಸರ್ಕಾರದ ಯೋಜನೆಗಳ ಕುರಿತು ತಿಳಿವಳಿಕೆ ನೀಡಬೇಕು. ಬದುಕು ಬವಣೆ ಎಂಬ ಸಾಕ್ಷ್ಯ ಚಿತ್ರ ಬಿಡುಗಡೆ ಮಾಡಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈ ಸಾಕ್ಷ್ಯಚಿತ್ರ ತೋರಿಸಿ ಜಾಗೃತಿ ಮೂಡಿಸಬೇಕು. ಕಾಯ್ದೆ ಉಲ್ಲಂಘನೆಯಾಗದಂತೆ ಜಾಗೃತಿ ವಹಿಸಬೇಕು ಹಾಗೂ ಸಫಾಯಿ ಕರ್ಮಚಾರಿಗಳು ಮ್ಯಾನ್ಯುಯಲ್‌ ಸ್ಕ್ಯಾವೆಂಜರ್ ಗಳು ಅಲ್ಲ ಎಂದು ಹೇಳಿದರು.

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಚಂದ್ರಕಲಾ, ಅಪರ ಜಿಲ್ಲಾಧಿಕಾರಿ ಡಾ| ಎನ್‌. ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಸೋಮಶೇಖರ ಮುಳ್ಳಳ್ಳಿ, ಉಪವಿಭಾಗಾಧಿಕಾರಿಗಳಾದ ಅನ್ನಪೂರ್ಣ ಮುದಕಮ್ಮನವರ, ಶಿವಾನಂದ ಉಳ್ಳಾಗಡ್ಡಿ, ಡಿವೈಎಸ್‌ಪಿ ಶಂಕರ ಮಾರಿಹಾಳ ಇದ್ದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ ಹೆಬ್ಬಳ್ಳಿ ಸ್ವಾಗತಿಸಿದರು.

ಸೆಪ್ಟಿಕ್‌ ಟ್ಯಾಂಕ್‌ಗಳ ಸ್ವತ್ಛತೆ ಸಂದರ್ಭದಲ್ಲಿ ಮರಣಗಳು ಸಂಭವಿಸುತ್ತಿದ್ದು, ಇಂತಹ ಘಟನೆಗಳು ನಡೆದರೆ ತಪ್ಪಿತಸ್ಥರ ಮೇಲೆ ಕಾನೂನು ಪ್ರಕಾರ ಸೂಕ್ತ ಕ್ರಮಕೈಗೊಳ್ಳಲು ಆಯೋಗಕ್ಕೆ ಅವಕಾಶವಿದೆ. ಕೆಲವು ಪ್ರಕರಣಗಳಲ್ಲಿ ಸಂಬಂಧಿಸಿದವರಿಗೆ ದಂಡ ವಿಧಿಸಲಾಗಿದೆ ಹಾಗೂ ಶಿಕ್ಷೆಗೆ ಗುರಿಪಡಿಸಲಾಗಿದೆ. ರಾಣೆಬೆನ್ನೂರ ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗೆ ಎರಡು ಲಕ್ಷ ರೂ. ದಂಡ ವಿಧಿಸಲಾಗಿದೆ. ಇಂತಹ ಪ್ರಕರಣಗಳಲ್ಲಿ ಅಧಿಕಾರಿಗಳ ಬೇಜವಾಬ್ದಾರಿ ಸಹಿಸುವುದಿಲ್ಲ. -ಎಂ.ಶಿವಣ್ಣ(ಕೋಟೆ), ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.